AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಸೇವೆ ಸಲ್ಲಿಸಿದ್ದ ಕಮಲಾ ಹ್ಯಾರಿಸ್ ತಾತ! ಹಲವು ಬಾರಿ ಭಾರತಕ್ಕೆ ಬಂದಿದ್ದ ಕಮಲಾ..

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಜೊತೆಗೆ ಜೋರಾಗೇ ಕೇಳಿ ಬರುತ್ತಿರುವ ಹೆಸರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರದು. ಕಮಲಾ ಭಾರತೀಯ ಮೂಲದವರು, ಅವರ ತಾಯಿ ಶ್ಯಾಮಲಾ ಗೋಪಾಲನ್ ತಮಿಳುನಾಡಿನವರು ಎಂಬುದು ಹಲವರು ತಿಳಿದಿರಬಹುದಾದ ವಿಚಾರ. ಕಮಲಾ ಕುರಿತು ಭಾರತೀಯರು ತಿಳಿದುಕೊಳ್ಳಬೇಕಾದ ಮತ್ತಷ್ಟು ವಿಷಯಗಳಿವೆ. ಅದರಲ್ಲಿ ಪ್ರಮುಖವಾದದ್ದು ಕಮಲಾ ತಾತ ಪಿ.ವಿ. ಗೋಪಾಲನ್ ಅವರು ಭಾರತಕ್ಕೆ ಸೇವೆ ಸಲ್ಲಿಸಿರುವ ವಿಚಾರಗಳು. ಕಮಲಾ ಹ್ಯಾರಿಸ್ ತಾತ ಪೈಂಗನಾಡು ವೆಂಕಟರಮಣ್ ಗೋಪಾಲನ್ ಅವರು 1911ರಲ್ಲಿ ಬ್ರಿಟೀಷ್ ಭಾರತದ, ಮದ್ರಾಸ್ ಪ್ರೆಸಿಡೆನ್ಸಿಯಲ್ಲಿ […]

ಭಾರತಕ್ಕೆ ಸೇವೆ ಸಲ್ಲಿಸಿದ್ದ ಕಮಲಾ ಹ್ಯಾರಿಸ್ ತಾತ! ಹಲವು ಬಾರಿ ಭಾರತಕ್ಕೆ ಬಂದಿದ್ದ ಕಮಲಾ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 09, 2020 | 3:41 PM

Share

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಜೊತೆಗೆ ಜೋರಾಗೇ ಕೇಳಿ ಬರುತ್ತಿರುವ ಹೆಸರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರದು. ಕಮಲಾ ಭಾರತೀಯ ಮೂಲದವರು, ಅವರ ತಾಯಿ ಶ್ಯಾಮಲಾ ಗೋಪಾಲನ್ ತಮಿಳುನಾಡಿನವರು ಎಂಬುದು ಹಲವರು ತಿಳಿದಿರಬಹುದಾದ ವಿಚಾರ. ಕಮಲಾ ಕುರಿತು ಭಾರತೀಯರು ತಿಳಿದುಕೊಳ್ಳಬೇಕಾದ ಮತ್ತಷ್ಟು ವಿಷಯಗಳಿವೆ. ಅದರಲ್ಲಿ ಪ್ರಮುಖವಾದದ್ದು ಕಮಲಾ ತಾತ ಪಿ.ವಿ. ಗೋಪಾಲನ್ ಅವರು ಭಾರತಕ್ಕೆ ಸೇವೆ ಸಲ್ಲಿಸಿರುವ ವಿಚಾರಗಳು.

ಕಮಲಾ ಹ್ಯಾರಿಸ್ ತಾತ ಪೈಂಗನಾಡು ವೆಂಕಟರಮಣ್ ಗೋಪಾಲನ್ ಅವರು 1911ರಲ್ಲಿ ಬ್ರಿಟೀಷ್ ಭಾರತದ, ಮದ್ರಾಸ್ ಪ್ರೆಸಿಡೆನ್ಸಿಯಲ್ಲಿ ಜನಿಸಿದರು. ಬ್ರಿಟೀಷ್ ಆಳ್ವಿಕೆಯ ಸಂದರ್ಭ ಇಂಪೀರಿಯಲ್ ಸೆಕ್ರೆಟರಿಯೆಟ್ ಸರ್ವೀಸ್ ನಲ್ಲಿ ಸೇವೆ ಸಲ್ಲಿಸಿದ ಬಳಿಕ ಸೆಂಟ್ರಲ್ ಸೆಕ್ರೆಟರಿಯೆಟ್ ಸರ್ವೀಸ್ ನಲ್ಲಿ ತೊಡಗಿಸಿಕೊಂಡಿದ್ದ ಅವರು, 1950ರಲ್ಲಿ ಭಾರತ ಸರ್ಕಾರದ ಭೂ ಸಾರಿಗೆ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದರು.

ನಂತರ ಪೂರ್ವ ಪಾಕಿಸ್ತಾನದ (ಈಗಿನ ಬಾಂಗ್ಲಾದೇಶ) ನಿರಾಶ್ರಿತರ ಪುನರ್ವಸತಿ ಕಾರ್ಯಕ್ಕಾಗಿ ಭಾರತದಲ್ಲಿ ಸೇವೆ ಸಲ್ಲಿಸಿದರು. ಹೀಗೆ ಒಂದೊಂದೇ ಮೆಟ್ಟಿಲುಗಳನ್ನು ಏರುತ್ತಾ, ಭಾರತ ಸರ್ಕಾರದ ಕಾರ್ಮಿಕ, ಉದ್ಯೋಗ ಮತ್ತು ಪುನರ್ವಸತಿ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಶ್ರಮಿಸಿದರು. ಬಳಿಕ ದಕ್ಷಿಣ ಆಫ್ರಿಕಾ ಭಾಗದ ಜಾಂಬಿಯಾ ಎಂಬ ದೇಶದಲ್ಲಿ ಈಗಿನ ಜಿಂಬಾಬ್ವೆಯ ನಿರಾಶ್ರಿತರ ಮತ್ತು ಅವರ ಪರಿಹಾರ ಯೋಜನೆಗಳ ನಿರ್ದೇಶಕರಾಗಿ ದುಡಿದರು. ಬಳಿಕ 1998ರಲ್ಲಿ ತಮಿಳುನಾಡಿನಲ್ಲಿ ನಿಧನ ಹೊಂದಿದರು.

ಈಗ ಅಮೆರಿಕದ ಉಪಾಧ್ಯಕ್ಷೆಯಾಗಲಿರುವ ಕಮಲಾ ಹ್ಯಾರಿಸ್, ಇದೇ ಪಿ.ವಿ. ಗೋಪಾಲನ್ ಅವರ ಹಿರಿಯ ಪುತ್ರಿ ಶ್ಯಾಮಲಾ ಗೋಪಾಲನ್ ಮಗಳು. ಈ ಹಿನ್ನೆಲೆಯಲ್ಲಿ ತವರಿನ ನಂಟು ಕಮಲಾಗೆ ಇರುವುದು ಭಾರತಕ್ಕೆ ಧನಾತ್ಮಕ ಅಂಶವಾಗಿ ಕಾಣಿಸಿಕೊಂಡಿದೆ.

ಬಾಲ್ಯದಲ್ಲಿ ಹಿಂದೂ ದೇವಾಲಯಕ್ಕೂ ಹೋಗುತ್ತಿದ್ದರಂತೆ ಕಮಲಾ ಹ್ಯಾರಿಸ್! ಕಮಲಾ ಹ್ಯಾರಿಸ್ ತನ್ನ ಬಾಲ್ಯದಲ್ಲಿ ಹಲವು ಬಾರಿ ಚೆನ್ನೈಗೆ ಭೇಟಿ ಕೊಟ್ಟಿದ್ದು, ಅಮೆರಿಕದಲ್ಲಿ ತಮ್ಮ ನಿವಾಸದ ಸಮೀಪದ ಹಿಂದೂ ದೇವಾಲಯಕ್ಕೆ ಭೇಟಿ ನೀಡುತ್ತಿದ್ದದ್ದು, ಭಾರತದ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿರುವ ಸಾಧ್ಯತೆಯನ್ನು ಸೂಚಿಸಿದೆ. ಕಮಲಾ ತಾತ ಗೋಪಾಲನ್ ಅವರು ಭಾರತದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕಾರಣ ಕಮಲಾಗೂ ಭಾರತದ ಮೇಲೆ ಹೆಚ್ಚಿನ ಒಲವು ಇರಬಹುದು ಎಂದು ತಿಳಿಯಬಹುದಾಗಿದೆ. ಒಟ್ಟಿನಲ್ಲಿ ಡೆಮಾಕ್ರಟಿಕ್ ಪಕ್ಷದ ಗೆಲುವು ಭಾರತಕ್ಕೆ ವರವಾಗಿ ಪರಿಣಮಿಸಲಿ, ಭಾರತ-ಅಮೆರಿಕ ಸಂಬಂಧ ಬಲಗೊಳ್ಳಲಿ ಎಂಬ ನಿರೀಕ್ಷೆ ಭಾರತೀಯರದ್ದು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್