Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಹಿಂದೂಗಳ ರಕ್ಷಣೆಯ ಪ್ರತಿಜ್ಞೆ; ಭಾರತದೊಂದಿಗಿನ ಸಂಬಂಧ ಬಿಗಿಗೊಳಿಸುವುದಾಗಿ ಟ್ರಂಪ್ ಘೋಷಣೆ

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಭರದಿಂದ ಸಾಗುತ್ತಿದೆ. ಈ ವೇಳೆ ತಮ್ಮ ಪ್ರತಿಸ್ಪರ್ಧಿಯಾಗಿರುವ ಕಮಲಾ ಹ್ಯಾರಿಸ್ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಡೊನಾಲ್ಡ್ ಟ್ರಂಪ್, ಕಮಲಾ ಹ್ಯಾರಿಸ್ ಹಿಂದೂಗಳನ್ನು ನಿರ್ಲಕ್ಷ್ಯಿಸಿದ್ದಾರೆ. ನಾನು ಅಮೆರಿಕದ ಹಿಂದೂಗಳ ರಕ್ಷಣೆಗೆ ಪ್ರತಿಜ್ಞೆ ಮಾಡುತ್ತೇನೆ ಮತ್ತು ಭಾರತದ ಪ್ರಧಾನಿ ಮೋದಿಯೊಂದಿಗಿನ ಸಂಬಂಧವನ್ನು ಇನ್ನಷ್ಟು ಉತ್ತಮಗೊಳಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಅಮೆರಿಕದ ಹಿಂದೂಗಳ ರಕ್ಷಣೆಯ ಪ್ರತಿಜ್ಞೆ; ಭಾರತದೊಂದಿಗಿನ ಸಂಬಂಧ ಬಿಗಿಗೊಳಿಸುವುದಾಗಿ ಟ್ರಂಪ್ ಘೋಷಣೆ
ಟ್ರಂಪ್
Follow us
ಸುಷ್ಮಾ ಚಕ್ರೆ
|

Updated on: Nov 01, 2024 | 8:37 AM

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ತಮ್ಮ ಪ್ರತಿಸ್ಪರ್ಧಿಯಾಗಿರುವ ಕಮಲಾ ಹ್ಯಾರಿಸ್ ವಿರುದ್ಧ ವಾಗ್ದಾಳಿ ನಡೆಸಲು ಹಿಂದೂ ಪರ ತಂತ್ರವನ್ನು ಬಳಸಿದ್ದಾರೆ. ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಪ್ರಪಂಚದಾದ್ಯಂತ ಹಿಂದೂಗಳನ್ನು ಕಡೆಗಣಿಸಿದ್ದಾರೆ. ಹಿಂದೂ ಅಮೆರಿಕನ್ನರತ್ತ ಗಮನ ಹರಿಸಲು ವಿಫಲರಾಗಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ದೀಪಾವಳಿಯ ಸಂದರ್ಭದಲ್ಲಿ ಜಗತ್ತಿನಾದ್ಯಂತ ಇರುವ ಹಿಂದೂಗಳಿಗೆ ಶುಭ ಹಾರೈಸಿದ್ದಾರೆ. ಹಾಗೇ, ಬಾಂಗ್ಲಾದೇಶದ ಹಿಂದೂಗಳು ಎದುರಿಸುತ್ತಿರುವ ದೌರ್ಜನ್ಯಗಳನ್ನು ಟ್ರಂಪ್ ಖಂಡಿಸಿದ್ದಾರೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಬಾಂಗ್ಲಾದೇಶ ಸಾಮಾಜಿಕ ಅಶಾಂತಿಯನ್ನು ಅನುಭವಿಸುತ್ತಿದೆ. ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವನ್ನು ಸ್ಥಾಪಿಸಲಾಗಿದೆ ಆದರೆ ಬಾಂಗ್ಲಾದೇಶದ ಹಿಂದೂಗಳು, ಕ್ರಿಶ್ಚಿಯನ್ನರು, ಆದಿವಾಸಿಗಳು ಮತ್ತು ಗುಡ್ಡಗಾಡು ಬುಡಕಟ್ಟುಗಳ ಮೇಲಿನ ಇಸ್ಲಾಮಿಸ್ಟ್ ದಾಳಿಗಳನ್ನು ಪರಿಹರಿಸಲು ಹೆಣಗಾಡುತ್ತಿದೆ.

ಇದನ್ನೂ ಓದಿ: ಮೋದಿ ಅತ್ಯಂತ ಒಳ್ಳೆ ಮನುಷ್ಯ; “ಗೆಳೆಯ”ನನ್ನು ಹೊಗಳಿದ ಡೊನಾಲ್ಡ್ ಟ್ರಂಪ್

ಈ ಹಿನ್ನೆಲೆಯಲ್ಲಿ ಹಿಂದೂ ಅಮೆರಿಕನ್ನರನ್ನು ಧಾರ್ಮಿಕ ವಿರೋಧಿ ಅಜೆಂಡಾಗಳಿಂದ ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿರುವ ಟ್ರಂಪ್ ಮುಂಬರುವ ಚುನಾವಣೆಯಲ್ಲಿ ಗೆದ್ದರೆ ತಮ್ಮ “ಉತ್ತಮ ಸ್ನೇಹಿತ” ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಯುಎಸ್-ಭಾರತ ಸಂಬಂಧವನ್ನು ಬಲಪಡಿಸುವುದಾಗಿ ಭರವಸೆ ನೀಡಿದರು. “ನಾವು ನಿಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತೇವೆ. ನನ್ನ ಅಧಿಕಾರದಲ್ಲಿ ಆಡಳಿತ ಉತ್ತಮವಾಗಿರುತ್ತದೆ. ನಾವು ಭಾರತ ಮತ್ತು ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ನಮ್ಮ ಉತ್ತಮ ಪಾಲುದಾರಿಕೆಯನ್ನು ಬಲಪಡಿಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ.

“ಬಾಂಗ್ಲಾದೇಶದಲ್ಲಿ ಜನಸಮೂಹದಿಂದ ದಾಳಿ ಮತ್ತು ಲೂಟಿಗೆ ಒಳಗಾಗುತ್ತಿರುವ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಅನಾಗರಿಕ ಹಿಂಸಾಚಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ, ಇದು ಒಟ್ಟಾರೆ ಅವ್ಯವಸ್ಥೆಯ ಸ್ಥಿತಿಯಲ್ಲಿಯೇ ಉಳಿದಿದೆ” ಎಂದು ಮುಂಬರುವ ನವೆಂಬರ್ 5 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ವಿರುದ್ಧ ನೀಲಿಚಿತ್ರ ತಾರೆಯರಿಂದ ‘ಹ್ಯಾಂಡ್ಸ್ ಆಫ್ ಮೈ ಪೋರ್ನ್’ ಅಭಿಯಾನ ಆರಂಭ

ಟ್ರಂಪ್ ತಾವು ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2017 ರಿಂದ 2020 ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಶ್ವೇತಭವನದಲ್ಲಿ ದೀಪಾವಳಿಯನ್ನು ಆಚರಿಸಿದರು. ಮಾಜಿ ಪ್ರಥಮ ಮಹಿಳೆ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಮತ್ತು ಮಗಳು ಇವಾಂಕಾ ಟ್ರಂಪ್ ಕೂಡ ಅವರೊಂದಿಗೆ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​