Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್

ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.

ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್
ನೀರಜ್​ ಪಾಟೀಲ್
Follow us
ನಯನಾ ರಾಜೀವ್
|

Updated on:Jul 18, 2024 | 3:38 PM

ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್(Dr. Neeraj Patil) ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಲೇಬರ್ ಪಾರ್ಟಿ ಪ್ರಧಾನ ಕಾರ್ಯದರ್ಶಿ ಡೇವಿಡ್ ಇವಾನ್ಸ್​ ತಿಳಿಸಿದ್ದಾರೆ.

ಜುಲೈ 15ರಂದು ಹೊರಡಿಸಿರುವ ಪತ್ರದಲ್ಲಿ ಅಪಘಾತ ಹಾಗೂ ತುರ್ತು ವೈದ್ಯಕೀಯ ಸಲಹೆಗಾರರಾದ ಡಾ. ನೀರಜ್ ಪಾಟೀಲ್ ಕಳೆದ 20 ವರ್ಷಗಳಿಂದ ಸಕ್ರಿಯವಾಗಿ ಕಾರ್ಮಿಕ ಪಕ್ಷದ ಸದಸ್ಯರಾಗಿದ್ದಾರೆ. ಸೇಂಟ್ ಥಾಮಸ್ ಆಸ್ಪತ್ರೆ ಕಿಂಗ್ಸ್​ ಕಾಲೇಜು ಆಸ್ಪತ್ರೆಯ ಫೌಂಡೇಷನ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಲಂಡನ್‌ ಥೇಮ್ಸ್‌ ನದಿ ದಡದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನೀರಜ್‌ ಪಾಟೀಲ್‌ ಪ್ರಮುಖ ಕಾರಣವಾಗಿದ್ದರು. ಕೊರೊನಾ ಸೋಂಕು ತಗುಲಿದ ಮೇಲೆ ಭಾವನಾತ್ಮಕ ಪತ್ರ ಬರೆದು ಜಗತ್ತಿನ ಗಮನ ಸೆಳೆದಿದ್ದರು.

ಇಂಗ್ಲೆಂಡ್‌ನ ಲ್ಯಾಂಬೆತ್‌ ನಗರದಲ್ಲಿ ಮೇಯರ್‌ ಆಗಿ ನೀರಜ್‌ ಪಾಟೀಲ್‌ ಕಾರ್ಯನಿರ್ವಹಿಸಿದ್ದಾರೆ. ನೀರಜ್ ಪಾಟೀಲ್ ಎಂಟು ವರ್ಷಗಳ ಕಾಲ ಲ್ಯಾಂಬೆತ್ ಕೌನ್ಸಿಲ್​ನಲ್ಲಿ ಸೇವೆ ಸಲ್ಲಿಸಿದ್ದರು, 2015ರಲ್ಲಿ ಬ್ರಿಟಿಷ್ ಸಂಸತ್ತಿನ ಎದುರು ಬಸವೇಶ್ವರ ಪ್ರತಿಮೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರತಿಮೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Wed, 17 July 24

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ