AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್

ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.

ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್
ನೀರಜ್​ ಪಾಟೀಲ್
ನಯನಾ ರಾಜೀವ್
|

Updated on:Jul 18, 2024 | 3:38 PM

Share

ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್(Dr. Neeraj Patil) ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಲೇಬರ್ ಪಾರ್ಟಿ ಪ್ರಧಾನ ಕಾರ್ಯದರ್ಶಿ ಡೇವಿಡ್ ಇವಾನ್ಸ್​ ತಿಳಿಸಿದ್ದಾರೆ.

ಜುಲೈ 15ರಂದು ಹೊರಡಿಸಿರುವ ಪತ್ರದಲ್ಲಿ ಅಪಘಾತ ಹಾಗೂ ತುರ್ತು ವೈದ್ಯಕೀಯ ಸಲಹೆಗಾರರಾದ ಡಾ. ನೀರಜ್ ಪಾಟೀಲ್ ಕಳೆದ 20 ವರ್ಷಗಳಿಂದ ಸಕ್ರಿಯವಾಗಿ ಕಾರ್ಮಿಕ ಪಕ್ಷದ ಸದಸ್ಯರಾಗಿದ್ದಾರೆ. ಸೇಂಟ್ ಥಾಮಸ್ ಆಸ್ಪತ್ರೆ ಕಿಂಗ್ಸ್​ ಕಾಲೇಜು ಆಸ್ಪತ್ರೆಯ ಫೌಂಡೇಷನ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಲಂಡನ್‌ ಥೇಮ್ಸ್‌ ನದಿ ದಡದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನೀರಜ್‌ ಪಾಟೀಲ್‌ ಪ್ರಮುಖ ಕಾರಣವಾಗಿದ್ದರು. ಕೊರೊನಾ ಸೋಂಕು ತಗುಲಿದ ಮೇಲೆ ಭಾವನಾತ್ಮಕ ಪತ್ರ ಬರೆದು ಜಗತ್ತಿನ ಗಮನ ಸೆಳೆದಿದ್ದರು.

ಇಂಗ್ಲೆಂಡ್‌ನ ಲ್ಯಾಂಬೆತ್‌ ನಗರದಲ್ಲಿ ಮೇಯರ್‌ ಆಗಿ ನೀರಜ್‌ ಪಾಟೀಲ್‌ ಕಾರ್ಯನಿರ್ವಹಿಸಿದ್ದಾರೆ. ನೀರಜ್ ಪಾಟೀಲ್ ಎಂಟು ವರ್ಷಗಳ ಕಾಲ ಲ್ಯಾಂಬೆತ್ ಕೌನ್ಸಿಲ್​ನಲ್ಲಿ ಸೇವೆ ಸಲ್ಲಿಸಿದ್ದರು, 2015ರಲ್ಲಿ ಬ್ರಿಟಿಷ್ ಸಂಸತ್ತಿನ ಎದುರು ಬಸವೇಶ್ವರ ಪ್ರತಿಮೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರತಿಮೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Wed, 17 July 24

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್