AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್

ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.

ಯುಕೆಯ ಲೇಬರ್​ ಪಾರ್ಟಿಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದ ಕನ್ನಡಿಗ ಡಾ. ನೀರಜ್ ಪಾಟೀಲ್
ನೀರಜ್​ ಪಾಟೀಲ್
ನಯನಾ ರಾಜೀವ್
|

Updated on:Jul 18, 2024 | 3:38 PM

Share

ಲಂಡನ್​ನ ಮಾಜಿ ಮೇಯರ್​ ಡಾ. ನೀರಜ್ ಪಾಟೀಲ್(Dr. Neeraj Patil) ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಲೇಬರ್ ಪಾರ್ಟಿ ಪ್ರಧಾನ ಕಾರ್ಯದರ್ಶಿ ಡೇವಿಡ್ ಇವಾನ್ಸ್​ ತಿಳಿಸಿದ್ದಾರೆ.

ಜುಲೈ 15ರಂದು ಹೊರಡಿಸಿರುವ ಪತ್ರದಲ್ಲಿ ಅಪಘಾತ ಹಾಗೂ ತುರ್ತು ವೈದ್ಯಕೀಯ ಸಲಹೆಗಾರರಾದ ಡಾ. ನೀರಜ್ ಪಾಟೀಲ್ ಕಳೆದ 20 ವರ್ಷಗಳಿಂದ ಸಕ್ರಿಯವಾಗಿ ಕಾರ್ಮಿಕ ಪಕ್ಷದ ಸದಸ್ಯರಾಗಿದ್ದಾರೆ. ಸೇಂಟ್ ಥಾಮಸ್ ಆಸ್ಪತ್ರೆ ಕಿಂಗ್ಸ್​ ಕಾಲೇಜು ಆಸ್ಪತ್ರೆಯ ಫೌಂಡೇಷನ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಲಂಡನ್‌ ಥೇಮ್ಸ್‌ ನದಿ ದಡದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನೀರಜ್‌ ಪಾಟೀಲ್‌ ಪ್ರಮುಖ ಕಾರಣವಾಗಿದ್ದರು. ಕೊರೊನಾ ಸೋಂಕು ತಗುಲಿದ ಮೇಲೆ ಭಾವನಾತ್ಮಕ ಪತ್ರ ಬರೆದು ಜಗತ್ತಿನ ಗಮನ ಸೆಳೆದಿದ್ದರು.

ಇಂಗ್ಲೆಂಡ್‌ನ ಲ್ಯಾಂಬೆತ್‌ ನಗರದಲ್ಲಿ ಮೇಯರ್‌ ಆಗಿ ನೀರಜ್‌ ಪಾಟೀಲ್‌ ಕಾರ್ಯನಿರ್ವಹಿಸಿದ್ದಾರೆ. ನೀರಜ್ ಪಾಟೀಲ್ ಎಂಟು ವರ್ಷಗಳ ಕಾಲ ಲ್ಯಾಂಬೆತ್ ಕೌನ್ಸಿಲ್​ನಲ್ಲಿ ಸೇವೆ ಸಲ್ಲಿಸಿದ್ದರು, 2015ರಲ್ಲಿ ಬ್ರಿಟಿಷ್ ಸಂಸತ್ತಿನ ಎದುರು ಬಸವೇಶ್ವರ ಪ್ರತಿಮೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರತಿಮೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:12 pm, Wed, 17 July 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ