AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕಾಗಿ ಶಬರಿಯಂತೆ ಕಾದಿದ್ದ ವಿದೇಶಿ ಕನ್ನಡಿಗರು ಸಂಭ್ರಮ ಹಂಚಿಕೊಂಡಿದ್ದು ಹೀಗೆ

ವರ್ಷಾನುಗಟ್ಟಲೆಯಿಂದ ಜಗತ್ತಿನಾದ್ಯಂತ ಶಬರಿಯಂತೆ ಕಾದುಕುಳಿತಿದ್ದ ಕೋಟ್ಯಂತರ ರಾಮ ಭಕ್ತರಿಗೆ ಇಂದು ನಿಜಕ್ಕೂ ಸುದಿನ. ರಾಮ ನಾಮ ಜಪದಲ್ಲಿದ್ದವರಿಗೆ ಪಾಯಸ ಸವಿದಂತಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮ ಸ್ಥಳದಲ್ಲಿ ರಾಮ ಮಂದಿರ ಪುನರ್​ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆ ಜಗತ್ತಿನಾದ್ಯಂತ ರಾಮ ಭಕ್ತರು ಸಂತಸದಲ್ಲಿ ಮಿಂದೆದ್ದಿದ್ದಾರೆ. ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಅಪರ್ಣಾ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿರುವ ಜ್ಯೋತಿ ಸೇರಿದಂತೆ ಅನೇಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಭಾರತೀಯ ಪರಂಪರೆಯಂತೆ ಲಕ್ಷಣವಾಗಿ ಅಲಂಕಾರ ಮಾಡಿಕೊಂಡು ರಾಮ ಜಪ […]

ಮಂದಿರಕ್ಕಾಗಿ ಶಬರಿಯಂತೆ ಕಾದಿದ್ದ ವಿದೇಶಿ ಕನ್ನಡಿಗರು ಸಂಭ್ರಮ ಹಂಚಿಕೊಂಡಿದ್ದು ಹೀಗೆ
ಸಾಧು ಶ್ರೀನಾಥ್​
|

Updated on:Aug 05, 2020 | 6:40 PM

Share

ವರ್ಷಾನುಗಟ್ಟಲೆಯಿಂದ ಜಗತ್ತಿನಾದ್ಯಂತ ಶಬರಿಯಂತೆ ಕಾದುಕುಳಿತಿದ್ದ ಕೋಟ್ಯಂತರ ರಾಮ ಭಕ್ತರಿಗೆ ಇಂದು ನಿಜಕ್ಕೂ ಸುದಿನ. ರಾಮ ನಾಮ ಜಪದಲ್ಲಿದ್ದವರಿಗೆ ಪಾಯಸ ಸವಿದಂತಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮ ಸ್ಥಳದಲ್ಲಿ ರಾಮ ಮಂದಿರ ಪುನರ್​ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆ ಜಗತ್ತಿನಾದ್ಯಂತ ರಾಮ ಭಕ್ತರು ಸಂತಸದಲ್ಲಿ ಮಿಂದೆದ್ದಿದ್ದಾರೆ.

ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಅಪರ್ಣಾ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿರುವ ಜ್ಯೋತಿ ಸೇರಿದಂತೆ ಅನೇಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಭಾರತೀಯ ಪರಂಪರೆಯಂತೆ ಲಕ್ಷಣವಾಗಿ ಅಲಂಕಾರ ಮಾಡಿಕೊಂಡು ರಾಮ ಜಪ ಮಾಡುತ್ತಾ ತಮ್ಮ ಸಂತಸ ಹೊರಹಾಕಿದ್ದಾರೆ. ಇವರೆಲ್ಲ ನಮ್ಮ ಕನ್ನಡಿಗರು ಎಂಬುದು ಹೆಮ್ಮೆಯ, ಸಂತಸದ ವಿಚಾರ.

ಇನ್ನು ಅನೇಕರು ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾವು ಉತ್ಸುಕರಾಗಿದ್ದೆವು. ಆದ್ರೆ ಮಹಾಮಾರಿ ಕೊರೊನಾದಿಂದಾಗಿ ಅದು ಸಾಧ್ಯವಾಗದೇ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದರೂ ಮಂದಿರ ನಿರ್ಮಾಣವಾಗಬೇಕೆನ್ನುವ ತಮ್ಮ ಕನಸು ನನಸಾಗಿದ್ದಕ್ಕೆ ಹೆಮ್ಮೆಯಿಂದ ಬೀಗಿದ್ದಾರೆ. ತಾವಿರುವ ಕಡೆಗಳಲ್ಲೇ ಭಗವಾನ್ ರಾಮನಿಗೆ ಪೂಜೆ ಮಾಡಿದ್ದಾರೆ. ಜೈಶ್ರೀರಾಮ್ ಎಂದು ಉದ್ಗಾರ ತೆಗೆದಿದ್ದಾರೆ.

ಇನ್ನು ಹಿರಿಯರಂತೂ ಆರತಿ ತಟ್ಟೆ ಹಿಡಿದು ರಾಮನ ಫೋಟೋ, ವಿಗ್ರಹಕ್ಕೆ ಪೂಜೆ ಮಾಡುತ್ತಾ ಆರತಿ ಎತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ಸರ್ವರಿಗೂ ಒಳಿತನ್ನುಂಟು ಮಾಡಲಿ ಎಂದು ಕೋರಿದ್ದಾರೆ.

Published On - 5:05 pm, Wed, 5 August 20

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್