AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕಾಗಿ ಶಬರಿಯಂತೆ ಕಾದಿದ್ದ ವಿದೇಶಿ ಕನ್ನಡಿಗರು ಸಂಭ್ರಮ ಹಂಚಿಕೊಂಡಿದ್ದು ಹೀಗೆ

ವರ್ಷಾನುಗಟ್ಟಲೆಯಿಂದ ಜಗತ್ತಿನಾದ್ಯಂತ ಶಬರಿಯಂತೆ ಕಾದುಕುಳಿತಿದ್ದ ಕೋಟ್ಯಂತರ ರಾಮ ಭಕ್ತರಿಗೆ ಇಂದು ನಿಜಕ್ಕೂ ಸುದಿನ. ರಾಮ ನಾಮ ಜಪದಲ್ಲಿದ್ದವರಿಗೆ ಪಾಯಸ ಸವಿದಂತಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮ ಸ್ಥಳದಲ್ಲಿ ರಾಮ ಮಂದಿರ ಪುನರ್​ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆ ಜಗತ್ತಿನಾದ್ಯಂತ ರಾಮ ಭಕ್ತರು ಸಂತಸದಲ್ಲಿ ಮಿಂದೆದ್ದಿದ್ದಾರೆ. ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಅಪರ್ಣಾ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿರುವ ಜ್ಯೋತಿ ಸೇರಿದಂತೆ ಅನೇಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಭಾರತೀಯ ಪರಂಪರೆಯಂತೆ ಲಕ್ಷಣವಾಗಿ ಅಲಂಕಾರ ಮಾಡಿಕೊಂಡು ರಾಮ ಜಪ […]

ಮಂದಿರಕ್ಕಾಗಿ ಶಬರಿಯಂತೆ ಕಾದಿದ್ದ ವಿದೇಶಿ ಕನ್ನಡಿಗರು ಸಂಭ್ರಮ ಹಂಚಿಕೊಂಡಿದ್ದು ಹೀಗೆ
ಸಾಧು ಶ್ರೀನಾಥ್​
|

Updated on:Aug 05, 2020 | 6:40 PM

Share

ವರ್ಷಾನುಗಟ್ಟಲೆಯಿಂದ ಜಗತ್ತಿನಾದ್ಯಂತ ಶಬರಿಯಂತೆ ಕಾದುಕುಳಿತಿದ್ದ ಕೋಟ್ಯಂತರ ರಾಮ ಭಕ್ತರಿಗೆ ಇಂದು ನಿಜಕ್ಕೂ ಸುದಿನ. ರಾಮ ನಾಮ ಜಪದಲ್ಲಿದ್ದವರಿಗೆ ಪಾಯಸ ಸವಿದಂತಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮ ಸ್ಥಳದಲ್ಲಿ ರಾಮ ಮಂದಿರ ಪುನರ್​ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆ ಜಗತ್ತಿನಾದ್ಯಂತ ರಾಮ ಭಕ್ತರು ಸಂತಸದಲ್ಲಿ ಮಿಂದೆದ್ದಿದ್ದಾರೆ.

ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಅಪರ್ಣಾ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿರುವ ಜ್ಯೋತಿ ಸೇರಿದಂತೆ ಅನೇಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಭಾರತೀಯ ಪರಂಪರೆಯಂತೆ ಲಕ್ಷಣವಾಗಿ ಅಲಂಕಾರ ಮಾಡಿಕೊಂಡು ರಾಮ ಜಪ ಮಾಡುತ್ತಾ ತಮ್ಮ ಸಂತಸ ಹೊರಹಾಕಿದ್ದಾರೆ. ಇವರೆಲ್ಲ ನಮ್ಮ ಕನ್ನಡಿಗರು ಎಂಬುದು ಹೆಮ್ಮೆಯ, ಸಂತಸದ ವಿಚಾರ.

ಇನ್ನು ಅನೇಕರು ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾವು ಉತ್ಸುಕರಾಗಿದ್ದೆವು. ಆದ್ರೆ ಮಹಾಮಾರಿ ಕೊರೊನಾದಿಂದಾಗಿ ಅದು ಸಾಧ್ಯವಾಗದೇ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದರೂ ಮಂದಿರ ನಿರ್ಮಾಣವಾಗಬೇಕೆನ್ನುವ ತಮ್ಮ ಕನಸು ನನಸಾಗಿದ್ದಕ್ಕೆ ಹೆಮ್ಮೆಯಿಂದ ಬೀಗಿದ್ದಾರೆ. ತಾವಿರುವ ಕಡೆಗಳಲ್ಲೇ ಭಗವಾನ್ ರಾಮನಿಗೆ ಪೂಜೆ ಮಾಡಿದ್ದಾರೆ. ಜೈಶ್ರೀರಾಮ್ ಎಂದು ಉದ್ಗಾರ ತೆಗೆದಿದ್ದಾರೆ.

ಇನ್ನು ಹಿರಿಯರಂತೂ ಆರತಿ ತಟ್ಟೆ ಹಿಡಿದು ರಾಮನ ಫೋಟೋ, ವಿಗ್ರಹಕ್ಕೆ ಪೂಜೆ ಮಾಡುತ್ತಾ ಆರತಿ ಎತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ಸರ್ವರಿಗೂ ಒಳಿತನ್ನುಂಟು ಮಾಡಲಿ ಎಂದು ಕೋರಿದ್ದಾರೆ.

Published On - 5:05 pm, Wed, 5 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​