AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರಕ್ಕಾಗಿ ಶಬರಿಯಂತೆ ಕಾದಿದ್ದ ವಿದೇಶಿ ಕನ್ನಡಿಗರು ಸಂಭ್ರಮ ಹಂಚಿಕೊಂಡಿದ್ದು ಹೀಗೆ

ವರ್ಷಾನುಗಟ್ಟಲೆಯಿಂದ ಜಗತ್ತಿನಾದ್ಯಂತ ಶಬರಿಯಂತೆ ಕಾದುಕುಳಿತಿದ್ದ ಕೋಟ್ಯಂತರ ರಾಮ ಭಕ್ತರಿಗೆ ಇಂದು ನಿಜಕ್ಕೂ ಸುದಿನ. ರಾಮ ನಾಮ ಜಪದಲ್ಲಿದ್ದವರಿಗೆ ಪಾಯಸ ಸವಿದಂತಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮ ಸ್ಥಳದಲ್ಲಿ ರಾಮ ಮಂದಿರ ಪುನರ್​ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆ ಜಗತ್ತಿನಾದ್ಯಂತ ರಾಮ ಭಕ್ತರು ಸಂತಸದಲ್ಲಿ ಮಿಂದೆದ್ದಿದ್ದಾರೆ. ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಅಪರ್ಣಾ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿರುವ ಜ್ಯೋತಿ ಸೇರಿದಂತೆ ಅನೇಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಭಾರತೀಯ ಪರಂಪರೆಯಂತೆ ಲಕ್ಷಣವಾಗಿ ಅಲಂಕಾರ ಮಾಡಿಕೊಂಡು ರಾಮ ಜಪ […]

ಮಂದಿರಕ್ಕಾಗಿ ಶಬರಿಯಂತೆ ಕಾದಿದ್ದ ವಿದೇಶಿ ಕನ್ನಡಿಗರು ಸಂಭ್ರಮ ಹಂಚಿಕೊಂಡಿದ್ದು ಹೀಗೆ
ಸಾಧು ಶ್ರೀನಾಥ್​
|

Updated on:Aug 05, 2020 | 6:40 PM

Share

ವರ್ಷಾನುಗಟ್ಟಲೆಯಿಂದ ಜಗತ್ತಿನಾದ್ಯಂತ ಶಬರಿಯಂತೆ ಕಾದುಕುಳಿತಿದ್ದ ಕೋಟ್ಯಂತರ ರಾಮ ಭಕ್ತರಿಗೆ ಇಂದು ನಿಜಕ್ಕೂ ಸುದಿನ. ರಾಮ ನಾಮ ಜಪದಲ್ಲಿದ್ದವರಿಗೆ ಪಾಯಸ ಸವಿದಂತಾಗಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮ ಸ್ಥಳದಲ್ಲಿ ರಾಮ ಮಂದಿರ ಪುನರ್​ನಿರ್ಮಾಣಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆ ಜಗತ್ತಿನಾದ್ಯಂತ ರಾಮ ಭಕ್ತರು ಸಂತಸದಲ್ಲಿ ಮಿಂದೆದ್ದಿದ್ದಾರೆ.

ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಅಪರ್ಣಾ, ಆಸ್ಟ್ರೇಲಿಯಾದ ಬ್ರಿಸ್ಬೇನ್​ನಲ್ಲಿರುವ ಜ್ಯೋತಿ ಸೇರಿದಂತೆ ಅನೇಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಹಿರಿಯರು ಕಿರಿಯರು ಎನ್ನದೆ ಎಲ್ಲರೂ ಭಾರತೀಯ ಪರಂಪರೆಯಂತೆ ಲಕ್ಷಣವಾಗಿ ಅಲಂಕಾರ ಮಾಡಿಕೊಂಡು ರಾಮ ಜಪ ಮಾಡುತ್ತಾ ತಮ್ಮ ಸಂತಸ ಹೊರಹಾಕಿದ್ದಾರೆ. ಇವರೆಲ್ಲ ನಮ್ಮ ಕನ್ನಡಿಗರು ಎಂಬುದು ಹೆಮ್ಮೆಯ, ಸಂತಸದ ವಿಚಾರ.

ಇನ್ನು ಅನೇಕರು ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾವು ಉತ್ಸುಕರಾಗಿದ್ದೆವು. ಆದ್ರೆ ಮಹಾಮಾರಿ ಕೊರೊನಾದಿಂದಾಗಿ ಅದು ಸಾಧ್ಯವಾಗದೇ ಹೋಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದರೂ ಮಂದಿರ ನಿರ್ಮಾಣವಾಗಬೇಕೆನ್ನುವ ತಮ್ಮ ಕನಸು ನನಸಾಗಿದ್ದಕ್ಕೆ ಹೆಮ್ಮೆಯಿಂದ ಬೀಗಿದ್ದಾರೆ. ತಾವಿರುವ ಕಡೆಗಳಲ್ಲೇ ಭಗವಾನ್ ರಾಮನಿಗೆ ಪೂಜೆ ಮಾಡಿದ್ದಾರೆ. ಜೈಶ್ರೀರಾಮ್ ಎಂದು ಉದ್ಗಾರ ತೆಗೆದಿದ್ದಾರೆ.

ಇನ್ನು ಹಿರಿಯರಂತೂ ಆರತಿ ತಟ್ಟೆ ಹಿಡಿದು ರಾಮನ ಫೋಟೋ, ವಿಗ್ರಹಕ್ಕೆ ಪೂಜೆ ಮಾಡುತ್ತಾ ಆರತಿ ಎತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ಸರ್ವರಿಗೂ ಒಳಿತನ್ನುಂಟು ಮಾಡಲಿ ಎಂದು ಕೋರಿದ್ದಾರೆ.

Published On - 5:05 pm, Wed, 5 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?