AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karachi Blast: ಪಾಕಿಸ್ತಾನದ ಕರಾಚಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ

ಕರಾಚಿಯ ಶೇರ್ಷಾ ಪ್ರದೇಶದಲ್ಲಿ ಶನಿವಾರ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ ಬ್ಯಾಂಕ್‌ನ ಕಟ್ಟಡವೊಂದು ಭಾಗಶಃ ಕುಸಿದು ಬಿದ್ದಿರುವ ವಿಡಿಯೋಗಳು ವೈರಲ್ ಆಗಿವೆ.

Karachi Blast: ಪಾಕಿಸ್ತಾನದ ಕರಾಚಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ
ಕರಾಚಿಯಲ್ಲಿ ಉಂಟಾದ ಸ್ಫೋಟ
TV9 Web
| Edited By: |

Updated on: Dec 19, 2021 | 7:18 AM

Share

ಸಿಂಧ್: ಪಾಕಿಸ್ತಾನದ ಕರಾಚಿಯಲ್ಲಿ ಉಂಟಾದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ನಂತರ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕರಾಚಿಯ ಶೇರ್ಷಾ ಪ್ರದೇಶದಲ್ಲಿ ಶನಿವಾರ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ ಬ್ಯಾಂಕ್‌ನ ಕಟ್ಟಡವೊಂದು ಭಾಗಶಃ ಕುಸಿದು ಬಿದ್ದಿರುವ ವಿಡಿಯೋಗಳು ವೈರಲ್ ಆಗಿವೆ.

ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪಾಕಿಸ್ತಾನಿ ಮಾಧ್ಯಮಗಳು ತಿಳಿಸಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸ್ಫೋಟದ ಸ್ವರೂಪವನ್ನು ನಿರ್ಧರಿಸುತ್ತಿದ್ದಾರೆ. ಗ್ಯಾಸ್ ಸೋರಿಕೆ ಅಥವಾ ಬಾಂಬ್ ಸ್ಫೋಟದಿಂದಾಗಿ ಘಟನೆ ಸಂಭವಿಸಿದೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ.

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಶಾಸಕ ಅಲಂಗೀರ್ ಖಾನ್ ಅವರ ತಂದೆ ದಿಲಾವರ್ ಖಾನ್ ಕೂಡ ನಿನ್ನೆ ನಡೆದ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ರಾಜಕೀಯ ಸಂವಹನದ ವಿಶೇಷ ಸಹಾಯಕ ಶಹಬಾಜ್ ಗಿಲ್ ಹೇಳಿದ್ದಾರೆ.

ನಿನ್ನೆ ನಡೆದ ಸ್ಫೋಟ ಪ್ರಕರಣಕ್ಕೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದು, ಕರಾಚಿಯ ಶೇರ್ ಷಾ ಪರಾಚಾ ಚೌಕ್‌ನಲ್ಲಿ ನಡೆದ ಅವಳಿ ಸ್ಫೋಟದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಆ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ನಮ್ಮ ಎಂಎನ್‌ಎ ಅಲಂಗೀರ್ ಖಾನ್ ಅವರ ತಂದೆಯೂ ಸ್ಫೋಟದಲ್ಲಿ ಸಾವನ್ನಪ್ಪಿದ ಬಗ್ಗೆ ಕೇಳಿ ನನಗೆ ಬಹಳ ದುಃಖವಾಗಿದೆ. ಈ ನಷ್ಟವನ್ನು ಭರಿಸುವ ಶಕ್ತಿಯನ್ನು ಅಲ್ಲಾಹ್ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ಕರಾಚಿಯಲ್ಲಿ ಸ್ಫೋಟವಾಗುತ್ತಿದ್ದಂತೆ ಮಾರುಕಟ್ಟೆಯಲ್ಲಿದ್ದ ಮಕ್ಕಳು ಸೇರಿದಂತೆ ಸಾಕಷ್ಟು ಜನರ ಮೈಗೆ ಬೆಂಕಿ ಹೊತ್ತಿಕೊಂಡು ಕಣ್ಮುಂದೆಯೇ ಸುಟ್ಟು ಕರಕಲಾದರು, ಇನ್ನು ಕೆಲವರ ಅಂಗಾಂಗಗಳು ತುಂಡಾಗಿ ಬಿದ್ದವು. ಬ್ಯಾಂಕ್​ನ ಶಾಖೆಯೊಂದು ಬಹುತೇಕ ಬೆಂಕಿಗೆ ಆಹುತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪಾಕಿಸ್ತಾನದ ಡಾನ್ ಪತ್ರಿಕೆಯ ವರದಿಯ ಪ್ರಕಾರ, ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ಈ ಬಾಂಬ್ ಸ್ಫೋಟ ಸಂಭವಿಸಿರಬಹುದು. ಕಳೆದ ವಾರ ಸರ್ಕಾರಿ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಬಾಂಬ್ ಸ್ಫೋಟದಿಂದ ನಗರವು ಇನ್ನೂ ತತ್ತರಿಸುತ್ತಿರುವಾಗಲೇ ಈ ಬಾಂಬ್ ಸ್ಫೋಟ ಸಂಭವಿಸಿದೆ. ಕಳೆದ ವಾರ ಚರ್ಚ್ ಸ್ಫೋಟದಲ್ಲಿ 80 ಮಂದಿ ಸಾವನ್ನಪ್ಪಿದರು. ಭಾನುವಾರದ ಚರ್ಚ್ ಬಾಂಬ್ ದಾಳಿಯ ಹೊಣೆಯನ್ನು ತಾಲಿಬಾನ್ ವಹಿಸಿಕೊಂಡಿತ್ತು. ಆದರೆ, ಶನಿವಾರ ನಡೆದ ಸ್ಫೋಟ ಬಾಂಬ್ ಸ್ಫೋಟವೇ ಎಂಬ ಅನುಮಾನವಿದ್ದು, ಗ್ಯಾಸ್ ಸೋರಿಕೆಯಿಂದಲೂ ಉಂಟಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಅನೇಕ ಜನರು ಹೂತುಹೋಗಿದ್ದರು. ಕಟ್ಟಡದ ಅವಶೇಷಗಳನ್ನು ತೆಗೆದುಹಾಕಲು ಮತ್ತು ಅಲ್ಲಿ ಸಿಲುಕಿರುವ ಯಾವುದೇ ವ್ಯಕ್ತಿಗಳನ್ನು ರಕ್ಷಿಸಲು ಎರಡು ಭಾರೀ ಯಂತ್ರಗಳನ್ನು ಸ್ಥಳಕ್ಕೆ ಕರೆಸಲಾಗಿತ್ತು. ಸ್ಫೋಟದ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ಘಟಕ (ಬಿಡಿಯು) ಆಗಮಿಸಿತ್ತು.

ಇದನ್ನೂ ಓದಿ: Pakistan Bomb Blast: ಪಾಕಿಸ್ತಾನದ ಕರಾಚಿಯಲ್ಲಿ ಕಾರ್ ಬಾಂಬ್ ಸ್ಫೋಟ; 10 ಜನ ಸಾವು, 13ಕ್ಕೂ ಹೆಚ್ಚು ಮಂದಿಗೆ ಗಾಯ

Rohini Court Blast: ವಿಜ್ಞಾನಿ vs ವಕೀಲ ಜಗಳ; ದೆಹಲಿ ಕೋರ್ಟ್​ನಲ್ಲಿ ಬಾಂಬ್​ ಇಟ್ಟವರು ಯಾರು ಗೊತ್ತಾ?

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?