AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್ ಜಾಂಗ್​ ಉನ್​ಗೆ ಕಾರನ್ನು ಉಡುಗೊರೆಯಾಗಿ ಕೊಟ್ಟ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿಶೇಷ ಉಡುಗೊರೆ ಕಳುಹಿಸಿದ್ದಾರೆ. ಕಿಮ್ ಅವರ ವೈಯಕ್ತಿಕ ಬಳಕೆಗಾಗಿ ಅವರು ರಷ್ಯಾದ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಮಂಗಳವಾರ (ಫೆಬ್ರವರಿ 20) ಅಧಿಕೃತ ಮಾಧ್ಯಮ ಈ ಮಾಹಿತಿಯನ್ನು ನೀಡಿದೆ. ಈ ಉಡುಗೊರೆಯು ವಿಶ್ವಸಂಸ್ಥೆಯ ನಿಯಮಗಳ ಉಲ್ಲಂಘನೆಯಾಗಿರಬಹುದು ಎಂದು ಹೇಳಲಾಗುತ್ತಿದೆ.

ಕಿಮ್ ಜಾಂಗ್​ ಉನ್​ಗೆ ಕಾರನ್ನು ಉಡುಗೊರೆಯಾಗಿ ಕೊಟ್ಟ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ಕಿಮ್ ಜಾಂಗ್ ಉನ್-ಪುಟಿನ್Image Credit source: BBC
ನಯನಾ ರಾಜೀವ್
|

Updated on:Feb 20, 2024 | 9:55 AM

Share

ಉಭಯ ದೇಶಗಳ ನಡುವೆ ಎಷ್ಟು ಪ್ರೀತಿ, ವಿಶ್ವಾಸವಿದೆ ಎಂದು  ತೋರಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್(Kim Jong Un)​ಗೆ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಕಾರು ರಷ್ಯಾದಲ್ಲೇ ಸಿದ್ಧಪಡಿಸಲಾಗಿದ್ದು, ಹಲವು ವಿಶೇಷತೆಯನ್ನು ಹೊಂದಿದೆ. ಈ ಉಡುಗೊರೆಯು ವಿಶ್ವಸಂಸ್ಥೆಯ ನಿಯಮವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಲಾಗುತ್ತಿದೆ. ವಿಶ್ವಸಂಸ್ಥೆಯು ರಷ್ಯಾ ಮತ್ತು ಉತ್ತರ ಕೊರಿಯಾ ನಡುವಿನ ವಹಿವಾಟುಗಳನ್ನು ನಿಷೇಧಿಸಿದೆ.

ಮಾಧ್ಯಮ ಸಂಸ್ಥೆ ಕೆಸಿಎನ್‌ಎ ಪ್ರಕಾರ, ಫೆಬ್ರವರಿ 18 ರಂದು ರಷ್ಯಾದ ಕಾರನ್ನು ಉತ್ತರ ಕೊರಿಯಾದ ಕಿಮ್‌ನ ಸಹಾಯಕನಿಗೆ ಹಸ್ತಾಂತರಿಸಲಾಯಿತು. ಕಿಮ್ ಸಹೋದರಿ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಈ ಉಡುಗೊರೆಯು ಇಬ್ಬರು ನಾಯಕರ ನಡುವಿನ ವೈಯಕ್ತಿಕ ಸಂಬಂಧವನ್ನು ಸ್ಪಷ್ಟಪಡಿಸುತ್ತದೆ ಮತ್ತು ಕಿಮ್ ಜಾಂಗ್ ಉನ್ ಪುಟಿನ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಪುಟಿನ್ ಅವರನ್ನು ಭೇಟಿ ಮಾಡಲು ಕಿಮ್ ರಷ್ಯಾವನ್ನು ತಲುಪಿದ್ದರು, ಅಲ್ಲಿ ಅವರು ಪುಟಿನ್ ಅವರ ಕಾರಿನಲ್ಲಿ ಕುಳಿತುಕೊಂಡರು. ಈ ವೇಳೆ ಪುಟಿನ್ ಅವರ ಕಾರು ‘ಔರಸ್ ಲಿಮೋಸಿನ್’ ಬಗ್ಗೆ ಕಿಮ್ ಆಸಕ್ತಿ ತೋರಿದ್ದು, ಇದೀಗ ಪುಟಿನ್ ಅವರದ್ದೇ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮತ್ತಷ್ಟು ಓದಿ:Kim Jong Un: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ 40 ದಿನಗಳಿಂದ ಕಾಣಿಸ್ತಿಲ್ವಂತೆ, ಆರೋಗ್ಯದ ಬಗ್ಗೆ ಮತ್ತೆ ಊಹಾಪೋಹ

ಕಾರಿನ ಬೆಲೆ ಎಷ್ಟು? ಮಾಧ್ಯಮ ವರದಿಗಳ ಪ್ರಕಾರ, ಪುಟಿನ್ ಅವರು ಆರಿಸ್ ಮೋಟಾರ್ ಕಂಪನಿಯ ಕಾರನ್ನು ಕಿಮ್‌ಗೆ ನೀಡಿದ್ದಾರೆ. ಆರಿಸ್ ಕಂಪನಿಯ ಕಾರುಗಳ ಆರಂಭಿಕ ಬೆಲೆ ಸುಮಾರು 4 ಕೋಟಿ ರೂ.ಗಳಿಂದ ಪ್ರಾರಂಭವಾಗುತ್ತದೆ, ಇದು ರೋಲ್ಸ್ ರಾಯ್ಸ್ ಬೆಲೆಗೆ ಸಮನಾಗಿರುತ್ತದೆ.

ಕಿಮ್‌ಗೆ ಕಾರುಗಳೆಂದರೆ ಒಲವು ರಷ್ಯಾದಿಂದ ಉತ್ತರ ಕೊರಿಯಾಕ್ಕೆ ಯಾವ ಮಾದರಿ ಕಾರನ್ನು ಕಳುಹಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿಲ್ಲ. ಕಿಮ್‌ಗೆ ಆಟೋಮೊಬೈಲ್‌ಗಳೆಂದರೆ ತುಂಬಾ ಇಷ್ಟ ಎಂದು ನಂಬಲಾಗಿದೆ ಮತ್ತು ಅವರ ಬಳಿ ಅನೇಕ ವಿದೇಶಿ ಐಷಾರಾಮಿ ಕಾರುಗಳಿವೆ.

ಕೊರಿಯಾ ಉಕ್ರೇನ್ ಯುದ್ಧಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತದೆ ಉಭಯ ದೇಶಗಳ ನಡುವೆ ಆಮದು-ರಫ್ತು ವೇಗವಾಗಿ ಹೆಚ್ಚಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಬಳಸಿದ ಫಿರಂಗಿ, ರಾಕೆಟ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉತ್ತರ ಕೊರಿಯಾ ಪೂರೈಸುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಉತ್ತರ ಕೊರಿಯಾ ರಷ್ಯಾಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿರುವುದನ್ನು ನಿರಾಕರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:54 am, Tue, 20 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು