AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀನ್ಯಾದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಸೇರಿ 9 ಯೋಧರು ಸಾವು

ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು, ರಾಜಧಾನಿ ನೈರೋಬಿಯಿಂದ 400 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಪತನದಲ್ಲಿ ವೀರ ಮರಣವನ್ನಪ್ಪಿದ ಸೇನಾ ಮುಖ್ಯಸ್ಥ ಸೇರಿ 9 ಯೋಧರಿಗೆ ಇಡೀ ರಾಷ್ಟ್ರ ಸಂತಾಪ ಸೂಚಿಸಿದೆ.

ಕೀನ್ಯಾದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಸೇರಿ 9 ಯೋಧರು ಸಾವು
ಸೇನಾ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಸೇರಿ 9 ಯೋಧರು ಸಾವು
ಅಕ್ಷತಾ ವರ್ಕಾಡಿ
|

Updated on:Apr 19, 2024 | 10:12 AM

Share

ನೈರೋಬಿ, ಏ 19: ಕೀನ್ಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ (61) ಸೇರಿದಂತೆ 9 ಮಿಲಿಟರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು, ರಾಜಧಾನಿ ನೈರೋಬಿಯಿಂದ 400 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಗುರುವಾರ ಈ ಘಟನೆ ನಡೆದಿದೆ. ಕೀನ್ಯಾದ ಸ್ಥಳೀಯ ಕಾಲಮಾನದ ಪ್ರಕಾರ  ಮಧ್ಯಾಹ್ನ 2.20ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ತಂಡವನ್ನು ಕಳುಹಿಸಲಾಗಿದೆ ಎಂದು ಅಧ್ಯಕ್ಷ ವಿಲಿಯಂ ರುಟೊ ಹೇಳಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಬದುಕುಳಿದಿದ್ದು, ಉಳಿದ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೃತ ಸೇನಾ ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಈ ಹಿಂದೆ ಕೀನ್ಯಾ ವಾಯುಪಡೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಉಪ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಅವರು ಮಿಲಿಟರಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಕಳೆದ ವರ್ಷ ಅವರನ್ನು ರಕ್ಷಣಾ ಮುಖ್ಯಸ್ಥ ಜನರಲ್ ಆಗಿ ಬಡ್ತಿ ನೀಡಲಾಗಿತ್ತು. ರಕ್ಷಣಾ ಸಚಿವಾಲಯದ ಪ್ರೊಫೈಲ್ ಪ್ರಕಾರ ಒಗೊಲ್ಲಾ 1984 ರಲ್ಲಿ ಕೀನ್ಯಾ ರಕ್ಷಣಾ ಪಡೆಗಳಿಗೆ ಸೇರಿದ್ದರು. ಇದಲ್ಲದೇ ಅವರು ಯುನೈಟೆಡ್ ಸ್ಟೇಟ್ಸ್ ಏರ್ ಫೋರ್ಸ್ನಲ್ಲಿ ಫೈಟರ್ ಪೈಲಟ್ ಆಗಿ ಮತ್ತು ಕೀನ್ಯಾ ಏರ್ ಫೋರ್ಸ್ (ಕೆಎಎಫ್) ನಲ್ಲಿ ಬೋಧಕ ಪೈಲಟ್ ಆಗಿ ತರಬೇತಿ ಪಡೆದು,40 ವರ್ಷಗಳಿಂದ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: Israel Iran War: ಇಸ್ರೇಲ್​ ಮೇಲೆ ಇರಾನ್​ನಿಂದ ಕ್ಷಿಪಣಿ ದಾಳಿ

ಹೆಲಿಕಾಪ್ಟರ್ ಪತನದಲ್ಲಿ ವೀರ ಮರಣವನ್ನಪ್ಪಿದ ಸೇನಾ ಮುಖ್ಯಸ್ಥ ಸೇರಿ 9 ಯೋಧರಿಗೆ ಇಡೀ ರಾಷ್ಟ್ರ ಸಂತಾಪ ಸೂಚಿಸಿದೆ. ಜೂನ್ 2021 ರಲ್ಲಿ, ರಾಜಧಾನಿ ನೈರೋಬಿಯಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಕನಿಷ್ಠ 10 ಸೈನಿಕರು ಸಾವನ್ನಪ್ಪಿದರು. ಸರಿಯಾಗಿ ಲ್ಯಾಂಡಿಂಗ್ ಮಾಡದೇ ಇದ್ದಿದ್ದರಿಂದ ಹೆಲಿಕಾಪ್ಟರ್ ಪತನಗೊಂಡಿದೆ. ಕಳೆದ 12 ತಿಂಗಳಲ್ಲಿ ಸುಮಾರು 5 ಕೀನ್ಯಾ ಸೇನಾ ಹೆಲಿಕಾಪ್ಟರ್‌ಗಳು ಪತನಗೊಂಡಿವೆ ಎಂದು ಸ್ಥಳೀಯ ಮಾಧ್ಯಮ ಮೂಲಗಳು ತಿಳಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:06 am, Fri, 19 April 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ