AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KFC Agarbathi: ಕೆಎಫ್​ಸಿ ಫ್ರೈಡ್ ಚಿಕನ್ ಅಗರಬತ್ತಿ; ಸೋಷಿಯಲ್ ಮೀಡಿಯಾದಲ್ಲಿ ಜನರು ಗರಂ; ಏನಿದರ ವಿಶೇಷತೆ?

Fried Chicken Incense Sticks: ಕೆಎಫ್​ಸಿಯ ವಿಶೇಷ ಚಿಕನ್ ತಿನಿಸುಗಳಿಗೆ ಹೋಲುವಂತಿರುವ ಅಗರಬತ್ತಿಗಳನ್ನು ಕೆಎಫ್​ಸಿ ತಯಾರಿಸಿದೆ. ಈ ಊದುಬತ್ತಿಯನ್ನು ಹಚ್ಚಿದರೆ ಥೇಟ್ ಕೆಎಫ್​ಸಿ ಶೈಲಿಯ ತಿನಿಸುಗಳ ವಾಸನೆ ಬರುತ್ತದೆ.

KFC Agarbathi: ಕೆಎಫ್​ಸಿ ಫ್ರೈಡ್ ಚಿಕನ್ ಅಗರಬತ್ತಿ; ಸೋಷಿಯಲ್ ಮೀಡಿಯಾದಲ್ಲಿ ಜನರು ಗರಂ; ಏನಿದರ ವಿಶೇಷತೆ?
ಫ್ರೈಡ್ ಚಿಕನ್ ಅಗರಬತ್ತಿ
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on:Jan 30, 2023 | 4:08 PM

Share

ನವದೆಹಲಿ: ಜನಪ್ರಿಯ ಚಿಕನ್ ಖಾದ್ಯಗಳ ಸ್ಟೋರ್ ಆಗಿರುವ ಕೆಎಫ್​ಸಿ (KFC- Kentucky Fried Chicken) ಈಗ ಮತ್ತೆ ವಿವಾದಕ್ಕೆ ಸಿಲುಕಿದೆ. ತನ್ನ ಖಾದ್ಯಗಳ ಶೈಲಿಯಲ್ಲಿ ಅಗರಬತ್ತಿಯನ್ನು ಕೆಎಫ್​ಸಿ ತಯಾರಿಸಿ, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಥಾಯ್ಲೆಂಡ್ ವಿಭಾಗದ ಕೆಎಫ್​ಸಿ ಇಂಥದ್ದೊಂದು ಪ್ರಯೋಗ ಮಾಡಿದೆ.

ಅಗರಬತ್ತಿಗೂ ಚಿಕನ್​ಗೂ ಏನು ಸಂಬಂಧ ಎಂಬ ಪ್ರಶ್ನೆ ಬರಬಹುದು. ಆದರೆ, ಇಲ್ಲಿ ಕೆಎಫ್​ಸಿಯ ವಿಶೇಷ ಚಿಕನ್ ತಿನಿಸುಗಳಿಗೆ ಹೋಲುವಂತಿರುವ ಅಗರಬತ್ತಿಗಳನ್ನು ಕೆಎಫ್​ಸಿ ತಯಾರಿಸಿದೆ. ಈ ಊದುಬತ್ತಿಯನ್ನು ಹಚ್ಚಿದರೆ ಥೇಟ್ ಕೆಎಫ್​ಸಿ ಶೈಲಿಯ ತಿನಿಸುಗಳ ವಾಸನೆ ಬರುತ್ತದೆ. ನೋಡಲೂ ಕೂಡ ಕೆಎಫ್​ಸಿಯ ಡ್ರಮ್​ಸ್ಟಿಕ್ ಚಿಕನ್​ಗಳಂತೆ ಕಂಡರೂ ಈ ಅಗರಬತ್ತಿಯನ್ನು ತಿನ್ನಲು ಬರುವುದಿಲ್ಲ. ಕೇವಲ ನೋಡಲು ಮತ್ತು ಆಘ್ರಾಣಿಸಲು ಮಾತ್ರ ಇದು ಚಿಕನ್​ನಂತೆ ಇರುತ್ತದೆ.

ಕೆಎಫ್​ಸಿಯ ಥಾಯ್ಲೆಂಡ್ ವಿಭಾಗವು ಈ ಫ್ರೈಡ್ ಚಿಕನ್ ಅಗರಬತ್ತಿಯ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತು. ಆದರೆ ಸಾಮಾಜಿಕ ಜಾಲತಾಣದಲ್ಲಿ ಜನರ ಟೀಕೆಗೆ ಗುರಿಯಾಗಿದೆ. ಅದಾದ ಬಳಿಕ ಈ ಪೋಸ್ಟ್ ಅನ್ನು ಕೆಎಫ್​ಸಿ ಅಳಿಸಿಹಾಕಿತು.

ಇದರ ತಯಾರಿಕೆ ಹೇಗೆ?

ಕೆಎಫ್​ಸಿ ಸಂಸ್ಥೆಯದ್ದೇ ಆದ ವಿಶೇಷ ರಿಸಿಪಿ ಇದೆ. ಇದರಲ್ಲಿ 11 ಸಸ್ಯ ಮತ್ತು ಮಸಾಲೆಗಳನ್ನೊಳಗೊಂಡ ರಿಸಿಪಿ ಅದು. ಅದೇ ರೀತಿಯ ಫ್ಲೇವರ್ ಬರುವಂತೆ ಅಗರಬತ್ತಿಯನ್ನು ತಯಾರಿಸುವುದು ಕೆಎಫ್​ಸಿಗೆ ಸವಾಲಿನ ಕೆಲಸವಾಗಿತ್ತು. ಅದಕ್ಕಾಗಿ ಕೆಎಫ್​ಸಿ ಸೆಂಟ್ ವಿಭಾಗವು ಕೆಲ ತಜ್ಞ ಸಂಸ್ಥೆಗಳ ಜೊತೆ ಸೇರಿ ಈ ಕಾರ್ಯ ಮಾಡಿದೆ.

ಅಂದಹಾಗೆ ಈ ಕೆಎಫ್​ಸಿ ಫ್ರೈಡ್ ಚಿಕನ್ ಅಗರಬತ್ತಿಯು ಮಾರಾಟಕ್ಕಿಲ್ಲ. ಸೌರಮಾನ ಹೊಸ ವರ್ಷದ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನವಾಗಿ ಕೊಡಲು ಮಾತ್ರ ಇದರ ತಯಾರಿಕೆ ಮಾಡಲಾಗಿತ್ತು. ಯಾರಿಗೆ ಗೊತ್ತು, ಈ ಅಗರಬತ್ತಿ ಜನರಿಗೆ ಇಷ್ಟವಾಗಿಬಿಟ್ಟಿದ್ದರೆ ಕೆಎಫ್​ಸಿ ಕೌಂಟರುಗಳಲ್ಲಿ ಇದನ್ನು ಮಾರಾಟಕ್ಕಿಡಲಾಗುತ್ತಿತ್ತೇನೋ

Published On - 4:08 pm, Mon, 30 January 23

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ