London: ಲಂಡನ್ನಲ್ಲಿ ಸಚಿವ ಎಸ್ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ
ಲಂಡನ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಮೇಲೆ ಖಲಿಸ್ತಾನ್ ಉಗ್ರರ ಗುಂಪೊಂದು ದಾಳಿ ನಡೆಸಲು ಯತ್ನಿಸಿದೆ ಎನ್ನವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಭಾರತೀಯ ಸಚಿವರು ಚೆವನಿಂಗ್ ಹೌಸ್ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದನ್ನು ತೋರಿಸಲಾಗಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದನ್ನು ತೋರಿಸಲಾಗಿದೆ.

ಲಂಡನ್, ಮಾರ್ಚ್ 06: ಲಂಡನ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಅವರ ಮೇಲೆ ಖಲಿಸ್ತಾನ್ ಉಗ್ರರ ಗುಂಪೊಂದು ದಾಳಿ ನಡೆಸಲು ಯತ್ನಿಸಿದೆ ಎನ್ನವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಭಾರತೀಯ ಸಚಿವರು ಚೆವನಿಂಗ್ ಹೌಸ್ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದನ್ನು ತೋರಿಸಲಾಗಿದೆ.
ಮತ್ತೊಂದು ವೀಡಿಯೊದಲ್ಲಿ ಖಾಲಿಸ್ತಾನ್ ಉಗ್ರಗಾಮಿಗಳು ಸ್ಥಳದ ಹೊರಗೆ ಧ್ವಜಗಳನ್ನು ಬೀಸುತ್ತಾ ಮತ್ತು ಖಲಿಸ್ತಾನಿ ಪರ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿರುವುದನ್ನು ತೋರಿಸಲಾಗಿದೆ.
ಮತ್ತಷ್ಟು ಓದಿ: ಕದ್ದ ಭೂಮಿಯನ್ನು ಹಿಂದಿರುಗಿಸಿದರೆ ಕಾಶ್ಮೀರದ ಸಮಸ್ಯೆ ಬಗೆಹರಿಯುತ್ತೆ: ಎಸ್ ಜೈಶಂಕರ್
ಕಳೆದ ಕೆಲವು ವರ್ಷಗಳಿಂದ, ಯುಕೆ, ಯುಎಸ್ ಮತ್ತು ಕೆನಡಾದಲ್ಲಿರುವ ಖಲಿಸ್ತಾನ್ ಉಗ್ರಗಾಮಿಗಳಿಂದ ಭಾರತೀಯ ರಾಜತಾಂತ್ರಿಕರು ಮತ್ತು ವಲಸಿಗರಿಗೆ ಬೆದರಿಕೆ ಹೆಚ್ಚಾಗಿದೆ. ಈ ವಿವಾದವು ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಲು ಕಾರಣವಾಗಿದ್ದರೂ, ಅಮೆರಿಕ ಮತ್ತು ಯುಕೆಯಲ್ಲಿ ಹೆಚ್ಚಿದ ಚಟುವಟಿಕೆಗಳ ಬಗ್ಗೆ ಭಾರತವು ತನ್ನ ಕಳವಳವನ್ನು ವ್ಯಕ್ತಪಡಿಸುತ್ತಲೇ ಇದೆ.
#WATCH | London, UK | Pro-Khalistan supporters staged a protest outside the venue where EAM Dr S Jaishankar participated in a discussion held by Chatham House pic.twitter.com/ISVMZa3DdT
— ANI (@ANI) March 6, 2025
ಇದಕ್ಕೂ ಮೊದಲು ಯುಕೆಯಲ್ಲಿ, ಕಂಗನಾ ರನೌತ್ ಅಭಿನಯದ ಎಮರ್ಜೆನ್ಸಿ ಚಿತ್ರ ಪ್ರದರ್ಶನವನ್ನು ತಡೆಯಲು ಖಲಿಸ್ತಾನ್ ಉಗ್ರಗಾಮಿಗಳು ಲಂಡನ್ನ ಹ್ಯಾರೋದಲ್ಲಿರುವ ಚಿತ್ರಮಂದಿರಕ್ಕೆ ನುಗ್ಗಿದ್ದರು.
ಕಳೆದ ಎರಡು ದಿನಗಳಿಂದ ಚೆವೆನಿಂಗ್ ಹೌಸ್ನಲ್ಲಿ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರೊಂದಿಗೆ ವ್ಯಾಪಕ ಮತ್ತು ಉತ್ಪಾದಕ ಮಾತುಕತೆಗಳನ್ನು ನಡೆಸಿದ್ದೇವೆ. ನಾವು ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಚರ್ಚಿಸಿದ್ದೇವೆ, ವಿಶೇಷವಾಗಿ ಕಾರ್ಯತಂತ್ರದ ಸಮನ್ವಯ, ರಾಜಕೀಯ ಸಹಕಾರ, ವ್ಯಾಪಾರ ಒಪ್ಪಂದ ಮಾತುಕತೆ, ಶಿಕ್ಷಣ, ತಂತ್ರಜ್ಞಾನ, ಚಲನಶೀಲತೆ ಮತ್ತು ಜನರಿಂದ ಜನರ ವಿನಿಮಯದ ಮೇಲಿನ ನಮ್ಮ ಗಮನ. ಅವುಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ರೂಪಿಸಲು ಮುಂದಿನ ಹಂತಗಳನ್ನು ರೂಪಿಸಲು ಒಪ್ಪಿಕೊಂಡಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ.
ಆದರೆ, ಈ ಬಗ್ಗೆ ಭಾರತ ಅಥವಾ ಬ್ರಿಟನ್ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಲಂಡನ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿಶೇಷವೆಂದರೆ ಖಲಿಸ್ತಾನಿಗಳು ಹಲವಾರು ಸಂದರ್ಭಗಳಲ್ಲಿ ಜೈಶಂಕರ್ ಸೇರಿದಂತೆ ಅನೇಕ ಭಾರತೀಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು.
ಗುರುವಾರ ಲಂಡನ್ನಲ್ಲಿ ಖಲಿಸ್ತಾನಿ ಉಗ್ರರು ಜೈಶಂಕರ್ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಯುಕೆ ಮತ್ತು ಐರ್ಲೆಂಡ್ಗೆ ಆರು ದಿನಗಳ ಭೇಟಿಯ ಸಮಯದಲ್ಲಿ, ವಿದೇಶಾಂಗ ಸಚಿವರು ಉನ್ನತ ಮಟ್ಟದ ಮಾತುಕತೆಗಳು, ವಿದೇಶಾಂಗ ನೀತಿಯ ತೊಡಗಿಸಿಕೊಳ್ಳುವಿಕೆಗಳು ಮತ್ತು ಭಾರತೀಯ ಸಮುದಾಯದೊಂದಿಗೆ ಸಂವಾದಗಳನ್ನು ನಡೆಸಲಿದ್ದಾರೆ. ಈ ಭೇಟಿಯು ಎರಡೂ ದೇಶಗಳೊಂದಿಗಿನ ಭಾರತದ ಸ್ನೇಹ ಸಂಬಂಧಕ್ಕೆ ಹೊಸ ಉತ್ತೇಜನ ನೀಡುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:01 am, Thu, 6 March 25