AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನ್ ಜಿಂದಾಬಾದ್ ಘೋಷಣೆ ಮಧ್ಯೆ, ಸಿಖ್ಖರಿಗೆ ಸ್ವಾತಂತ್ರ್ಯ ರಕ್ಷಣೆಯ ಭರವಸೆ ಕೊಟ್ಟ ಕೆನಡಾ ಪ್ರಧಾನಿ

Khalistan Zindabad slogans raised in Canada: ಏಪ್ರಿಲ್ 28, ಭಾನುವಾರ ಕೆನಡಾದ ಟೊರಾಂಟೋದಲ್ಲಿ ನಡೆದ ಖಲ್ಸಾ ದಿನ ಕಾರ್ಯಕ್ರಮದಲ್ಲಿ ಖಲಿಸ್ತಾನ್ ಪರ ಘೋಷಣೆಗಳು ಮೊಳಗಿದ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಭಾಷಣಕ್ಕೆ ಏಳುತ್ತಿರುವಂತೆಯೇ ಖಲಿಸ್ತಾನ್ ಜಿಂದಾಬಾದ್ ಘೋಷಣೆ ಶುರುವಾಗಿತ್ತು. ಅವರು ಭಾಷಣ ಆರಂಭಿಸುವವರೆಗೂ ಘೋಷಣೆ ತಾರಕಕ್ಕೇರಿತ್ತು. ಕೆನಡಾದಲ್ಲಿರುವ ಸಿಖ್ ಧರ್ಮೀಯರ ಸ್ವಾತಂತ್ರ್ಯ ಮತ್ತು ಧಾರ್ಮಿಕ ಹಕ್ಕನ್ನು ರಕ್ಷಿಸುವುದಾಗಿ ಟ್ರೂಡೋ ಭರವಸೆ ನೀಡಿದ್ದಾರೆ.

ಖಲಿಸ್ತಾನ್ ಜಿಂದಾಬಾದ್ ಘೋಷಣೆ ಮಧ್ಯೆ, ಸಿಖ್ಖರಿಗೆ ಸ್ವಾತಂತ್ರ್ಯ ರಕ್ಷಣೆಯ ಭರವಸೆ ಕೊಟ್ಟ ಕೆನಡಾ ಪ್ರಧಾನಿ
ಜಸ್ಟಿನ್ ಟ್ರೂಡೋ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 29, 2024 | 4:47 PM

Share

ಟೊರಾಂಟೋ, ಏಪ್ರಿಲ್ 29: ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ (Justin Trudeau) ಅವರು ಖಲ್ಸಾ ದಿನದ ಅಂಗವಾಗಿ ಭಾನುವಾರ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಖಲಿಸ್ತಾನ್ ಜಿಂದಾಬಾದ್ ಘೋಷಣೆಗಳು (Pakistan Zindabad) ಮೊಳಗಿವೆ. ಅಲ್ಲದೇ ಕೆನಡಾದಲ್ಲಿರುವ ಎಂಟು ಲಕ್ಷ ಸಿಖ್ ಧರ್ಮೀಯ ನಾಗರಿಕರ ಹಕ್ಕು ಮತ್ತು ಸ್ವಾತಂತ್ರ್ಯವನ್ನು ತಮ್ಮ ಸರ್ಕಾರ ರಕ್ಷಿಸಲು ಸದಾ ಬದ್ಧವಾಗಿದೆ ಎಂದು ಕೆನಡಾ ಪ್ರಧಾನಿಗಳು ಭರವಸೆ ನೀಡಿದ್ದಾರೆ. ‘ಕೆನಡಾದಲ್ಲಿರುವ ಸಿಖ್ ಸಮುದಾಯದವರ ಕಥೆ ಕೆನಡಾದ ಕಥೆಯೇ ಆಗಿದೆ. ಈ ದೇಶದಲ್ಲಿರುವ ಎಂಟು ಲಕ್ಷ ಕೆನಡಿಯನ್ ಸಿಖ್ಖರ ಹಕ್ಕು ಮತ್ತು ಸ್ವಾತಂತ್ರ್ಯ ರಕ್ಷಿಸಲು ಸದಾ ನಾವಿದ್ದೇವೆ. ದ್ವೇಷ ಮತ್ತು ತಾರತಮ್ಯತೆ ವಿರುದ್ಧ ನಿಮ್ಮ ಸಮುದಾಯವನ್ನು ನಾವು ಸದಾ ರಕ್ಷಿಸುತ್ತೇವೆ,’ ಎಂದು ಜಸ್ಟಿನ್ ಟ್ರೂಡೋ ಹೇಳಿದ್ದಾರೆ.

‘ನಿಮ್ಮ ಧರ್ಮವನ್ನು ಯಾವ ಭಯ ಇಲ್ಲದೇ ಮುಕ್ತವಾಗಿ ಆಚರಿಸುವ ಹಕ್ಕು ನಿಮಗಿದೆ. ಕೆನಡಾ ಸಂವಿಧಾನದಲ್ಲಿ ಈ ಮೂಲಭೂತ ಹಕ್ಕಿನ ಖಾತ್ರಿ ಇದೆ. ನಿಮ್ಮ ಹಕ್ಕು ಮತ್ತು ಸ್ವಾತಂತ್ರ್ಯದ ರಕ್ಷಣೆಗೆ ನಾವು ಸದಾ ನಿಲ್ಲುತ್ತೇವೆ’ ಎಂದು ಹೇಳಿದ ಟ್ರೂಡೋ, ಗುರುದ್ವಾರ ಸೇರಿದಂತೆ ಧಾರ್ಮಿಕ ಕೇಂದ್ರ, ಕಮ್ಯೂನಿಟಿ ಸೆಂಟರ್​ಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ಸಿದ್ದವಾಗುತ್ತಿದೆ ವಿಶ್ವದಲ್ಲೇ ಅತಿದೊಡ್ಡ ಏರ್​ಪೋರ್ಟ್; 400 ಗೇಟ್, 5 ರನ್​ವೇ ಇರುವ ಟರ್ಮಿನಲ್​ನ ವಿಶೇಷತೆಗಳು ಹಲವು

ನಿನ್ನೆ ವೈಶಾಖಿ ದಿನ ಖಲ್ಸಾ ದಿನವಾಗಿ ಕೆನಡಾದಲ್ಲಿ ಆಚರಿಸಲಾಗುತ್ತಿದೆ. ಭಾರತದಲ್ಲಿ ಖಲ್ಸಾ ಚಳವಳಿ ಮತ್ತು ಖಲಿಸ್ತಾನ್ ಹೋರಾಟವನ್ನು ನಿಷೇಧಿಸಲಾಗಿದೆ. ಸಿಖ್ಖರು ಸಾಕಷ್ಟು ಸಂಖ್ಯೆಯಲ್ಲಿರುವ ಕೆನಡಾದಲ್ಲಿ ಖಲಿಸ್ತಾನ್ ಪರ ಹೋರಾಟಗಾರರು ಸಕ್ರಿಯವಾಗಿದ್ದಾರೆ. ಅಲ್ಲಿ ಖಲಿಸ್ತಾನ್ ಪರ ಹೋರಾಟ ಮತ್ತು ಭಾರತ ವಿರೋಧಿ ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಕೆಲ ವರದಿಗಳ ಪ್ರಕಾರ ಕೆನಡಾ ಸರ್ಕಾರ ಕೂಡ ಈ ಶಕ್ತಿಗಳಿಗೆ ಪ್ರಚೋದನೆ ನೀಡುತ್ತವೆ ಎನ್ನಲಾಗಿದೆ.

ನಿನ್ನೆ ನಡೆದ ಖಲ್ಸಾ ದಿನದ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಕೆನಡಾ ಪ್ರಧಾನಿ ವೇದಿಕೆ ಏರಲು ಶುರು ಮಾಡುತ್ತಿರುವಂತೆಯೇ ಖಲಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಲು ಆರಂಭಿಸಿದವು. ಅವರು ಭಾಷಣ ಆರಂಭಿಸುವವಷ್ಟರಲ್ಲಿ ಘೋಷಣೆಗಳು ತಾರಕಕ್ಕೇರಿದವು.

ವೈಶಾಖಿ ದಿನವನ್ನು ಸಿಖ್ ಹೊಸ ವರ್ಷವಾಗಿ ಆಚರಿಸಲಾಗುತ್ತದೆ. ಅದೇ ದಿನ ಖಲ್ಸಾ ದಿನವೂ ಹೌದು. ಟೊರಾಂಟೋದಲ್ಲಿ ನಿನ್ನೆ ಭಾನುವಾರ ನಡೆದ ಖಲ್ಸಾ ದಿನ ಕಾರ್ಯಕ್ರಮಕ್ಕೆ ಎಂಟು ಲಕ್ಷ ಸಮೀಪದಷ್ಟು ಸಿಖ್ ಧರ್ಮಿಯರು ಕೆನಡಾದ ವಿವಿಧೆಡೆ ಹೋಗಿ ಸೇರಿದ್ದರು. ಕೆನಡಾ ಕಂಡ ಅತಿದೊಡ್ಡ ಸಭೆಗಳಲ್ಲಿ ಅದೂ ಒಂದು.

ಇದನ್ನೂ ಓದಿ: ಅಮೆರಿಕ: ಭೀಕರ ರಸ್ತೆ ಅಪಘಾತ; ಮೂವರು ಭಾರತೀಯರು ಸಾವು

ಭಾರತ ಕೆನಡಾ ಮಧ್ಯೆ ಹೆಚ್ಚು ಫ್ಲೈಟ್

ನಿಮ್ಮ ಪ್ರೀತಿಪಾತ್ರರನ್ನು ಹೆಚ್ಚು ಬಾರಿ ನೋಡಲು ಬಯಸುತ್ತೀರಿ ಎಂಬುದು ಗೊತ್ತು. ಭಾರತ ಮತ್ತು ಕೆನಡಾ ಮಧ್ಯೆ ಫ್ಲೈಟ್ ಸಂಖ್ಯೆ ಮತ್ತು ಮಾರ್ಗಗಳ ಸಂಖ್ಯೆ ಹೆಚ್ಚಿಸಲು ಹೊಸ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಕೆನಡಾ ಪ್ರಧಾನಿ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು