AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜ ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ
ಮಹಾತ್ಮ ಗಾಂಧಿ ಪ್ರತಿಮೆ
sandhya thejappa
| Edited By: |

Updated on: Dec 13, 2020 | 11:56 AM

Share

ವಾಷಿಂಗ್ಟನ್: ಭಾರತದ ಸಂಸತ್ತು ಅಂಗೀಕರಿಸಿರುವ ಕೃಷಿ ಕಾನೂನುಗಳ ವಿರುದ್ಧ ವಾಷಿಂಗ್ಟನ್​ನಲ್ಲಿ ಪ್ರತಿಭಟಿಸುತ್ತಿರುವ ಭಾರತ ಮೂಲದ ಸಿಖ್ಖರಿಗೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಬೆಂಬಲ ಘೋಷಿಸಿದ್ದಾರೆ. ವಾಷಿಂಗ್ಟನ್​ನ ಭಾರತೀಯ ರಾಯಭಾರ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸುತ್ತ ಶನಿವಾರ (ಡಿ.12) ತಮ್ಮ ಧ್ವಜವನ್ನು ಕಟ್ಟಿ ವಿರೂಪಗೊಳಿಸಿದ್ದಾರೆ.

ವಾಷಿಂಗ್ಟನ್, ಮೇರಿಲ್ಯಾಂಡ್ ಮತ್ತು ವರ್ಜೀನಿಯಾ ಸುತ್ತಮುತ್ತಲಿನ ನೂರಾರು ಸಿಖ್ಖರು, ಹಾಗೂ ನ್ಯೂಯಾರ್ಕ್, ನ್ಯೂಜೆರ್ಸಿ, ಪೆನ್ಸಿಲ್ವೇನಿಯಾ, ಇಂಡಿಯಾನಾ, ಓಹಿಯೋ ಮತ್ತು ನಾರ್ತ್ ಕೆರೊಲಿಯಾದ ಅನೇಕರು ಶನಿವಾರ ಕಾರು ರ‍್ಯಾಲಿ ನಡೆಸಿದ್ದರು.

ಮೋದಿ ಪ್ರತಿಕೃತಿಗೆ ನೇಣು: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಂತೆ ಕೆಲವರು ಭಾರತ ವಿರುದ್ಧ ಪೋಸ್ಟರ್ಸ್​ಗಳು ಹಾಗೂ ಬ್ಯಾನರ್​ಗಳನ್ನು ಪ್ರದರ್ಶಿಸುವ ಜೊತೆಗೆ ‘ಖಾಲಿಸ್ತಾನ ರಿಪಬ್ಲಿಕ್’ ಧ್ವಜವನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಸ್ವಲ್ಪ ಸಮಯದ ಬಳಿಕ 2000ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂದಿನ ಅಮೇರಿಕ ಅಧ್ಯಕ್ಷ ಬಿಲ್ ಕ್ಲಿಂಟನ್ ಸಮ್ಮುಖದಲ್ಲಿ ಅನಾವರಣಗೊಳಿಸಿದ ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜವನ್ನು ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?