AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜ ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ
ಮಹಾತ್ಮ ಗಾಂಧಿ ಪ್ರತಿಮೆ
sandhya thejappa
| Edited By: |

Updated on: Dec 13, 2020 | 11:56 AM

Share

ವಾಷಿಂಗ್ಟನ್: ಭಾರತದ ಸಂಸತ್ತು ಅಂಗೀಕರಿಸಿರುವ ಕೃಷಿ ಕಾನೂನುಗಳ ವಿರುದ್ಧ ವಾಷಿಂಗ್ಟನ್​ನಲ್ಲಿ ಪ್ರತಿಭಟಿಸುತ್ತಿರುವ ಭಾರತ ಮೂಲದ ಸಿಖ್ಖರಿಗೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಬೆಂಬಲ ಘೋಷಿಸಿದ್ದಾರೆ. ವಾಷಿಂಗ್ಟನ್​ನ ಭಾರತೀಯ ರಾಯಭಾರ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸುತ್ತ ಶನಿವಾರ (ಡಿ.12) ತಮ್ಮ ಧ್ವಜವನ್ನು ಕಟ್ಟಿ ವಿರೂಪಗೊಳಿಸಿದ್ದಾರೆ.

ವಾಷಿಂಗ್ಟನ್, ಮೇರಿಲ್ಯಾಂಡ್ ಮತ್ತು ವರ್ಜೀನಿಯಾ ಸುತ್ತಮುತ್ತಲಿನ ನೂರಾರು ಸಿಖ್ಖರು, ಹಾಗೂ ನ್ಯೂಯಾರ್ಕ್, ನ್ಯೂಜೆರ್ಸಿ, ಪೆನ್ಸಿಲ್ವೇನಿಯಾ, ಇಂಡಿಯಾನಾ, ಓಹಿಯೋ ಮತ್ತು ನಾರ್ತ್ ಕೆರೊಲಿಯಾದ ಅನೇಕರು ಶನಿವಾರ ಕಾರು ರ‍್ಯಾಲಿ ನಡೆಸಿದ್ದರು.

ಮೋದಿ ಪ್ರತಿಕೃತಿಗೆ ನೇಣು: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಂತೆ ಕೆಲವರು ಭಾರತ ವಿರುದ್ಧ ಪೋಸ್ಟರ್ಸ್​ಗಳು ಹಾಗೂ ಬ್ಯಾನರ್​ಗಳನ್ನು ಪ್ರದರ್ಶಿಸುವ ಜೊತೆಗೆ ‘ಖಾಲಿಸ್ತಾನ ರಿಪಬ್ಲಿಕ್’ ಧ್ವಜವನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಸ್ವಲ್ಪ ಸಮಯದ ಬಳಿಕ 2000ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂದಿನ ಅಮೇರಿಕ ಅಧ್ಯಕ್ಷ ಬಿಲ್ ಕ್ಲಿಂಟನ್ ಸಮ್ಮುಖದಲ್ಲಿ ಅನಾವರಣಗೊಳಿಸಿದ ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜವನ್ನು ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?