AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜ ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ವಾಷಿಂಗ್ಟನ್​ನ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ
ಮಹಾತ್ಮ ಗಾಂಧಿ ಪ್ರತಿಮೆ
sandhya thejappa
| Edited By: |

Updated on: Dec 13, 2020 | 11:56 AM

Share

ವಾಷಿಂಗ್ಟನ್: ಭಾರತದ ಸಂಸತ್ತು ಅಂಗೀಕರಿಸಿರುವ ಕೃಷಿ ಕಾನೂನುಗಳ ವಿರುದ್ಧ ವಾಷಿಂಗ್ಟನ್​ನಲ್ಲಿ ಪ್ರತಿಭಟಿಸುತ್ತಿರುವ ಭಾರತ ಮೂಲದ ಸಿಖ್ಖರಿಗೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ಬೆಂಬಲ ಘೋಷಿಸಿದ್ದಾರೆ. ವಾಷಿಂಗ್ಟನ್​ನ ಭಾರತೀಯ ರಾಯಭಾರ ಕಚೇರಿ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸುತ್ತ ಶನಿವಾರ (ಡಿ.12) ತಮ್ಮ ಧ್ವಜವನ್ನು ಕಟ್ಟಿ ವಿರೂಪಗೊಳಿಸಿದ್ದಾರೆ.

ವಾಷಿಂಗ್ಟನ್, ಮೇರಿಲ್ಯಾಂಡ್ ಮತ್ತು ವರ್ಜೀನಿಯಾ ಸುತ್ತಮುತ್ತಲಿನ ನೂರಾರು ಸಿಖ್ಖರು, ಹಾಗೂ ನ್ಯೂಯಾರ್ಕ್, ನ್ಯೂಜೆರ್ಸಿ, ಪೆನ್ಸಿಲ್ವೇನಿಯಾ, ಇಂಡಿಯಾನಾ, ಓಹಿಯೋ ಮತ್ತು ನಾರ್ತ್ ಕೆರೊಲಿಯಾದ ಅನೇಕರು ಶನಿವಾರ ಕಾರು ರ‍್ಯಾಲಿ ನಡೆಸಿದ್ದರು.

ಮೋದಿ ಪ್ರತಿಕೃತಿಗೆ ನೇಣು: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಂತೆ ಕೆಲವರು ಭಾರತ ವಿರುದ್ಧ ಪೋಸ್ಟರ್ಸ್​ಗಳು ಹಾಗೂ ಬ್ಯಾನರ್​ಗಳನ್ನು ಪ್ರದರ್ಶಿಸುವ ಜೊತೆಗೆ ‘ಖಾಲಿಸ್ತಾನ ರಿಪಬ್ಲಿಕ್’ ಧ್ವಜವನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ಸ್ವಲ್ಪ ಸಮಯದ ಬಳಿಕ 2000ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅಂದಿನ ಅಮೇರಿಕ ಅಧ್ಯಕ್ಷ ಬಿಲ್ ಕ್ಲಿಂಟನ್ ಸಮ್ಮುಖದಲ್ಲಿ ಅನಾವರಣಗೊಳಿಸಿದ ಮಹಾತ್ಮ ಗಾಂಧಿ ಪ್ರತಿಮೆಯ ತಲೆ, ಮುಖದ ಮೇಲೆ ಹಳದಿ ಬಣ್ಣದ ಧ್ವಜವನ್ನು ಹೊದಿಸಿ, ಹಲಗೆ ಹಾಗೂ ಫಲಕಗಳನ್ನು ಅಂಟಿಸಿದರು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯ ಕುತ್ತಿಗೆಗೆ ಹಗ್ಗದಿಂದ ನೇತು ಹಾಕಿದರು.

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್