Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಭಾರತೀಯ ರಾಯಭಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಖಲಿಸ್ತಾನಿಗಳು

ಅಮೆರಿಕಾದ ನ್ಯೂಯಾರ್ಕ್​​​ನ ಗುರುದ್ವಾರದಲ್ಲಿ ಭಾರತೀಯ ರಾಯಭಾರಿ ಅಧಿಕಾರಿ ಸಂಧು ಅವರು ಮೇಲೆ ಖಲಿಸ್ತಾನಿ ಪರವಾದಿಗಳು ಹಲ್ಲೆ ನಡೆಸಿದ್ದಾರೆ.

ಅಮೆರಿಕದಲ್ಲಿ ಭಾರತೀಯ ರಾಯಭಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಖಲಿಸ್ತಾನಿಗಳು
ಭಾರತೀಯ ರಾಯಭಾರಿ ಅಧಿಕಾರಿ ಸಂಧು
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 27, 2023 | 2:14 PM

ನ್ಯೂಯಾರ್ಕ್, ನ.27: ಅಮೆರಿಕಾದ ನ್ಯೂಯಾರ್ಕ್​​​ನ ಗುರುದ್ವಾರದಲ್ಲಿ ಭಾರತೀಯ ರಾಯಭಾರಿ ಅಧಿಕಾರಿ ಸಂಧು ಅವರ ಮೇಲೆ ಖಲಿಸ್ತಾನಿ ಪರವಾದಿಗಳು ಹಲ್ಲೆ ನಡೆಸಿದ್ದಾರೆ. ತರಂಜಿತ್ ಸಿಂಗ್ ಸಂಧು ಅವರು ನ್ಯೂಯಾರ್ಕ್‌ನ ಲಾಂಗ್ ಐಲ್ಯಾಂಡ್‌ನಲ್ಲಿರುವ ಹಿಕ್ಸ್‌ವಿಲ್ಲೆ ಗುರುದ್ವಾರಕ್ಕೆ ಭೇಟಿ ನೀಡುತ್ತಿದ್ದಾಗ ಈ ಘಟನೆ ನಡೆದಿದೆ. ತರಂಜಿತ್ ಸಿಂಗ್ ಸಂಧು ಅವರು ಗುರುದ್ವಾರಕ್ಕೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದರು ಎಂದು ಹೇಳಲಾಗಿದೆ.

ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಲದಲ್ಲಿ ವೈರಲ್​​​ ಆಗಿದೆ. ಭಾರತ ಉಗ್ರರ ಪಟ್ಟಿಯಲ್ಲಿದ್ದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಾಗೂ ಗುರುಪತ್ವಂತ್ ಸಿಂಗ್ ಪನ್ನುನ್ ಅವರ ಬಗ್ಗೆ ಭಾರತ ಸರ್ಕಾರದ ವಿರೋಧಿ ನೀತಿ ಬಗ್ಗೆ ಅಸಮಾಧನಗೊಂಡಿರುಬ ಖಲಿಸ್ತಾನಿ ಪರವಾದಿಗಳು ಈ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಗುರುದ್ವಾರದ ಆವರಣದ ಬಳಿ ಭಾರತೀಯ ರಾಯಭಾರಿ ಅಧಿಕಾರಿ ತರಂಜಿತ್ ಸಿಂಗ್ ಸಂಧು ಅವರ ಕಾರು ಪ್ರವೇಶಿಸುತ್ತಿದ್ದಂತೆ ಒಬ್ಬ ವ್ಯಕ್ತಿ ಖಲಿಸ್ತಾನಿ ಧ್ವಜವನ್ನು ಹಿಡಿದುಕೊಂಡು ಅವರ ಮುಂದೆ ಪ್ರತಿಭಟನೆ ಮಾಡಿದ್ದಾನೆ. ಇದರ ಜತೆಗೆ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ಕೆನಡಾ, ಯುಕೆ, ಆಸ್ಟ್ರೇಲಿಯಾ ಮತ್ತು ಯುಎಸ್‌ಯಲ್ಲಿ ಉಗ್ರ ಸಂಘಟನೆಗಳ ದಬ್ಬಾಳಿಕೆ ಹೆಚ್ಚಾಗಿದೆ ಎಂದು ಭಾರತದ ಹೇಳಿದೆ.

ಇದನ್ನೂ ಓದಿ: ಪಂಜಾಬ್, ಹರ್ಯಾಣದಲ್ಲಿ ಖಲಿಸ್ತಾನಿ ಉಗ್ರರ ನಂಟಿರುವ 15 ಸ್ಥಳಗಳಲ್ಲಿ ಎನ್​ಐಎ ದಾಳಿ

ಕೆನಡಾದಲ್ಲಿ ನಡೆದ ಹರ್ದೀಪ್ ಸಿಂಗ್ ನಿಜ್ಜರ್​​​ ಹತ್ಯೆ ನಂತರ ಅನೇಕ ಕಡೆ ಇಂತಹ ಘಟನೆಗಳು ಹೆಚ್ಚಾಗಿದೆ. ಭಾರತದ ಮೇಲೆ ಕಾರಣಗಳಿಲ್ಲದೆ ದಾಳಿಯನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್​​​ನ ಮೇಲೆ ಇರುವ ಭಾರತದ ಧ್ವಜವನ್ನು ಇಳಿಸಸಿ ಪ್ರತಿಭಟನೆಯನ್ನು ನಡೆಸಿತ್ತು. ನಂತರ ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್​​​ಗೆ ಬೆಂಕಿಯನ್ನು ಹಚ್ಚಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:41 am, Mon, 27 November 23

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್