AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ?

ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾನೆ. ಇದರಿಂದ ಕೆರಳಿದ ಇರಾನ್ ಇದಕ್ಕೆ ಪ್ರತೀಕಾರ ತೀರಿಸಿಯೇ ತೀರುತ್ತೇವೆ ಎಂದು ಸಂದೇಶ ರವಾನಿಸಿದ್ದು, ವಿವಿಧ ರಾಷ್ಟ್ರಗಳಲ್ಲಿರುವ ಅಮೆರಿಕದ ಬಂದುರು, ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಇರಾನ್ ತನ್ನ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ ಮಾಡಿದೆ.

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ  ಅಲಿರೆಜಾ ಅರಾಫಿ?
Alireza Arafi
ರಮೇಶ್ ಬಿ. ಜವಳಗೇರಾ
|

Updated on:Mar 01, 2026 | 8:25 PM

Share

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ.

ಇರಾನ್‌ ಸಂವಿಧಾನಿಕ ಪ್ರಕ್ರಿಯೆಯ ಅಡಿಯಲ್ಲಿ ಆಯ್ಕೆ ಮಾಡಿ ಅವರಿಗೆ ಈ ಇರಾನ್‌ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲು ತಾತ್ಕಾಲಿಕ ನ್ಯಾಯಮಂಡಳಿಯನ್ನು ನೇಮಿಸಿದ್ದು, ಇದರ ಮುಖ್ಯ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಕಾರ್ಯನಿರ್ವಹಿಸಲಿದ್ದಾರೆ. ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್‌ಹೊಸೇನ್ ಮೊಹ್ಸೆನಿ ಎಜೆಯ್ ಸಹ ಮಂಡಳಿಯಲ್ಲಿದ್ದಾರೆ. ಅಲ್ಲದೆ, ಇವರು ಇರಾನ್‌ ನ ಮುಂದಿನ ಸರ್ವೋಚ್ಚ ನಾಯಕನ್ನನ್ನು ಆಯ್ಕೆ ಮಾಡುವ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೂಲಕ ಇಲ್ಲಿಯವರೆಗೂ ಇರಾನ್‌ ನಲ್ಲಿ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕನ್ನು ಅಲಿರೆಜಾ ಹೊಂದಿದ್ದಾರೆ.

ಇದನ್ನೂ ಓದಿ: ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ?

ಯಾರು ಈ ಮಧ್ಯಂತರ ಸುಪ್ರೀಂ ಲೀಡರ್‌ ಅಲಿರೆಜಾ?

ಖಮೇನಿ ಸಾವಿನ ಬಳಿಕ ತಕ್ಷಣವೇ ಮತ್ತೊಬ್ಬ ನಾಯಕನನ್ನು ಘೋಷಣೆ ಮಾಡಿದೆ. ಆದರೆ, ಇದಕ್ಕೂ ಮೊದಲೇ ತುರ್ತು ಪರಿಸ್ಥಿತಿಯಲ್ಲಿ ಇರಾನ್‌ ಸರ್ಕಾರವನ್ನು ಮುನ್ನಡೆಸುವ ಶಕ್ತಿ ಬೇಕು ಎಂಬುದನ್ನು ಮೊದಲೇ ಅರಿತಿದ್ದ ಖಮೇನಿ, ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿದ್ದ ತಮ್ಮ ಆಪ್ತ ಅಲಿರೆಜಾ ಅವರನ್ನು ಆಯ್ಕೆ ಮಾಡಿದ್ದಾರೆಂಬ ಸುದ್ದಿ ಹರಡುತ್ತಿದ್ದವು. ಇದೀಗ ಖಮೇನಿ ಹತ್ಯೆ ಬೆನ್ನಲ್ಲೇ ಇರಾನ್‌ ನ ಮಧ್ಯಂತರ ಸುಪ್ರೀಂ ಲೀಡರ್‌ ಆಗಿ ಇರಾನ್‌ ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ ಅವರನ್ನ ಆಯ್ಕೆ ಮಾಡಲಾಗಿದೆ.

1959ರಲ್ಲಿ ಜನಿಸಿದ ಅಲಿರೆಜಾ ಅರಾಫಿ, ಇರಾನ್‌ನ ಧಾರ್ಮಿಕ ಸ್ಥಾಪನೆಯಲ್ಲಿ ಪ್ರಮುಖರಾಗಿದ್ದು, ಮಧ್ಯಂತರ ಸುಪ್ರೀಂ ಲೀಡರ್‌ ಆಗುವುದಕ್ಕೂ ಮುನ್ನ ಇರಾನ್‌ ಸರ್ಕಾರದಲ್ಲಿ ಇರಾನ್‌ನ ರಾಷ್ಟ್ರವ್ಯಾಪಿ ಇಸ್ಲಾಮಿಕ್ ಸೆಮಿನರಿ ವ್ಯವಸ್ಥೆಯ ನಿರ್ದೇಶಕರು, ಪ್ರಬಲ ಗಾರ್ಡಿಯನ್ ಕೌನ್ಸಿಲ್‌ನ ಪರಿಶೀಲನಾ ಸದಸ್ಯರು ಮತ್ತು ತಜ್ಞರ ಸಭೆಯ ಹಾಲಿ ಸದಸ್ಯರು ಹೀಗೆ ಏಕಕಾಲಕ್ಕೆ 3 ಅತ್ಯಂತ ಶಕ್ತಿಯುತ ಹುದ್ದೆಯಲ್ಲಿದ್ದರು.

ಕೋಮ್‌ನ ಸಾಂಪ್ರದಾಯಿಕ ಕ್ಲೆರಿಕಲ್ ರಚನೆಯಲ್ಲಿ ಆಳವಾಗಿ ಹುದುಗಿದ್ದರೂ, ಅರಾಫಿ ಸ್ವಲ್ಪ ವಿಭಿನ್ನವಾದ ಆಡಳಿತ ವ್ಯವಸ್ಥೆಯ ಒಳಗಿನವರನ್ನು ಪ್ರತಿನಿಧಿಸುತ್ತಾರೆ.ಇರಾನ್‌ ನಲ್ಲಿ ಅರೇಬಿಕ್ ಮತ್ತು ಇಂಗ್ಲಿಷ್ ಎರಡರಲ್ಲೂ ನಿರರ್ಗಳವಾಗಿ ಮಾತನಾಡುವ ಬಹುಭಾಷಾ ಪಂಡಿತರಾಗಿದ್ದು, ತಾಂತ್ರಿಕವಾಗಿಯೂ ಸಹ ಪ್ರಾವಿಣ್ಯತೆಯನ್ನು ಹೊಂದಿದ್ದಾರೆ. ಅಲ್ಲದೆ, ಜಾಗತಿಕವಾಗಿ ತನ್ನ ಸೈದ್ಧಾಂತಿಕ ಸಂದೇಶವನ್ನು ಹರಡಲು ಆಡಳಿತವು ಕೃತಕ ಬುದ್ಧಿಮತ್ತೆಗೆ ಹೊಂದಿಕೊಳ್ಳುವ ಅಗತ್ಯತೆಯ ಬಗ್ಗೆಯೂ ಉತ್ತಮ ನಿಲುವನ್ನು ಹೊಂದಿದ್ದು, ಇರಾನ್‌ ನಲ್ಲಿ ಇವರನ್ನು ಹೆಚ್ಚು ವಿದ್ಯಾವಂತರೆಂದು ಪರಿಗಣಿಸಲಾಗುತ್ತದೆ.

ಇನ್ನು, ಉದ್ವಿಗ್ನತೆಯ ಸಮಯದಲ್ಲಿ ಅಲಿರೆಜಾ ಅರಾಫಿಯನ್ನು ಮಧ್ಯಂತರ ಸುಪ್ರೀಂ ನಾಯರನ್ನಾಗಿ ಆಯ್ಕೆ ಮಾಡಿರುವುದು ಸೈದ್ದಾಂತಿಕವಾಗಿ ಸಂಕೇತದಂತಿದೆ. ಈ ಹಿಂದೆ ಇರಾನ್‌ ನ ಇಸ್ಲಾಮಿಕ್‌ ಗಣರಾಜ್ಯದ ಸಿದ್ಧಾಂತವನ್ನು ವಿದೇಶಗಳಿಗೆ ರಫ್ತು ಮಾಡಲು ಮೀಸಲಾಗಿರುವ ಬೃಹತ್ ಧಾರ್ಮಿಕ ಕೇಂದ್ರವಾದ ಅಲ್-ಮುಸ್ತಫಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

ಸದ್ಯ ಅಮೆರಿಕ-ಇಸ್ರೇಲ್‌ ಜಂಟಿಯಾಗಿ ತಮ್ಮ ರಾಷ್ಟ್ರದ ಮೇಲೆ ಯುದ್ದ ಸಾರಿದ್ದು, ಇದನ್ನು ಹೇಗೆ ನಿಭಾಯಿಸುತ್ತಾರೆ? ಯುದ್ಧದಿಂದ ತಮ್ಮ ದೇಶವನ್ನು ರಕ್ಷಣೆ ಮಾಡುವ ಸವಾಲು ಈ ಹೊಸ ಸುಪ್ರೀಂ ಲೀಡರ್‌ ಅಲಿರೆಜಾ ಮೇಲಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Sun, 1 March 26

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ