AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಹಸ್ಯವಾಗಿ ಇರಾನ್ ಸರ್ವೋಚ್ಚ ನಾಯಕನ ಉತ್ತರಾಧಿಕಾರಿ ಆಯ್ಕೆ

ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯನ್ನು ರಹಸ್ಯವಾಗಿ ಆಯ್ಕೆ ಮಾಡಿದೆ. ಅನಾರೋಗ್ಯದಿಂದ ಬಳಲುತ್ತಿರುವ 85 ವರ್ಷದ ಅಲಿ ಖಮೇನಿ ಅವರ ಎರಡನೇ ಪುತ್ರ ಮೊಜ್ತಾಬಾ ಖಮೇನಿ ಅವರು ಟೆಹ್ರಾನ್‌ನಲ್ಲಿ ದೇಶದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ರಹಸ್ಯವಾಗಿ ಇರಾನ್ ಸರ್ವೋಚ್ಚ ನಾಯಕನ  ಉತ್ತರಾಧಿಕಾರಿ ಆಯ್ಕೆ
ಅಲಿImage Credit source: Republicworld.com
ನಯನಾ ರಾಜೀವ್
|

Updated on: Nov 18, 2024 | 11:06 AM

Share

ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯನ್ನು ರಹಸ್ಯವಾಗಿ ಆಯ್ಕೆ ಮಾಡಿದೆ. ಅನಾರೋಗ್ಯದಿಂದ ಬಳಲುತ್ತಿರುವ 85 ವರ್ಷದ ಅಲಿ ಖಮೇನಿ ಅವರ ಎರಡನೇ ಪುತ್ರ ಮೊಜ್ತಾಬಾ ಖಮೇನಿ ಅವರು ಟೆಹ್ರಾನ್‌ನಲ್ಲಿ ದೇಶದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ಇಸ್ರೇಲ್‌ನೊಂದಿಗಿನ ಉದ್ವಿಗ್ನತೆ ಮತ್ತು ಯುದ್ಧದ ಅಪಾಯದ ಮಧ್ಯೆ ಇರಾನ್ ಈ ವರ್ಷ ನಾಯಕತ್ವದಲ್ಲಿ ಪ್ರಮುಖ ಬದಲಾವಣೆಯನ್ನು ಕಾಣುವ ಸಾಧ್ಯತೆಯಿದೆ. ಪರ್ಷಿಯನ್ ಭಾಷೆಯ ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆ ಇರಾನ್ ಇಂಟರ್ ನ್ಯಾಷನಲ್ ತನ್ನ ವರದಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.

ವರದಿಗಳ ಪ್ರಕಾರ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇರಾನ್‌ನ ಸರ್ವೋಚ್ಚ ನಾಯಕ ಸಾವಿಗೆ ಮುನ್ನ ಅಧಿಕಾರದಿಂದ ಕೆಳಗಿಳಿಯಬಹುದು. ಅಂದರೆ ಮೊಜ್ತಾಬಾ ತನ್ನ ತಂದೆ ಬದುಕಿರುವವರೆಗೂ ಹುದ್ದೆಯನ್ನು ವಹಿಸಿಕೊಳ್ಳಬಹುದು. ಅಲಿ ಖಮೇನಿ ಅವರ ಬೇಡಿಕೆಯ ಮೇರೆಗೆ ಇರಾನ್‌ನ ತಜ್ಞರ ಅಸೆಂಬ್ಲಿಯ 60 ಸದಸ್ಯರು ಸೆಪ್ಟೆಂಬರ್ 26 ರಂದು ಸಭೆಯನ್ನು ಕರೆದಿದ್ದರು ಎಂದು ವರದಿ ಹೇಳಿದೆ. ಈ ಸಭೆಯಲ್ಲಿ ಯಾವುದೇ ಪೂರ್ವ ಸೂಚನೆ ನೀಡದೆ ಗೌಪ್ಯತೆಯಡಿಯಲ್ಲಿ ತಕ್ಷಣವೇ ಉತ್ತರಾಧಿಕಾರವನ್ನು ನಿರ್ಧರಿಸುವಂತೆ ಸದಸ್ಯರಿಗೆ ಸೂಚಿಸಲಾಯಿತು.

ಮತ್ತಷ್ಟು ಓದಿ: Fact Check: ಇರಾನ್‌ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯ ಕೊಲೆ?

ಆರಂಭದ ವಿರೋಧದ ನಡುವೆಯೂ ಅಂತಿಮವಾಗಿ ಸಭೆಯಲ್ಲಿದ್ದ ಸದಸ್ಯರು ಸರ್ವಾನುಮತದಿಂದ ಮೊಜ್ತಾಬಾ ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದರು. ನಾಯಕನ ಆಯ್ಕೆಗಾಗಿ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಸಭೆಯನ್ನು ಗೌಪ್ಯವಾಗಿಡಲು ಸದಸ್ಯರಿಗೆ ಎಚ್ಚರಿಕೆ ನೀಡಲಾಯಿತು. ಸಾರ್ವಜನಿಕರ ವ್ಯಾಪಕ ಪ್ರತಿಭಟನೆಯ ಭೀತಿಯಿಂದ ಈ ರೀತಿ ಮಾಡಲಾಗಿದೆ.

ಸಭೆಯ ವಿವರಗಳನ್ನು ಐದು ವಾರಗಳ ಕಾಲ ಗೌಪ್ಯವಾಗಿಡಲಾಗಿತ್ತು. ಕಳೆದ ಎರಡು ವರ್ಷಗಳಿಂದ, ಮೊಜ್ತಾಬಾ ತನ್ನ ತಂದೆಯ ಜವಾಬ್ದಾರಿ ತೆಗೆದುಕೊಳ್ಳಲು ತಯಾರಿ ನಡೆಸುತ್ತಿದ್ದಾರೆ.

ಇರಾನ್‌ನ ಸರ್ವೋಚ್ಚ ನಾಯಕನು ತನ್ನ ಎರಡನೇ ಮಗನನ್ನು ಜೀವಂತವಾಗಿರುವಾಗಲೇ ಅಧಿಕಾರವನ್ನು ಹಸ್ತಾಂತರಿಸಬಹುದೆಂದು ಸೂಚಿಸಿದ್ದು, ಸುಗಮ ವರ್ಗಾವಣೆಗೆ ತಯಾರಿ ನಡೆಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮೊಜ್ತಾಬಾ ಅವರ ನಾಯಕತ್ವವನ್ನು ಭದ್ರಪಡಿಸಿಕೊಳ್ಳಲು ಮತ್ತು ಅವರ ನಿಧನದ ನಂತರ ಉಂಟಾಗಬಹುದಾದ ನಿರೀಕ್ಷಿತ ಪ್ರತಿಭಟನೆಗಳನ್ನು ತಡೆಯಲು ಖಮೇನಿ ಆಶಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ