AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಹಸ್ಯವಾಗಿ ಇರಾನ್ ಸರ್ವೋಚ್ಚ ನಾಯಕನ ಉತ್ತರಾಧಿಕಾರಿ ಆಯ್ಕೆ

ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯನ್ನು ರಹಸ್ಯವಾಗಿ ಆಯ್ಕೆ ಮಾಡಿದೆ. ಅನಾರೋಗ್ಯದಿಂದ ಬಳಲುತ್ತಿರುವ 85 ವರ್ಷದ ಅಲಿ ಖಮೇನಿ ಅವರ ಎರಡನೇ ಪುತ್ರ ಮೊಜ್ತಾಬಾ ಖಮೇನಿ ಅವರು ಟೆಹ್ರಾನ್‌ನಲ್ಲಿ ದೇಶದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ರಹಸ್ಯವಾಗಿ ಇರಾನ್ ಸರ್ವೋಚ್ಚ ನಾಯಕನ  ಉತ್ತರಾಧಿಕಾರಿ ಆಯ್ಕೆ
ಅಲಿImage Credit source: Republicworld.com
ನಯನಾ ರಾಜೀವ್
|

Updated on: Nov 18, 2024 | 11:06 AM

Share

ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯನ್ನು ರಹಸ್ಯವಾಗಿ ಆಯ್ಕೆ ಮಾಡಿದೆ. ಅನಾರೋಗ್ಯದಿಂದ ಬಳಲುತ್ತಿರುವ 85 ವರ್ಷದ ಅಲಿ ಖಮೇನಿ ಅವರ ಎರಡನೇ ಪುತ್ರ ಮೊಜ್ತಾಬಾ ಖಮೇನಿ ಅವರು ಟೆಹ್ರಾನ್‌ನಲ್ಲಿ ದೇಶದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ಇಸ್ರೇಲ್‌ನೊಂದಿಗಿನ ಉದ್ವಿಗ್ನತೆ ಮತ್ತು ಯುದ್ಧದ ಅಪಾಯದ ಮಧ್ಯೆ ಇರಾನ್ ಈ ವರ್ಷ ನಾಯಕತ್ವದಲ್ಲಿ ಪ್ರಮುಖ ಬದಲಾವಣೆಯನ್ನು ಕಾಣುವ ಸಾಧ್ಯತೆಯಿದೆ. ಪರ್ಷಿಯನ್ ಭಾಷೆಯ ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆ ಇರಾನ್ ಇಂಟರ್ ನ್ಯಾಷನಲ್ ತನ್ನ ವರದಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.

ವರದಿಗಳ ಪ್ರಕಾರ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇರಾನ್‌ನ ಸರ್ವೋಚ್ಚ ನಾಯಕ ಸಾವಿಗೆ ಮುನ್ನ ಅಧಿಕಾರದಿಂದ ಕೆಳಗಿಳಿಯಬಹುದು. ಅಂದರೆ ಮೊಜ್ತಾಬಾ ತನ್ನ ತಂದೆ ಬದುಕಿರುವವರೆಗೂ ಹುದ್ದೆಯನ್ನು ವಹಿಸಿಕೊಳ್ಳಬಹುದು. ಅಲಿ ಖಮೇನಿ ಅವರ ಬೇಡಿಕೆಯ ಮೇರೆಗೆ ಇರಾನ್‌ನ ತಜ್ಞರ ಅಸೆಂಬ್ಲಿಯ 60 ಸದಸ್ಯರು ಸೆಪ್ಟೆಂಬರ್ 26 ರಂದು ಸಭೆಯನ್ನು ಕರೆದಿದ್ದರು ಎಂದು ವರದಿ ಹೇಳಿದೆ. ಈ ಸಭೆಯಲ್ಲಿ ಯಾವುದೇ ಪೂರ್ವ ಸೂಚನೆ ನೀಡದೆ ಗೌಪ್ಯತೆಯಡಿಯಲ್ಲಿ ತಕ್ಷಣವೇ ಉತ್ತರಾಧಿಕಾರವನ್ನು ನಿರ್ಧರಿಸುವಂತೆ ಸದಸ್ಯರಿಗೆ ಸೂಚಿಸಲಾಯಿತು.

ಮತ್ತಷ್ಟು ಓದಿ: Fact Check: ಇರಾನ್‌ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ ಮಹಿಳೆಯ ಕೊಲೆ?

ಆರಂಭದ ವಿರೋಧದ ನಡುವೆಯೂ ಅಂತಿಮವಾಗಿ ಸಭೆಯಲ್ಲಿದ್ದ ಸದಸ್ಯರು ಸರ್ವಾನುಮತದಿಂದ ಮೊಜ್ತಾಬಾ ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದರು. ನಾಯಕನ ಆಯ್ಕೆಗಾಗಿ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಸಭೆಯನ್ನು ಗೌಪ್ಯವಾಗಿಡಲು ಸದಸ್ಯರಿಗೆ ಎಚ್ಚರಿಕೆ ನೀಡಲಾಯಿತು. ಸಾರ್ವಜನಿಕರ ವ್ಯಾಪಕ ಪ್ರತಿಭಟನೆಯ ಭೀತಿಯಿಂದ ಈ ರೀತಿ ಮಾಡಲಾಗಿದೆ.

ಸಭೆಯ ವಿವರಗಳನ್ನು ಐದು ವಾರಗಳ ಕಾಲ ಗೌಪ್ಯವಾಗಿಡಲಾಗಿತ್ತು. ಕಳೆದ ಎರಡು ವರ್ಷಗಳಿಂದ, ಮೊಜ್ತಾಬಾ ತನ್ನ ತಂದೆಯ ಜವಾಬ್ದಾರಿ ತೆಗೆದುಕೊಳ್ಳಲು ತಯಾರಿ ನಡೆಸುತ್ತಿದ್ದಾರೆ.

ಇರಾನ್‌ನ ಸರ್ವೋಚ್ಚ ನಾಯಕನು ತನ್ನ ಎರಡನೇ ಮಗನನ್ನು ಜೀವಂತವಾಗಿರುವಾಗಲೇ ಅಧಿಕಾರವನ್ನು ಹಸ್ತಾಂತರಿಸಬಹುದೆಂದು ಸೂಚಿಸಿದ್ದು, ಸುಗಮ ವರ್ಗಾವಣೆಗೆ ತಯಾರಿ ನಡೆಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮೊಜ್ತಾಬಾ ಅವರ ನಾಯಕತ್ವವನ್ನು ಭದ್ರಪಡಿಸಿಕೊಳ್ಳಲು ಮತ್ತು ಅವರ ನಿಧನದ ನಂತರ ಉಂಟಾಗಬಹುದಾದ ನಿರೀಕ್ಷಿತ ಪ್ರತಿಭಟನೆಗಳನ್ನು ತಡೆಯಲು ಖಮೇನಿ ಆಶಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ