AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ

ಇರಾನ್ ವಿರುದ್ಧದ ಇಸ್ರೇಲ್ ಯುದ್ಧದಿಂದ ಭಯಭೀತರಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ತಮ್ಮ ದೇಶದ ವಿರುದ್ಧ ಭಾರತವು ಸಂಚು ರೂಪಿಸಿದೆ ಎಂದು ಹೇಳಿದ್ದಾರೆ. ಇಸ್ರೇಲ್ ಪಾಕಿಸ್ತಾನವನ್ನು ತನ್ನ ಸಾಮಂತ ರಾಷ್ಟ್ರವಾಗಿ ಪರಿವರ್ತಿಸುತ್ತಿದೆ. ಪಾಕಿಸ್ತಾನದ ವಿರುದ್ಧದ ದ್ವೇಷದಿಂದ ಅಫ್ಘಾನಿಸ್ತಾನ, ಇರಾನ್ ಮತ್ತು ಭಾರತ ಮೈತ್ರಿ ಮಾಡಿಕೊಂಡಿವೆ ಎಂದು ಖವಾಜಾ ಆಸಿಫ್ ಆರೋಪಿಸಿದ್ದಾರೆ.

ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ
Khawaja Asif
ಸುಷ್ಮಾ ಚಕ್ರೆ
|

Updated on: Mar 04, 2026 | 2:52 PM

Share

ಇಸ್ಲಮಾಬಾದ್, ಮಾರ್ಚ್ 4: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಪಾಕಿಸ್ತಾನವನ್ನು ಭಯಭೀತಗೊಳಿಸಿವೆ. ಪಾಕಿಸ್ತಾನವೂ ಇರಾನ್‌ನೊಂದಿಗೆ 900 ಕಿ.ಮೀ. ಉದ್ದದ ಗಡಿಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತನ್ನ ದೇಶದ ಮೇಲೂ ದಾಳಿಯಾಗುವ ಭೀತಿ ಎದುರಾಗಿದೆ. ಇದರ ನಡುವೆ ಇಂತಹ ಸಂಘರ್ಷದ ಸಮಯದಲ್ಲೂ ಭಾರತದ ಮೇಲೆ ಗೂಬೆ ಕೂರಿಸುವ ಅವಕಾಶವನ್ನು ಪಾಕಿಸ್ತಾನ ಬಿಟ್ಟಿಲ್ಲ. ನಿನ್ನೆ ಸಂಜೆ ಈ ಬೆಳವಣಿಗೆಯ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಪಾಕಿಸ್ತಾನಿ ರಕ್ಷಣಾ ಸಚಿವ ಖವಾಜಾ ಆಸಿಫ್, ನಮ್ಮ ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಇರಾನ್ ಮತ್ತು ಭಾರತ ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಿವೆ. “ಪ್ಯಾಲೆಸ್ಟೈನ್ ಭೂಮಿಯಲ್ಲಿ ಇಸ್ರೇಲ್ ಸ್ಥಾಪನೆಯಾದಾಗಿನಿಂದ ಇಂದಿನವರೆಗೆ ಇಸ್ಲಾಮಿಕ್ ಜಗತ್ತಿನಲ್ಲಿ ಸಂಭವಿಸಿದ ಪ್ರತಿಯೊಂದು ವಿಪತ್ತು, ಅದರ ಮೇಲೆ ಹೇರಲಾದ ಪ್ರತಿಯೊಂದು ಯುದ್ಧಕ್ಕೆ ಜಿಯೋನಿಸ್ಟ್ ಸಿದ್ಧಾಂತ ಕಾರಣವೆಂದು ತೋರಿಸುತ್ತದೆ. ಅಫ್ಘಾನಿಸ್ತಾನ, ಇರಾನ್ ಮತ್ತು ಭಾರತಗಳು ಪಾಕಿಸ್ತಾನದ ವಿರುದ್ಧ ದ್ವೇಷದ ಸಂಚನ್ನು ರೂಪಿಸುತ್ತಿವೆ” ಎಂದು ಆಸಿಫ್ ಹೇಳಿದ್ದಾರೆ.

“ಇರಾನ್ ಜೊತೆಗಿನ ಸಂಘರ್ಷಕ್ಕೆ ಜಿಯೋನಿಸ್ಟ್ ಹಿತಾಸಕ್ತಿಗಳು ಕುಮ್ಮಕ್ಕು ನೀಡುತ್ತಿವೆ. ಇರಾನ್ ಒಪ್ಪಂದಕ್ಕೆ ಬರಲು ಮುಕ್ತವಾಗಿದ್ದರೂ ಸಂಘರ್ಷವನ್ನು ಇರಾನ್ ಮೇಲೆ ಹೇರಲಾಗಿದೆ” ಎಂದು ಟೀಕಿಸಿದ್ದಾರೆ. ಇಸ್ರೇಲಿನ ಗೆಲುವು ಅಫ್ಘಾನಿಸ್ತಾನ, ಭಾರತ ಮತ್ತು ಇರಾನ್‌ಗಳನ್ನು ಒಳಗೊಂಡ ಸಂಘಟಿತ ಯೋಜನೆಗೆ ಕಾರಣವಾಗಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು

“ಅಫ್ಘಾನಿಸ್ತಾನ, ಇರಾನ್ ಮತ್ತು ಭಾರತದ ಜಂಟಿಯಾಗಿ ಪಾಕಿಸ್ತಾನದ ವಿರುದ್ಧ ದ್ವೇಷ ಕಾರುತ್ತಿವೆ. ಇದರಿಂದ ನಮ್ಮ ಗಡಿಗಳು ಅಸುರಕ್ಷಿತವಾಗುತ್ತಿವೆ. ಎಲ್ಲಾ ಕಡೆಯ ಶತ್ರುಗಳಿಂದ ನಮ್ಮನ್ನು ಸುತ್ತುವರೆಯಲಾಗಿದೆ. ಪಾಕಿಸ್ತಾನವನ್ನು ಸಾಮಂತ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?