AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌ ಬೌ ಬಿರಿಯಾನಿಗಾಗಿ ನಾಯಿ ಬೇಟೆಗೆ ಇಳಿದ ಸರ್ವಾಧಿಕಾರಿ ಕಿಮ್​: ಉ.ಕೊರಿಯಾ ಗಢಗಢ!

ಸರ್ವಾಧಿಕಾರದ ಕಪಿಮುಷ್ಟಿಯಲ್ಲಿ ಸಿಲುಕಿರುವ ಕೆಲವು ದೇಶಗಳಲ್ಲಿ ಉತ್ತರ ಕೊರಿಯಾ ಸಹ ಒಂದು. ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್​ ಉನ್​ ನುಡಿದಿದ್ದೇ ಆಜ್ಞೆ, ಬರೆದದ್ದೇ ಶಾಸನ! ಇದೀಗ ಈ ಹುಚ್ಚು ಮನಸ್ಸಿನ ಕೆಟ್ಟ ಹಠದ ಸರ್ವಾಧಿಕಾರಿ ಬಹು ಚಾಣಾಕ್ಷ ಆಜ್ಞೆಯೊಂದನ್ನ ಹೊರಡಿಸಿದ್ದಾನಂತೆ. ಕಿಮ್ ಹೊರಡಿಸಿರುವ ಆದೇಶದ ಪ್ರಕಾರ ಉತ್ತರ ಕೊರಿಯಾದಲ್ಲಿ ಶ್ವಾನಗಳನ್ನು ಸಾಕಿರುವ ಪ್ರತಿ ಮನೆತನವೂ ತಮ್ಮ ನೆಚ್ಚಿನ ಪ್ರಾಣಿಯನ್ನ ಸರ್ಕಾರಿ ಅಧಿಕಾರಿಗಳಿಗೆ ಒಪ್ಪಿಸಬೇಕಂತೆ. ಉನ್ನತ ಮೂಲಗಳ ಪ್ರಕಾರ ವಶಪಡಿಸಿಕೊಂಡ ಶ್ವಾನಗಳ ಮಾಂಸವನ್ನ ಆಹಾರಕ್ಕಾಗಿ ಬಳಸಲಾಗುವುದು ಎಂದು ತಿಳಿದುಬಂದಿದೆ. […]

ಬೌ ಬೌ ಬಿರಿಯಾನಿಗಾಗಿ ನಾಯಿ ಬೇಟೆಗೆ ಇಳಿದ ಸರ್ವಾಧಿಕಾರಿ ಕಿಮ್​: ಉ.ಕೊರಿಯಾ ಗಢಗಢ!
KUSHAL V
| Edited By: |

Updated on: Aug 19, 2020 | 2:47 PM

Share

ಸರ್ವಾಧಿಕಾರದ ಕಪಿಮುಷ್ಟಿಯಲ್ಲಿ ಸಿಲುಕಿರುವ ಕೆಲವು ದೇಶಗಳಲ್ಲಿ ಉತ್ತರ ಕೊರಿಯಾ ಸಹ ಒಂದು. ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್​ ಉನ್​ ನುಡಿದಿದ್ದೇ ಆಜ್ಞೆ, ಬರೆದದ್ದೇ ಶಾಸನ! ಇದೀಗ ಈ ಹುಚ್ಚು ಮನಸ್ಸಿನ ಕೆಟ್ಟ ಹಠದ ಸರ್ವಾಧಿಕಾರಿ ಬಹು ಚಾಣಾಕ್ಷ ಆಜ್ಞೆಯೊಂದನ್ನ ಹೊರಡಿಸಿದ್ದಾನಂತೆ.

ಕಿಮ್ ಹೊರಡಿಸಿರುವ ಆದೇಶದ ಪ್ರಕಾರ ಉತ್ತರ ಕೊರಿಯಾದಲ್ಲಿ ಶ್ವಾನಗಳನ್ನು ಸಾಕಿರುವ ಪ್ರತಿ ಮನೆತನವೂ ತಮ್ಮ ನೆಚ್ಚಿನ ಪ್ರಾಣಿಯನ್ನ ಸರ್ಕಾರಿ ಅಧಿಕಾರಿಗಳಿಗೆ ಒಪ್ಪಿಸಬೇಕಂತೆ. ಉನ್ನತ ಮೂಲಗಳ ಪ್ರಕಾರ ವಶಪಡಿಸಿಕೊಂಡ ಶ್ವಾನಗಳ ಮಾಂಸವನ್ನ ಆಹಾರಕ್ಕಾಗಿ ಬಳಸಲಾಗುವುದು ಎಂದು ತಿಳಿದುಬಂದಿದೆ. ಈ ಸಂಬಂಧ ಮನೆಮನೆಗೂ ತೆರಳುತ್ತಿರುವ ಅಧಿಕಾರಿಗಳು ಪ್ರತಿ ಮನೆಯಲ್ಲೂ ಇರುವ ಶ್ವಾನಗಳನ್ನು ಗೊತ್ತುಮಾಡಿ ವಶಕ್ಕೆ ಪಡೆಯುತ್ತಿದ್ದಾರಂತೆ. ಕಿಮ್​ನ ಈ ನಡೆಯಿಂದ ಹಲವರಿಗೆ ಕಸಿವಿಸಿ ಉಂಟಾಗಿದ್ರೂ ಸರ್ವಾಧಿಕಾರಿಯನ್ನ ಎದುರಾಕಿಕೊಳ್ಳೋ ತಾಕತ್ತು ಯಾರಿಗಿದೆ?

‘ಬಡವರು ಹಸು ಸಾಕುತ್ತಾರೆ, ಶ್ರೀಮಂತರು ಶ್ವಾನಗಳನ್ನು’ ಅಂದ ಹಾಗೆ, ಕಿಮ್​ ಜಾಂಗ್​ನ ಈ ನಡೆ ಕೊಂಚ ಜಿಗುಪ್ಸೆ ತರುವಂತಿದ್ರೂ ಅದರ ಹಿಂದಿನ ಯೋಚನೆ ನಿಜಕ್ಕೂ ಸರ್ವಾಧಿಕಾರಿಯ ಚಾಣಾಕ್ಷತೆಯನ್ನ ಎದ್ದುತೋರಿಸುತ್ತದೆ. ಕೊರೊನಾ ವೈರಸ್​ನಿಂದ ಜಗತ್ತಿನಾದ್ಯಂತ ಉಂಟಾಗಿರುವ ಆರ್ಥಿಕ ಸಂಕಷ್ಟ ಉತ್ತರ ಕೊರಿಯಾವನ್ನೂ ಬಿಟ್ಟಿಲ್ಲ. ಇದರ ಜೊತೆಗೆ, ದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಹಾಗಾಗಿ, ಜನರು ತಿನ್ನೋಕೆ ಆಹಾರವಿಲ್ಲದೆ ಪರದಾಡುತ್ತಿದ್ದಾರೆ.

ಮನೆಗೊಂದು ಶ್ವಾನ ಹಿಡಿದು ತಿನ್ನಿ ಹಸಿದ ಹೊಟ್ಟೆ ಯಾರ ಮಾತಿಗೂ ಬಗ್ಗೋದಿಲ್ಲ ಅನ್ನೋದು ಕಿಮ್​ಗೆ ಚೆನ್ನಾಗಿ ಗೊತ್ತು. ಹೀಗಾಗಿ, ಆತ ದೇಶದಲ್ಲಿ ಬಹು ಜನಪ್ರಿಯವಾಗಿರುವ ಶ್ವಾನದ ಮಾಂಸವನ್ನು ಸಾರ್ವಜನಿಕರಿಗೆ ಸುಲಭವಾಗಿ ಸಿಗುವಂಥ ವ್ಯವಸ್ಥೆ ಮಾಡಿದ್ದಾನೆ. ಜೊತೆಗೆ, ಉತ್ತರ ಕೊರಿಯಾದಲ್ಲಿ ಶ್ವಾನಗಳನ್ನ ಸಾಕುವುದು ಕೇವಲ ಶ್ರೀಮಂತರು. ಬಡವರಿಗೆ ಸಾಕು ಪ್ರಾಣಿ ಅಂದರೆ ಹಸು. ಹಂದಿ ಮತ್ತು ಎಮ್ಮೆಗಳು. ಹೀಗಾಗಿ, ತನಗೆ ಬಡವರ ಪರ ಕಾಳಜಿಯಿದೆ ಎಂಬ ಧೋರಣೆಯನ್ನ ಪ್ರದರ್ಶಿಸಲು ಕಿಮ್​ ಮುಂದಾಗಿದ್ದಾನಂತೆ. ಶ್ವಾನಗಳನ್ನು ಸಾಕುವುದು ಬಂಡವಾಳಶಾಹಿಯ ಪ್ರತೀಕ ಎಂಬ ನೆಪವೊಡ್ಡಿ ಬಡವರನ್ನ ಸಂತೈಸುವ ನಾಟಕಕ್ಕೆ ಮುಂದಾಗಿದ್ದಾನೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?