AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

King Charles III’s coronation: ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ಪಟ್ಟಾಭಿಷೇಕ; ಕಿಂಗ್ ಚಾರ್ಲ್ಸ್ III ಬ್ರಿಟನ್‌ನ ರಾಜ

ಸೆಪ್ಟೆಂಬರ್ 2022 ರಲ್ಲಿ ರಾಣಿ ಎಲಿಜಬೆತ್ II ರ ಮರಣದ ನಂತರ ಕಾನೂನುಬದ್ಧವಾಗಿ ರಾಜನಾದ ಚಾರ್ಲ್ಸ್, ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿನಡೆದ ಧಾರ್ಮಿಕ ಸಮಾರಂಭದಲ್ಲಿ ಔಪಚಾರಿಕವಾಗಿ ಸೇಂಟ್ ಎಡ್ವರ್ಡ್ಸ್ ಕ್ರೌನ್ ಸ್ವೀಕರಿಸಿದ್ದಾರೆ.

King Charles III's coronation: ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ಪಟ್ಟಾಭಿಷೇಕ; ಕಿಂಗ್ ಚಾರ್ಲ್ಸ್ III ಬ್ರಿಟನ್‌ನ ರಾಜ
ಕಿಂಗ್ ಚಾರ್ಲ್ಸ್ III
Follow us
ರಶ್ಮಿ ಕಲ್ಲಕಟ್ಟ
|

Updated on:May 06, 2023 | 5:25 PM

ಲಂಡನ್‌ನ ವೆಸ್ಟ್‌ಮಿನ್‌ಸ್ಟರ್ ಅಬ್ಬೆಯಲ್ಲಿ ಕಿಂಗ್ ಚಾರ್ಲ್ಸ್‌ನ (King Charles III) ಪಟ್ಟಾಭಿಷೇಕ (coronation) ಸಮಾರಂಭ ನಡೆದಿದೆ. ಆರ್ಚ್​​​ಬಿಷಪ್ (archbishop) ರಾಜನ ತಲೆಯ ಮೇಲೆ ಸೇಂಟ್ ಎಡ್ವರ್ಡ್ಸ್ ಕಿರೀಟವನ್ನು ಇರಿಸಿದ್ದು, ಬ್ರಿಟನ್‌ನ ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ ನಡೆದಿದೆ. ಸೆಪ್ಟೆಂಬರ್ 2022 ರಲ್ಲಿ ರಾಣಿ ಎಲಿಜಬೆತ್ II ರ ಮರಣದ ನಂತರ ಕಾನೂನುಬದ್ಧವಾಗಿ ರಾಜನಾದ ಚಾರ್ಲ್ಸ್, ವೆಸ್ಟ್‌ಮಿನಿಸ್ಟರ್ ಅಬ್ಬೆಯಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಔಪಚಾರಿಕವಾಗಿ ಸೇಂಟ್ ಎಡ್ವರ್ಡ್ಸ್ ಕ್ರೌನ್ ಸ್ವೀಕರಿಸಿದ್ದಾರೆ.

God save the King! ಎರಡು ಗಂಟೆಗಳ ಅವಧಿಯ ಸಮಾರಂಭಗಳ ನಂತರ, ಕಿಂಗ್ ಚಾರ್ಲ್ಸ್ ಬ್ರಿಟನ್‌ನ ಹೊಸ ರಾಜನಾಗಿ ಪಟ್ಟಾಭಿಷಿಕ್ತರಾಗಿದ್ದಾರೆ. ಇವರ ತಾಯಿ ರಾಣಿ ಎಲಿಜಬೆತ್ II ರ ಮರಣದ ನಂತರ, ಕಳೆದ ವರ್ಷ ಚಾರ್ಲ್ಸ್ ಸಿಂಹಾಸನವನ್ನು ಏರಿದರು. ಇಂದು ಸಂಪ್ರದಾಯ, ವೈಭವ ಮತ್ತು ಶತಮಾನಗಳ-ಹಳೆಯ ಪದ್ಧತಿಗಳ ಪ್ರಕಾರ ರಾಜ ಕಿರೀಟವನ್ನು ಚಾರ್ಲ್ಸ್ ಮುಡಿಗೇರಿಸಲಾಯಿತು. ಈ ಕಿರೀಟಧಾರಣೆ, ಅಧಿಕೃತವಾಗಿ ಅವರ ಆಳ್ವಿಕೆಯ ಆರಂಭವನ್ನು ಸೂಚಿಸುತ್ತದೆ.

ಇದನ್ನೂ ಓದಿ: King Charles III: ಕಿಂಗ್ ಚಾರ್ಲ್ಸ್ III ಪಟ್ಟಾಭಿಷೇಕ, ಭಾರತದ ಉಪರಾಷ್ಟ್ರಪತಿ ಭಾಗಿ, ಕಾರ್ಯಕ್ರಮದ ನಿರೂಪಣೆಗೆ ನಟಿ ಸೋನಮ್ ಕಪೂರ್

ಕಿಂಗ್ ಚಾರ್ಲ್ಸ್ ಕಿರೀಟಧಾರಣೆ ವೇಳೆ ಟ್ರಂಪೆಟ್ಸ್ ಮತ್ತು “ಗಾಡ್ ಸೇವ್ ದ ಕಿಂಗ್” ಎಂಬ ಕೋರಸ್ ಮೊಳಗಿದ್ದು, ಕ್ಯಾಂಟರ್ಬರಿಯ ಆರ್ಚ್​​​ಬಿಷಪ್ ರಾಜನ ತಲೆಯ ಮೇಲೆ ಸೇಂಟ್ ಎಡ್ವರ್ಡ್ಸ್ ಕಿರೀಟವನ್ನಿರಿಸಿದ್ದಾರೆ.

ಚಾರ್ಲ್ಸ್ III ಯುನೈಟೆಡ್ ಕಿಂಗ್‌ಡಮ್ ಮತ್ತು 14 ಇತರ ಕಾಮನ್‌ವೆಲ್ತ್ ಸಾಮ್ರಾಜ್ಯಗಳ ರಾಜರಾಗಿದ್ದಾರೆ. ಕಿರೀಟಧಾರಣೆಗೆ ಮುನ್ನ ಆರ್ಚ್​​​ಬಿಷಪ್ ಜಸ್ಟಿನ್ ವೆಲ್ಬಿ ಧರ್ಮೋಪದೇಶ ಮಾಡಿದ್ದಾರೆ. ನಾವು ರಾಜನನ್ನು ಪಟ್ಟಾಭಿಷೇಕ ಮಾಡಲು ಇಲ್ಲಿದ್ದೇವೆ. ಸೇವೆ ಮಾಡಲು ನಾವು ರಾಜನನ್ನು ಪಟ್ಟಾಭಿಷೇಕ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಕಿಂಗ್ ಚಾರ್ಲ್ಸ್

ನಾನು, ಚಾರ್ಲ್ಸ್ ದೇವರ ಸಮ್ಮುಖದಲ್ಲಿ ಪ್ರಾಮಾಣಿಕವಾಗಿ ನಾನು ನಂಬಿಗಸ್ತ ಪ್ರೊಟೆಸ್ಟೆಂಟ್ ಎಂದು ಘೋಷಿಸುತ್ತೇನೆ. ಪ್ರೊಟೆಸ್ಟಂಟ್ ಉತ್ತರಾಧಿಕಾರವನ್ನು ಭದ್ರಪಡಿಸುವ ಶಾಸನಗಳ ನಿಜವಾದ ಉದ್ದೇಶದ ಪ್ರಕಾರ ನಾನು ನಿಲ್ಲುತ್ತೇನೆ. ಸಿಂಹಾಸನಾರೋಹಣ ಮಾಡಿ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sat, 6 May 23

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ