AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಿ ದೇಶದ ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ; ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಕೊಲೆ ಪ್ರಯತ್ನ

Assimi Goita | ಇಂದು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಇಬ್ಬರು ಶಸ್ತ್ರಧಾರಿಗಳು ಮಾಲಿ ಅಧ್ಯಕ್ಷ ಅಸ್ಸಿಮಿ ಗೊಯ್ತಾ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ಮಾಲಿ ದೇಶದ ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ; ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಕೊಲೆ ಪ್ರಯತ್ನ
ಅಸ್ಸಿಮಿ ಗೊಯ್ತ
TV9 Web
| Edited By: |

Updated on:Jul 20, 2021 | 7:16 PM

Share

ಮಾಲಿ: ಇಂದು ಮಾಲಿ ಗಣರಾಜ್ಯದ ರಾಜಧಾನಿ ಬಮಾಕೋದಲ್ಲಿರುವ ಮಸೀದಿಯಲ್ಲಿ ಮಾಲಿ ದೇಶದ ಮಧ್ಯಂತರ ಅಧ್ಯಕ್ಷ ಅಸ್ಸಿಮಿ ಗೊಯ್ತಾ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಲಾಗಿದೆ. ಮಸೀದಿಯೊಳಗೆ ಇದ್ದಕ್ಕಿದ್ದಂತೆ ನುಗ್ಗಿದ ಇಬ್ಬರು ಶಸ್ತ್ರಧಾರಿಗಳು ಮಾಲಿ ಅಧ್ಯಕ್ಷ ಅಸ್ಸಿಮಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಮಸೀದಿಯಲ್ಲಿ ಇಂದು ಪ್ರಾರ್ಥನೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.

ಇಸ್ಮಾಂ ಧರ್ಮದ ಪ್ರಮುಖ ಹಬ್ಬವಾದ ಈದ್-ಅಲ್-ಅದಾ ಹಿನ್ನೆಲೆಯಲ್ಲಿ ಅಸ್ಸಿಮಿ ಗೊಯ್ತಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆಗ ಮುಸುಕು ಧರಿಸಿಕೊಂಡು ಬಂದ ಇಬ್ಬರು ಶಸ್ತ್ರಧಾರಿಗಳಲ್ಲೊಬ್ಬಾತ ಚಾಕುವಿನಿಂದ ಅಸ್ಸಿಮಿ ಅವರಿಗೆ ಇರಿಯಲು ಪ್ರಯತ್ನಿಸಿದ್ದಾನೆ. ಅಷ್ಟರಲ್ಲಿ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಯಾವ ಕಾರಣಕ್ಕಾಗಿ ಮಾಲಿ ಅಧ್ಯಕ್ಷರ ಮೇಲೆ ಈ ಕೊಲೆ ಯತ್ನ ನಡೆಯಿತು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಶಕ್ಕೆ ಪಡೆದಿರುವ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಲಿಯ ಅಧ್ಯಕ್ಷರ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಈ ಹಲ್ಲೆಯಿಂದ ಅಸ್ಸಿಮಿ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸುರಕ್ಷಿತರಾಗಿದ್ದಾರೆ.

ಕಳೆದ ತಿಂಗಳಷ್ಟೇ 37 ವರ್ಷದ ಅಸ್ಸಿಮಿ ಗೊಯ್ತಾ ಮಾಲಿ ಮಧ್ಯಂತರ ಅವಧಿಯ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದಕ್ಕೂ ಮೊದಲು ಅವರು ಮಾಲಿಯ ಉಪಾಧ್ಯಕ್ಷರಾಗಿ ಅಧಿಕಾರ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ಕೋವಿಡ್ ಕುರಿತ ಆತಂಕಕಾರಿ ವಿಚಾರ ಬಯಲು; ಭಾರತದ 40 ಕೋಟಿ ಜನರಿಗೆ ಇನ್ನೂ ಕೊರೋನಾ ಅಪಾಯ ತಪ್ಪಿಲ್ಲ!

(Knife attack against Mali interim President Assimi Goita in Bamako)

Published On - 7:15 pm, Tue, 20 July 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್