AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ 30 ಸಾವಿರ ಅಡಿ ಎತ್ತರದಿಂದ 9 ಸಾವಿರ ಅಡಿಗೆ ಇಳಿದ ವಿಮಾನ, ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತಸ್ರಾವ

ತೈವಾನ್​ಗೆ ಹೊರಟಿದ್ದ ಕೊರಿಯನ್ ಏರ್​ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಏಕಾಏಕಿ 30 ಸಾವಿರ ಅಡಿಯಿಂದ 9 ಸಾವಿರ ಅಡಿಗೆ ಇಳಿದಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ ಮಾಡಿತ್ತು.

ಏಕಾಏಕಿ 30 ಸಾವಿರ ಅಡಿ ಎತ್ತರದಿಂದ 9 ಸಾವಿರ ಅಡಿಗೆ ಇಳಿದ ವಿಮಾನ, ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತಸ್ರಾವ
Image Credit source: India TV
ನಯನಾ ರಾಜೀವ್
|

Updated on:Jun 25, 2024 | 8:58 AM

Share

ತೈವಾನ್​ಗೆ ತೆರಳುತ್ತಿದ್ದ ಕೊರಿಯನ್ ಏರ್​ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ವಿಮಾನ ಏಕಾಏಕಿ 30 ಸಾವಿರ ಅಡಿಯಿಂದ 9 ಸಾವಿರ ಅಡಿಗೆ ಇಳಿದಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ ಮಾಡಿತ್ತು.

ಈಗಾಗಲೇ ಪ್ರಯಾಣಿಕರಿಗೆ ಆಕ್ಸಿಜನ್​ ಮಾಸ್ಕ್​ ಹಾಕಿಕೊಳ್ಳಲು ಸೂಚನೆ ನೀಡಲಾಗಿದ್ದರೂ ಕೂಡ, ಪ್ರಯಾಣಿಕರ ಕಿವಿ, ಹಾಗೂ ಮೂಗಿನಿಂದ ರಕ್ತಸ್ರಾವವನ್ನು ತಡೆಯಲು ಸಾಧ್ಯವಾಗಿಲ್ಲ. ಪೈಲಟ್​ ಕೂಡಲೇ ವಿಮಾನವನ್ನು ಹಿಂದಕ್ಕೆ ತಿರುಗಿಸಲು ನಿರ್ಧರಿಸಿದರು, ಇಂಚೆನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ತಕ್ಷಣ 13 ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ದಕ್ಷಿಣ ಕೊರಿಯಾದ ಯೋನ್​ಹಾಪ್ ಸುದ್ದಿಸಂಸ್ಥೆ ಪ್ರಕಾರ, ಶನಿವಾರ ಕೊರಿಯನ್ ಏರ್​ ವಿಮಾನ ಕೆಇ-189 ಕ್ಯಾಬಿನ್ ಪ್ರೆಶರೈಸೇಷನ್​ ಸಿಸ್ಟಮ್​ನಲ್ಲಿ ಹಠಾತ್ ದೋಷ ಕಂಡು ಬಂದಿತ್ತು.

ವಿಮಾನ 30 ಸಾವಿರ ಅಡಿಯಿಂದ ಹಠಾತ್ 9 ಸಾವಿರ ಅಡಿಗೆ ಕುಸಿಯಿತು, ಇದರಿಂದ ಕೆಲವು ಪ್ರಯಾಣಿಕರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಇಬ್ಬರು ಪ್ರಯಾಣಿಕರು ಎತ್ತರದಿಂದ ಹಠಾತ್ ಕುಸಿತ ಉಂಟಾಗಿದ್ದರಿಂದ ಕಿವಿ ಹಾಗೂ ಮೂಗಿನಲ್ಲಿ ರಕ್ತಸ್ರಾವವಾಯಿತು.

ಮತ್ತಷ್ಟು ಓದಿ: Bengaluru: ತಾಂತ್ರಿಕ ದೋಷ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನ

ಇತರೆ 15 ಂಂದಿ ಕಿವಿ ನೋವು ಹಾಗೂ ಉಸಿರುಗಟ್ಟುವಿಕೆಯನ್ನು ಅನುಭವಿಸಿದರು. ಊಟ ನೀಡಿದ ಸ್ವಲ್ಪ ಸಮಯದಲ್ಲೇ ವಿಮಾನ ಕೆಳಕ್ಕೆ ವಾಲಿತು ಮತ್ತು ಕ್ಯಾಬಿನ್​ನಲ್ಲಿ ಅವ್ಯವಸ್ಥೆ ಉಂಟಾಯಿತು ಎಂದು ತೈವಾನ್ ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ವಿಮಾನದಲ್ಲಿ ಮಕ್ಕಳು ಹೆದರಿ ಅಳುತ್ತಿದ್ದರು, ಘಟನೆ ಬಗ್ಗೆ ಕೊರಿಯನ್ ಏರ್​ ಪ್ರಯಾಣಿಕರ ಬಳಿ ಕ್ಷಮೆಯಾಚಿಸಿದೆ. ತಾಂತ್ರಿಕ ದೋಷದ ಕಾರಣಗಳ ಬಗ್ಗೆ ತನಿಖೆ ಪ್ರಾರಂಭಿಸಿದೆ. ಎಲ್ಲಾ ಅಗತ್ಯ ನಿರ್ವಹಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವಿಮಾನಯಾನ ಪ್ರಯಾಣಿಕರಿಗೆ ಭರವಸೆ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:58 am, Tue, 25 June 24

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ