ಬಸ್ ಬ್ರೇಕ್ ಫೇಲ್ ಆದಾಗ ಡ್ರೈವರ್ನ ಐಡಿಯಾಕ್ಕೆ 60 ಜನರು ಸೇಫ್, ನಿಟ್ಟುಸಿರು ಬಿಟ್ಟ ಪ್ರಯಾಣಿಕರು
ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ KSRTC ಬಸ್ ಬ್ರೇಕ್ ಫೇಲ್ ಆಗಿದೆ. ಕೂಡಲೇ ಎಚ್ಚೆತ್ತ ಡ್ರೈವರ್ ಉಪಾಯದಿಂದ ಬಸ್ನ್ನು ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಇದರಿಂದ ಬಸ್ ನಿಂತುಕೊಂಡಿದ್ದು, ಅದೃಷ್ಟವಶಾತ್ ಬಸ್ನಲ್ಲಿ 60ಕ್ಕೂ ಹೆಚ್ಚು ಜನರು ಬಚಾವ್ ಆಗಿದ್ದಾರೆ. KA 09 F 5311 ಸಂಖ್ಯೆಯ ಮೈಸೂರು ಡಿಪೋದ KSRTC ಬಸ್, ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು.
ಚಾಮರಾಜನಗರ, (ಏಪ್ರಿಲ್ 27): ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ KSRTC ಬಸ್ ಬ್ರೇಕ್ ಫೇಲ್ ಆಗಿದೆ. ಕೂಡಲೇ ಎಚ್ಚೆತ್ತ ಡ್ರೈವರ್ ಬಸ್ನ್ನು ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಇದರಿಂದ ಬಸ್ ನಿಂತುಕೊಂಡಿದ್ದು, ಅದೃಷ್ಟವಶಾತ್ ಬಸ್ನಲ್ಲಿ 60ಕ್ಕೂ ಹೆಚ್ಚು ಜನರು ಬಚಾವ್ ಆಗಿದ್ದಾರೆ. KA 09 F 5311 ಸಂಖ್ಯೆಯ ಮೈಸೂರು ಡಿಪೋದ KSRTC ಬಸ್, ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಮಲೆ ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆಗ್ತಿದ್ದಂತೆ ಬಸ್ಅನ್ನು ಡಿವೈಡರ್ ಮೇಲೆ ಏರಿಸಿದ್ದಾನೆ. ಆಗ ಬಸ್ ನಿಂತುಕೊಂಡಿದೆ. ಒಂದು ವೇಳೆ ಚಾಲಕ ಬಸ್ ಅನ್ನು ಡಿವೈಡರ್ಗೆ ಹತ್ತಿಸದಿದ್ದರೆ ಏನು ಅನಾಹುತ ಆಗುತ್ತಿತ್ತು. ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಐಡಿಯಾಕ್ಕೆ ಪ್ರಯಾಣಿಕರು ಕೃತಜ್ಞತೆ ತಿಳಿಸಿದ್ದಾರೆ.