AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಬ್ರೇಕ್​ ಫೇಲ್​ ಆದಾಗ ಡ್ರೈವರ್​ನ ಐಡಿಯಾಕ್ಕೆ 60 ಜನರು ಸೇಫ್, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ಬಸ್​ ಬ್ರೇಕ್​ ಫೇಲ್​ ಆದಾಗ ಡ್ರೈವರ್​ನ ಐಡಿಯಾಕ್ಕೆ 60 ಜನರು ಸೇಫ್, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ರಮೇಶ್ ಬಿ. ಜವಳಗೇರಾ
|

Updated on: Apr 27, 2025 | 4:22 PM

ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ KSRTC ಬಸ್​ ಬ್ರೇಕ್​ ಫೇಲ್​ ಆಗಿದೆ. ಕೂಡಲೇ ಎಚ್ಚೆತ್ತ ಡ್ರೈವರ್​​​ ಉಪಾಯದಿಂದ ಬಸ್​​ನ್ನು ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಇದರಿಂದ ಬಸ್​ ನಿಂತುಕೊಂಡಿದ್ದು, ಅದೃಷ್ಟವಶಾತ್ ಬಸ್​ನಲ್ಲಿ 60ಕ್ಕೂ ಹೆಚ್ಚು ಜನರು ಬಚಾವ್ ಆಗಿದ್ದಾರೆ. KA 09 F 5311 ಸಂಖ್ಯೆಯ ಮೈಸೂರು ಡಿಪೋದ KSRTC ಬಸ್, ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು.

ಚಾಮರಾಜನಗರ, (ಏಪ್ರಿಲ್ 27): ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ KSRTC ಬಸ್​ ಬ್ರೇಕ್​ ಫೇಲ್​ ಆಗಿದೆ. ಕೂಡಲೇ ಎಚ್ಚೆತ್ತ ಡ್ರೈವರ್​​​ ಬಸ್​​ನ್ನು ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಇದರಿಂದ ಬಸ್​ ನಿಂತುಕೊಂಡಿದ್ದು, ಅದೃಷ್ಟವಶಾತ್ ಬಸ್​ನಲ್ಲಿ 60ಕ್ಕೂ ಹೆಚ್ಚು ಜನರು ಬಚಾವ್ ಆಗಿದ್ದಾರೆ. KA 09 F 5311 ಸಂಖ್ಯೆಯ ಮೈಸೂರು ಡಿಪೋದ KSRTC ಬಸ್, ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿತ್ತು. ಈ ವೇಳೆ ಮಲೆ ಮಹದೇಶ್ವರಬೆಟ್ಟದ ತಾಳಬೆಟ್ಟ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿದೆ. ಬ್ರೇಕ್ ಫೇಲ್ ಆಗ್ತಿದ್ದಂತೆ ಬಸ್​ಅನ್ನು ಡಿವೈಡರ್ ಮೇಲೆ ಏರಿಸಿದ್ದಾನೆ. ಆಗ ಬಸ್ ನಿಂತುಕೊಂಡಿದೆ. ಒಂದು ವೇಳೆ ಚಾಲಕ ಬಸ್​ ಅನ್ನು ಡಿವೈಡರ್​ಗೆ ಹತ್ತಿಸದಿದ್ದರೆ ಏನು ಅನಾಹುತ ಆಗುತ್ತಿತ್ತು. ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಐಡಿಯಾಕ್ಕೆ ಪ್ರಯಾಣಿಕರು ಕೃತಜ್ಞತೆ ತಿಳಿಸಿದ್ದಾರೆ.