AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davos World Economic Forum: ವಿಶ್ವ ಆರ್ಥಿಕ ಸಭೆಯಲ್ಲಿ ತೆಲಂಗಾಣ ಐಟಿ ಸಚಿವರ ನಿಯೋಗ

ತೆಲಂಗಾಣದಲ್ಲಿ ಹೂಡಿಕೆ ಮಾಡುವಂತೆ ಮತ್ತು ಉದ್ಯೋಗ ಸೃಷ್ಟಿಗೆ ನೆರವಾಗುವಂತೆ ಸ್ವಿಜರ್ಲೆಂಡ್​​ನಲ್ಲಿರುವ ಭಾರತೀಯರ ಮೂಲದವರಲ್ಲಿ ಸಚಿವರು ಮನವಿ ಮಾಡಿದ್ದಾರೆ.

Davos World Economic Forum: ವಿಶ್ವ ಆರ್ಥಿಕ ಸಭೆಯಲ್ಲಿ ತೆಲಂಗಾಣ ಐಟಿ ಸಚಿವರ ನಿಯೋಗ
ಕೆಟಿ ರಾಮ ರಾವ್
TV9 Web
| Edited By: |

Updated on: Jan 16, 2023 | 7:31 PM

Share

ಹೈದರಾಬಾದ್: ಸ್ವಿಜರ್ಲೆಂಡ್​​ನ (Switzerland) ದಾವೋಸ್​​ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ಸಭೆಯಲ್ಲಿ (World Economic Forum) ತೆಲಂತಾಣ ಐಟಿ ಸಚಿವ ಕೆಟಿ ರಾಮ ರಾವ್ (KT Rama Rao) ನೇತೃತ್ವದ ನಿಯೋಗ ಪಾಲ್ಗೊಂಡಿದೆ. ಇಂದಿನಿದ (ಜನವರಿ 16) ಜನವರಿ 20ರ ವರೆಗೆ ವಿಶ್ವ ಆರ್ಥಿಕ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಸ್ವಿಜರ್ಲೆಂಡ್​ಗೆ ತೆರಳಿ ಜ್ಯೂರಿಚ್ ವಿಮಾನ ನಿಲ್ದಾಣ ತಲುಪಿದ ರಾಮ ರಾವ್ ಅವರಿಗೆ ಅನಿವಾಸಿ ಭಾರತೀಯರಿಂದ ಭವ್ಯ ಸ್ವಾಗತ ದೊರೆಯಿತು.

ಅನಿವಾಸಿ ಭಾರತೀಯರ ಜತೆಗೆ ಯುರೋಪ್ ದೇಶಗಳ ಜನರಿಂದಲೂ ರಾಮ ರಾವ್ ಅವರಿಗೆ ಭರ್ಜರಿ ಸ್ವಾಗತ ದೊರೆತಿದೆ. ಸ್ವಿಜರ್ಲೆಂಡ್​ನಲ್ಲಿರುವ ತೆಲುಗು ಭಾಷಿಕ ಸಮುದಾಯಗಳ ಪ್ರತಿನಿಧಿಗಳಿಂದಲೂ ಸಚಿವರಿಗೆ ಸ್ವಾಗತ ದೊರೆಯಿತು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಜ್ಯೂರಿಚ್​​ನಲ್ಲಿರುವ ಭಾರತೀಯ ಸಮುದಾಯದವರು ಆಯೋಜಿಸಿದ್ದ ‘ಮೀಟ್ ಆ್ಯಂಡ್ ಗ್ರೀಟ್’ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾದರು. ತೆಲಂಗಾಣ ಸರ್ಕಾರ 2014ರ ನಂತರ ಮಾಡಿರುವ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ತೆಲಂಗಾಣ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅನಿವಾಸಿ ಭಾರತೀಯರು ವಿಶ್ವ ಮಟ್ಟದಲ್ಲಿ ಉತ್ತಮ ಅಭಿಪ್ರಾಯ ರೂಪುಗೊಳ್ಳುವಂತೆ ಮಾಡಬೇಕು ಎಂಬುದಾಗಿ ಸಚಿವರು ಮನವಿ ಮಾಡಿದರು ಎಂದು ಪ್ರಕಟಣೆ ಉಲ್ಲೇಖಿಸಿದೆ.

ತೆಲಂಗಾಣದಲ್ಲಿ ಹೂಡಿಕೆ ಮಾಡುವಂತೆ ಮತ್ತು ಉದ್ಯೋಗ ಸೃಷ್ಟಿಗೆ ನೆರವಾಗುವಂತೆ ಸ್ವಿಜರ್ಲೆಂಡ್​​ನಲ್ಲಿರುವ ಭಾರತೀಯರ ಮೂಲದವರಲ್ಲಿ ಸಚಿವರು ಮನವಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್