AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಹ್ಯಾ ಮುಜಾಹಿದ್​ಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್​

ಯಾಹ್ಯಾ ಮುಜಾಹಿದ್​ಗೆ 15 ವರ್ಷಗಳ ಜೈಲು ಶಿಕ್ಷೆಯನ್ನು ಪಾಕಿಸ್ಥಾನದ ಭಯೋತ್ಪಾದನ ವಿರೊಧಿ ನ್ಯಾಯಾಲಯವು (Anti Terrorism Court) ವಿಧಿಸಿದೆ.

ಯಾಹ್ಯಾ ಮುಜಾಹಿದ್​ಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್​
ನಿಷೇಧಿತ ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ (ಸಂಗ್ರಹ ಚಿತ್ರ)
sandhya thejappa
| Edited By: |

Updated on:Dec 03, 2020 | 7:30 PM

Share

ಲಾಹೋರ್: ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣವೊಂದರಲ್ಲಿ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್​ ನೇತೃತ್ವದ ಜಮಾತ್-ಉದ್-ದವಾ ಸಂಘಟನೆಯ ವಕ್ತಾರ ಯಾಹ್ಯಾ ಮುಜಾಹಿದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು (Anti Terrorism Court) 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಭಯೋತ್ಪಾದನಾ ನಿಗ್ರಹ ಕಾಯ್ದೆ 1997ರ ವಿವಿಧ ಪರಿಚ್ಛೇದಗಳ ಅಡಿಯಲ್ಲಿ ನ್ಯಾಯಧೀಶ ಇಜಾಜ್ ಅಹ್ಮದ್ ಬುಟ್ಟರ್ ತೀರ್ಪು ನೀಡಿದರು.

ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಇನ್ನೆರೆಡು ಪ್ರಕರಣಗಳಲ್ಲಿ ಮುಜಾಹಿದ್​ಗೆ ಕಳೆದ ತಿಂಗಳು ಎಟಿಸಿ 32 ವರ್ಷಗಳ ಸಾಮೂಹಿಕ ಜೈಲು ಶಿಕ್ಷೆ ವಿಧಿಸಿತ್ತು. ಇದೇ ಸಂಘಟನೆಯ ಹಿರಿಯ ನಾಯಕ ಜಾಫರ್ ಇಕ್ಬಾಲ್​ಗೆ 15 ವರ್ಷ ಮತ್ತು ಮುಖ್ಯಸ್ಥ ಹಫೀಜ್ ಸಯೀದ್​ನ ಸೋದರ ಮಾವ ಪ್ರೋ. ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿಗೆ ಆರು ತಿಂಗಳ ಕಾಲ ಜೈಲು ಶಿಕ್ಷೆಯನ್ನು ನೀಡಿದೆ. ಇದಕ್ಕೂ ಮೊದಲು ಎಟಿಸಿ ಇಕ್ಬಾಲ್​ಗೆ ಇಂತಹ ಮೂರು ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 26 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ತೀರ್ಪು ಪ್ರಕಟಿಸುವಾಗ ಮೂರು ಜನ ಆರೋಪಿಗಳು ಹಾಜರಿದ್ದರು. ಭಯೋತ್ಪಾದನಾ ನಿಗ್ರಹ ಇಲಾಖೆಯು ಸಯೀದ್​ ಸೇರಿದಂತೆ ಜಮಾತ್ ಉದ್ ದವಾ ಸೇರಿದಂತೆ ಹಲವು ನಾಯಕರ ವಿರುದ್ಧ ಒಟ್ಟು 41 ಎಫ್ಐಆರ್ ದಾಖಲಿಸಿದೆ. ಇದರಲ್ಲಿ ವಿಚಾರಣಾ ನ್ಯಾಯಾಲಯಗಳು 25 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ.

Published On - 7:29 pm, Thu, 3 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್