AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ

ಪಾಕಿಸ್ತಾನದ ಇತಿಹಾಸದಲ್ಲೇ ಅತ್ಯಂತ ಅಪರೂಪದ ಹಾಗೂ ಪ್ರಮುಖ ಸಾಂಸ್ಕೃತಿಕ ಬದಲಾವಣೆಯೊಂದು ಗಾಳಿ ಬೀಸಿದೆ. ದಶಕಗಳ ಇಸ್ಲಾಮೀಕರಣದ ಪ್ರಕ್ರಿಯೆಯಲ್ಲಿ ಕಳೆದುಹೋಗಿದ್ದ ತನ್ನ ಹಳೆಯ ಐತಿಹಾಸಿಕ ಗುರುತುಗಳನ್ನು ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಲಾಹೋರ್ ಮರಳಿ ಪಡೆಯುತ್ತಿದೆ. ಈ ಮಹತ್ವದ ಬೆಳವಣಿಗೆಯ ಸಂಪೂರ್ಣ ವಿವರ ಇಲ್ಲಿದೆ.

ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ
ಲಾಹೋರ್ Image Credit source: Zameen.com
ನಯನಾ ರಾಜೀವ್
|

Updated on: May 19, 2026 | 9:51 AM

Share

ಲಾಹೋರ್, ಮೇ 19: ಭಾರತ ಮತ್ತು ಪಾಕಿಸ್ತಾನ(Pakistan) ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್​ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಸಾಹಸಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು, ಚೌಕಗಳು ಮತ್ತು ಐತಿಹಾಸಿಕ ಸ್ಥಳಗಳ ಹೆಸರುಗಳನ್ನು ತೆಗೆದುಹಾಕಿ, ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್​ ಮರುಸ್ಥಾಪಿಸುತ್ತಿದೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ಲಾಹೋರ್‌ನ ಪ್ರಮುಖ ಒಂಬತ್ತು ಸ್ಥಳಗಳು ತಮ್ಮ ಮೂಲ ಗುರುತನ್ನು ಮರಳಿ ಪಡೆದಿವೆ.

ಈ ಐತಿಹಾಸಿಕ ಪುನಃಸ್ಥಾಪನೆ ಕಾರ್ಯದ ಹಿಂದೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಪುತ್ರಿ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರ್ಯಮ್ ನವಾಜ್ ಅವರ ದೊಡ್ಡ ಲೆಕ್ಕಾಚಾರವಿದೆ. 2025 ರಲ್ಲಿ ಮರ್ಯಮ್ ನವಾಜ್ ನೇತೃತ್ವದಲ್ಲಿ ಆರಂಭವಾದ ‘ಲಾಹೋರ್ ಅಥಾರಿಟಿ ಫಾರ್ ಹೆರಿಟೇಜ್ ರಿವೈವಲ್’ (LAHR) ಸಂಸ್ಥೆಯು ಸುಮಾರು 50 ಬಿಲಿಯನ್ ಪಾಕಿಸ್ತಾನಿ ರೂಪಾಯಿಗಳ ಬಜೆಟ್‌ನಲ್ಲಿ ಈ ನಗರ ಸಂರಕ್ಷಣಾ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಯುರೋಪಿಯನ್ ದೇಶಗಳು ತಮ್ಮ ಐತಿಹಾಸಿಕ ಹೆಸರುಗಳನ್ನು ಎಂದಿಗೂ ಬದಲಾಯಿಸುವುದಿಲ್ಲ, ಅವುಗಳನ್ನು ಉಳಿಸಿಕೊಳ್ಳುತ್ತವೆ.

ಲಾಹೋರ್‌ನ ಪ್ರಾಚೀನ ಹೆಸರುಗಳು ನಮ್ಮ ಇತಿಹಾಸದ ಭಾಗವಾಗಿದ್ದು, ಅವುಗಳನ್ನು ಸಂರಕ್ಷಿಸುವುದು ನಮ್ಮ ಕರ್ತವ್ಯ ಎಂದು ಉನ್ನತ ಮಟ್ಟದ ಸಭೆಯಲ್ಲಿ ನವಾಜ್ ಷರೀಫ್ ಪ್ರತಿಪಾದಿಸಿದ್ದಾರೆ. ಶತಮಾನಗಳಿಂದ ಸ್ಥಳೀಯ ಜನ ಸಾಮಾನ್ಯರ ನೆನಪಿನಲ್ಲಿ ಸದ್ದಿಲ್ಲದೆ ಉಳಿದುಕೊಂಡಿದ್ದ ಹಳೆಯ ಹೆಸರುಗಳು ಈಗ ಅಧಿಕೃತವಾಗಿ ಸೈನ್‌ಬೋರ್ಡ್‌ಗಳ ಮೇಲೆ ರಾರಾಜಿಸುತ್ತಿವೆ.

ಮತ್ತಷ್ಟು ಓದಿ: ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!

ಇಸ್ಲಾಂಪುರ-ಕೃಷ್ಣ ನಗರವಾಗಿ, ಸುನ್ನತ್ ನಗರ-ಸಂತನಗರವಾಗಿ, ಮೌಲಾನಾ ಜಾಫರ್ ಅಲಿ ಖಾನ್ ಚೌಕ-ಲಕ್ಷ್ಮಿ ಚೌಕವಾಗಿ, ಬಾಬರಿ ಮಸೀದಿ ಚೌಕ-ಜೈನ ಮಂದಿರ ಚೌಕವಾಗಿ, ಮುಸ್ತಫಾಬಾದ್-ಧರ್ಮಪುರವಾಗಿ, ಸರ್ ಆಗಾ ಖಾನ್ ಚೌಕ-ಡೇವಿಸ್ ರಸ್ತೆಯಾಗಿ, ಅಲ್ಲಾಮ ಇಕ್ಬಾಲ್ ರಸ್ತೆ-ಜೈಲ್ ರಸ್ತೆಯಾಗಿ, ಫಾತಿಮಾ ಜಿನ್ನಾ ರಸ್ತೆ-ಕ್ವೀನ್ಸ್​ ರಸ್ತೆಯಾಗಿ, ಬಾಗ್-ಎ-ಜಿನ್ನಾ-ಲಾರೆನ್ಸ್ ಗಾರ್ಡನ್ಸ್ ಆಗಿ ಹಳೆಯ ಹೆಸರುಗಳನ್ನು ಪಡೆಯಲಿವೆ.

ಇವುಗಳಲ್ಲಿ ಜೈನ ಮಂದಿರ ಚೌಕ ಇತಿಹಾಸ ರೋಚಕವಾಗಿದೆ. 1990 ರ ದಶಕದಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಸೃಷ್ಟಿಯಾಗಿದ್ದ ಧಾರ್ಮಿಕ ಉದ್ವಿಗ್ನತೆಯ ಸಂದರ್ಭದಲ್ಲಿ ಈ ಚೌಕಕ್ಕೆ ‘ಬಾಬರಿ ಮಸೀದಿ ಚೌಕ’ ಎಂದು ಹೆಸರಿಡಲಾಗಿತ್ತು. ಈಗ 79 ವರ್ಷಗಳ ನಂತರ ಅದು ಮತ್ತೆ ಜೈನ ಮಂದಿರ ಚೌಕ ಆಗಿದೆ.

ದಶಕಗಳಿಂದ ತೀವ್ರ ಸೈದ್ಧಾಂತಿಕ ಇಸ್ಲಾಮೀಕರಣಕ್ಕೆ ಒಗ್ಗಿಕೊಂಡಿರುವ ಪಾಕಿಸ್ತಾನದಲ್ಲಿ, ಈ ಹಿಂದೂ-ಸಿಖ್ ಹೆಸರುಗಳ ಪುನಃಸ್ಥಾಪನೆಗೆ ಯಾವುದೇ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗದೇ ಇರುವುದು ಜಾಗತಿಕ ರಾಜತಾಂತ್ರಿಕರನ್ನು ಅಚ್ಚರಿಗೊಳಿಸಿದೆ. ಲಾಹೋರ್‌ನ ಈ ಯಶಸ್ಸಿನ ಬೆನ್ನಲ್ಲೇ, ಯೋಜನೆಯ ಎರಡನೇ ಹಂತದಲ್ಲಿ ಸಿಂಧ್ ಮತ್ತು ಖೈಬರ್ ಪಖ್ತುಂಖ್ವಾದ ಕೆಲವು ಭಾಗಗಳಲ್ಲೂ ಹಳೆಯ ಐತಿಹಾಸಿಕ ಹೆಸರುಗಳನ್ನು ಮರುಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ.

ಭಾರತದ ಅಮೃತಸರದಿಂದ ಕೇವಲ 50 ಕಿಲೋಮೀಟರ್ ದೂರದಲ್ಲಿರುವ ಲಾಹೋರ್, ಧರ್ಮದ ಹೆಸರಿನಲ್ಲಿ ಕತ್ತರಿಸಿ ಹೋಗಿದ್ದ ತನ್ನ ವೈವಿಧ್ಯಮಯ ಇತಿಹಾಸದ ಬೇರುಗಳೊಂದಿಗೆ ಮತ್ತೆ ಸಂಪರ್ಕ ಸಾಧಿಸುತ್ತಿರುವುದು ಒಂದು ಆಶಾದಾಯಕ ಬೆಳವಣಿಗೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು