AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಿಪಿನ್ಸ್​​ನಲ್ಲಿ ಭೀಕರ ಚಂಡಮಾರುತದಿಂದ ಭೂಕುಸಿತ, ಪ್ರವಾಹ; 58 ಮಂದಿ ಸಾವು, ಬಿಡುವಿಲ್ಲದೆ ನಡೆಯುತ್ತಿದೆ ರಕ್ಷಣಾ ಕಾರ್ಯಾಚರಣೆ

ಉಷ್ಣವಲಯದ ಚಂಡಮಾರುತ ಮೇಗಿಯಿಂದ  ಭೂಕುಸಿತವುಂಟಾಗುತ್ತಿದ್ದು,ಈಗಾಗಲೇ ವಿಪತ್ತು ಪೀಡಿತ ದ್ವೀಪಸಮೂಹವಾದ ಫಿಲಿಪೈನ್ಸ್​ನಲ್ಲಿ ಮತ್ತಷ್ಟು ಹಾನಿಯನ್ನುಂಟು ಮಾಡಿದೆ. ಈ ಚಂಡಮಾರುತದ ವೇಗ ಪ್ರಾರಂಭದಲ್ಲಿ ಗಂಟೆಗೆ 65 ಕಿಮೀ ಇತ್ತು.

ಫಿಲಿಪಿನ್ಸ್​​ನಲ್ಲಿ ಭೀಕರ ಚಂಡಮಾರುತದಿಂದ  ಭೂಕುಸಿತ, ಪ್ರವಾಹ; 58 ಮಂದಿ ಸಾವು, ಬಿಡುವಿಲ್ಲದೆ ನಡೆಯುತ್ತಿದೆ ರಕ್ಷಣಾ ಕಾರ್ಯಾಚರಣೆ
ಫಿಲಿಪಿನ್ಸ್ ಪ್ರವಾಹ (ಪಿಟಿಐ ಚಿತ್ರ)
TV9 Web
| Edited By: |

Updated on: Apr 13, 2022 | 10:30 AM

Share

ಬೇಬೇ: ಫಿಲಿಪಿನ್ಸ್​​ನಲ್ಲಿ ಭಯಂಕರ ಪ್ರವಾಹ ಪರಿಸ್ಥಿತಿ, ಭೂಕುಸಿತ ಉಂಟಾಗುತ್ತಿದೆ. ಈ ಪಾಕೃತಿಕ ವಿಕೋಪದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಯುದ್ಧೋಪಾದಿಯಲ್ಲಿ  ಜನರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಳ್ಳಿ-ಹಳ್ಳಿಗಳಲ್ಲಿ ಭೂಕುಸಿತ ಉಂಟಾಗುತ್ತಿದ್ದು ಮಣ್ಣಿನಡಿ ಸಿಲುಕಿ ಜನರು ಉಸಿರು ನಿಲ್ಲಿಸುತ್ತಿದ್ದಾರೆ. ಕೆಲವರು ಪರದಾಡುತ್ತಿದ್ದಾರೆ. ರಕ್ಷಣಾ ಸಿಬ್ಬಂದಿ ತಮ್ಮ ಬರಿ ಗೈಯಲ್ಲೇ  ಮಣ್ಣನ್ನು ಅಗೆದು, ಸಿಲುಕಿರುವ ಜನರನ್ನು ಹೊರತೆಗೆಯುತ್ತಿದ್ದಾರೆ.  ಇಲ್ಲಿ ಬೆಟ್ಟಗುಡ್ಡಗಳು ಕುಸಿಯುವ ಜತೆ, ಮಣ್ಣು, ಚಿಕ್ಕಚಿಕ್ಕ ಕಲ್ಲುಗಳ ಮಿಶ್ರಿತ ಮಳೆಯೂ ಬೀಳುತ್ತಿದೆ.  

ಉಷ್ಣವಲಯದ ಚಂಡಮಾರುತ ಮೇಗಿಯಿಂದ  ಭೂಕುಸಿತವುಂಟಾಗುತ್ತಿದ್ದು,ಈಗಾಗಲೇ ವಿಪತ್ತು ಪೀಡಿತ ದ್ವೀಪಸಮೂಹವಾದ ಫಿಲಿಪೈನ್ಸ್​ನಲ್ಲಿ ಮತ್ತಷ್ಟು ಹಾನಿಯನ್ನುಂಟು ಮಾಡಿದೆ. ಈ ಚಂಡಮಾರುತದ ವೇಗ ಪ್ರಾರಂಭದಲ್ಲಿ ಗಂಟೆಗೆ 65 ಕಿಮೀ ಇತ್ತು. ಬಳಿಕ ಇದು ಗಂಟೆಗೆ 85 ಕಿಮೀ ವೇಗದಲ್ಲಿಯೂ ಅಪ್ಪಳಿಸಿದೆ. ಈ ವರ್ಷ ಅಪ್ಪಳಿಸಿದ ಮೊದಲ ಉಷ್ಣವಲಯದ ಚಂಡಮಾರುತ ಇದಾಗಿದ್ದು, ಈ ದ್ವೀಪಸಮೂಹದಲ್ಲಿ ವರ್ಷಕ್ಕೆ ಏನಿಲ್ಲವೆಂದರೂ ಸುಮಾರು 20 ಇಂಥ ಚಂಡಮಾರುತಗಳು ಏಳುತ್ತವೆ. ಇನ್ನು ಮಣ್ಣಿನ ಕುಸಿತವುಂಟಾಗಿ ಅದು ಪ್ರವಾಹದ ರೂಪದಲ್ಲಿ ಹರಿದು ವಸತಿ ಪ್ರದೇಶ, ಕೃಷಿ ಭೂಮಿಗಳಿಗೆ ನುಗ್ಗುತ್ತಿದೆ. ಮಳೆಯೊಂದಿಗೆ ಮಣ್ಣಿನ ಕಣಗಳೇ ಸೋಕುತ್ತಿವೆ. ಇನ್ನೂ ಸುಮಾರು 27 ಜನರು ನಾಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಧ್ಯಪ್ರಾಂತ್ಯವಾದ ನಿಗ್ರೋಸ್ ಓರಿಯಂಟಲ್​ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಾಗೇ ದಕ್ಷಿಣ ದ್ವೀಪವಾದ ಮಿಂಡಾನೋದಲ್ಲಿ 3 ಜನ ದುರ್ಮರಣಕ್ಕೀಡಾಗಿದ್ದಾರೆ ಎಂದು ಅಲ್ಲಿನ ವಿಪತ್ತು ಪರಿಹಾರ ಏಜೆನ್ಸಿ ತಿಳಿಸಿದೆ.  ಪಿಲಾರ್​ ಎಂಬ ಹಳ್ಳಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿ ಮಂಗಳವಾರ ಭೀಕರ ಭೂಕುಸಿತ ಉಂಟಾಗಿ ಹಲವು ಮನೆಗಳು ಸಮುದ್ರದ ಪಾಲಾಗಿವೆ. ಇಲ್ಲಿ ಸಿಲುಕಿರುವ 400 ಜನರನ್ನು ಬೋಟ್ ಮೂಲಕ ಕಾಪಾಡಲಾಗುತ್ತಿದೆ. ಇಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗಾಬರಿಯಿಂದ ಬೆಂಗಳೂರಿಗೆ ಹೊರಟ ಈಶ್ವರಪ್ಪ: ಸಿಎಂ ಭೇಟಿ ಬಳಿಕ ರಾಜೀನಾಮೆ ಕುರಿತ ನಿರ್ಧಾರ ಪ್ರಕಟ ಸಾಧ್ಯತೆ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!