AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಿಪಿನ್ಸ್​​ನಲ್ಲಿ ಭೀಕರ ಚಂಡಮಾರುತದಿಂದ ಭೂಕುಸಿತ, ಪ್ರವಾಹ; 58 ಮಂದಿ ಸಾವು, ಬಿಡುವಿಲ್ಲದೆ ನಡೆಯುತ್ತಿದೆ ರಕ್ಷಣಾ ಕಾರ್ಯಾಚರಣೆ

ಉಷ್ಣವಲಯದ ಚಂಡಮಾರುತ ಮೇಗಿಯಿಂದ  ಭೂಕುಸಿತವುಂಟಾಗುತ್ತಿದ್ದು,ಈಗಾಗಲೇ ವಿಪತ್ತು ಪೀಡಿತ ದ್ವೀಪಸಮೂಹವಾದ ಫಿಲಿಪೈನ್ಸ್​ನಲ್ಲಿ ಮತ್ತಷ್ಟು ಹಾನಿಯನ್ನುಂಟು ಮಾಡಿದೆ. ಈ ಚಂಡಮಾರುತದ ವೇಗ ಪ್ರಾರಂಭದಲ್ಲಿ ಗಂಟೆಗೆ 65 ಕಿಮೀ ಇತ್ತು.

ಫಿಲಿಪಿನ್ಸ್​​ನಲ್ಲಿ ಭೀಕರ ಚಂಡಮಾರುತದಿಂದ  ಭೂಕುಸಿತ, ಪ್ರವಾಹ; 58 ಮಂದಿ ಸಾವು, ಬಿಡುವಿಲ್ಲದೆ ನಡೆಯುತ್ತಿದೆ ರಕ್ಷಣಾ ಕಾರ್ಯಾಚರಣೆ
ಫಿಲಿಪಿನ್ಸ್ ಪ್ರವಾಹ (ಪಿಟಿಐ ಚಿತ್ರ)
TV9 Web
| Edited By: |

Updated on: Apr 13, 2022 | 10:30 AM

Share

ಬೇಬೇ: ಫಿಲಿಪಿನ್ಸ್​​ನಲ್ಲಿ ಭಯಂಕರ ಪ್ರವಾಹ ಪರಿಸ್ಥಿತಿ, ಭೂಕುಸಿತ ಉಂಟಾಗುತ್ತಿದೆ. ಈ ಪಾಕೃತಿಕ ವಿಕೋಪದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಯುದ್ಧೋಪಾದಿಯಲ್ಲಿ  ಜನರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಳ್ಳಿ-ಹಳ್ಳಿಗಳಲ್ಲಿ ಭೂಕುಸಿತ ಉಂಟಾಗುತ್ತಿದ್ದು ಮಣ್ಣಿನಡಿ ಸಿಲುಕಿ ಜನರು ಉಸಿರು ನಿಲ್ಲಿಸುತ್ತಿದ್ದಾರೆ. ಕೆಲವರು ಪರದಾಡುತ್ತಿದ್ದಾರೆ. ರಕ್ಷಣಾ ಸಿಬ್ಬಂದಿ ತಮ್ಮ ಬರಿ ಗೈಯಲ್ಲೇ  ಮಣ್ಣನ್ನು ಅಗೆದು, ಸಿಲುಕಿರುವ ಜನರನ್ನು ಹೊರತೆಗೆಯುತ್ತಿದ್ದಾರೆ.  ಇಲ್ಲಿ ಬೆಟ್ಟಗುಡ್ಡಗಳು ಕುಸಿಯುವ ಜತೆ, ಮಣ್ಣು, ಚಿಕ್ಕಚಿಕ್ಕ ಕಲ್ಲುಗಳ ಮಿಶ್ರಿತ ಮಳೆಯೂ ಬೀಳುತ್ತಿದೆ.  

ಉಷ್ಣವಲಯದ ಚಂಡಮಾರುತ ಮೇಗಿಯಿಂದ  ಭೂಕುಸಿತವುಂಟಾಗುತ್ತಿದ್ದು,ಈಗಾಗಲೇ ವಿಪತ್ತು ಪೀಡಿತ ದ್ವೀಪಸಮೂಹವಾದ ಫಿಲಿಪೈನ್ಸ್​ನಲ್ಲಿ ಮತ್ತಷ್ಟು ಹಾನಿಯನ್ನುಂಟು ಮಾಡಿದೆ. ಈ ಚಂಡಮಾರುತದ ವೇಗ ಪ್ರಾರಂಭದಲ್ಲಿ ಗಂಟೆಗೆ 65 ಕಿಮೀ ಇತ್ತು. ಬಳಿಕ ಇದು ಗಂಟೆಗೆ 85 ಕಿಮೀ ವೇಗದಲ್ಲಿಯೂ ಅಪ್ಪಳಿಸಿದೆ. ಈ ವರ್ಷ ಅಪ್ಪಳಿಸಿದ ಮೊದಲ ಉಷ್ಣವಲಯದ ಚಂಡಮಾರುತ ಇದಾಗಿದ್ದು, ಈ ದ್ವೀಪಸಮೂಹದಲ್ಲಿ ವರ್ಷಕ್ಕೆ ಏನಿಲ್ಲವೆಂದರೂ ಸುಮಾರು 20 ಇಂಥ ಚಂಡಮಾರುತಗಳು ಏಳುತ್ತವೆ. ಇನ್ನು ಮಣ್ಣಿನ ಕುಸಿತವುಂಟಾಗಿ ಅದು ಪ್ರವಾಹದ ರೂಪದಲ್ಲಿ ಹರಿದು ವಸತಿ ಪ್ರದೇಶ, ಕೃಷಿ ಭೂಮಿಗಳಿಗೆ ನುಗ್ಗುತ್ತಿದೆ. ಮಳೆಯೊಂದಿಗೆ ಮಣ್ಣಿನ ಕಣಗಳೇ ಸೋಕುತ್ತಿವೆ. ಇನ್ನೂ ಸುಮಾರು 27 ಜನರು ನಾಪತ್ತೆಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಧ್ಯಪ್ರಾಂತ್ಯವಾದ ನಿಗ್ರೋಸ್ ಓರಿಯಂಟಲ್​ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಾಗೇ ದಕ್ಷಿಣ ದ್ವೀಪವಾದ ಮಿಂಡಾನೋದಲ್ಲಿ 3 ಜನ ದುರ್ಮರಣಕ್ಕೀಡಾಗಿದ್ದಾರೆ ಎಂದು ಅಲ್ಲಿನ ವಿಪತ್ತು ಪರಿಹಾರ ಏಜೆನ್ಸಿ ತಿಳಿಸಿದೆ.  ಪಿಲಾರ್​ ಎಂಬ ಹಳ್ಳಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿ ಮಂಗಳವಾರ ಭೀಕರ ಭೂಕುಸಿತ ಉಂಟಾಗಿ ಹಲವು ಮನೆಗಳು ಸಮುದ್ರದ ಪಾಲಾಗಿವೆ. ಇಲ್ಲಿ ಸಿಲುಕಿರುವ 400 ಜನರನ್ನು ಬೋಟ್ ಮೂಲಕ ಕಾಪಾಡಲಾಗುತ್ತಿದೆ. ಇಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗಾಬರಿಯಿಂದ ಬೆಂಗಳೂರಿಗೆ ಹೊರಟ ಈಶ್ವರಪ್ಪ: ಸಿಎಂ ಭೇಟಿ ಬಳಿಕ ರಾಜೀನಾಮೆ ಕುರಿತ ನಿರ್ಧಾರ ಪ್ರಕಟ ಸಾಧ್ಯತೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್