AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ; ಯುದ್ಧ ಪರಿಸ್ಥಿತಿ ತನಿಖೆ ಶೀಘ್ರವೇ ಪ್ರಾರಂಭಿಸುತ್ತೇವೆ ಎಂದ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​

ಈ ಬಾರಿ ರಷ್ಯಾ ಪ್ರಾರಂಭದಲ್ಲಿ ತಾನು ಉಕ್ರೇನ್​​ ನಾಗರಿಕರ ಮೇಲೆ ಹಲ್ಲೆ ನಡೆಸುವುದಿಲ್ಲ, ಹತ್ಯೆ ಮಾಡುವುದಿಲ್ಲ. ಉಕ್ರೇನ್​ ಸೇನೆಯನ್ನು ಹಿಮ್ಮೆಟ್ಟಿಸುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿತ್ತು. ಆದರೆ ಈಗ ರಷ್ಯಾ ಮನಸಿಗೆ ಬಂದಲ್ಲಿ ದಾಳಿ ನಡೆಸುತ್ತಿದೆ.

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ; ಯುದ್ಧ ಪರಿಸ್ಥಿತಿ ತನಿಖೆ ಶೀಘ್ರವೇ ಪ್ರಾರಂಭಿಸುತ್ತೇವೆ ಎಂದ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​
ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​
TV9 Web
| Updated By: Lakshmi Hegde|

Updated on:Mar 01, 2022 | 10:21 AM

Share

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ (Russia Invasion on Ukraine) ಮಾಡಿ ವಾರ ಕಳೆದಿದೆ. ಹೀಗಿರುವಾಗ ರಷ್ಯಾದ ದಾಳಿಯಿಂದ ಉಕ್ರೇನ್​​ನಲ್ಲಿ ಉಂಟಾದ ಯುದ್ಧ ಅಪರಾಧ ಪರಿಸ್ಥಿತಿ ಸಂಬಂಧ ತನಿಖೆ ಶುರು ಮಾಡುವುದಾಗಿ ನೆದರ್​ಲ್ಯಾಂಡ್​ನ ಹೇಗ್​​ನಲ್ಲಿರುವ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​ ತಿಳಿಸಿದೆ. ರಷ್ಯಾ ಆಕ್ರಮಣದಿಂದ ಉಕ್ರೇನ್​​ನಲ್ಲಿ ಎದುರಾಗಿರುವ ಪರಿಸ್ಥಿತಿಯ ತನಿಖೆಯನ್ನು ಆದಷ್ಟು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​​ನ (International Criminal Court) ಪ್ರಾಸಿಕ್ಯೂಟರ್​ ಕರೀಮ್​ ಖಾನ್​ ಸೋಮವಾರ ಘೋಷಿಸಿದ್ದಾರೆ. 2014ರಿಂದಲೂ ಉಕ್ರೇನ್​​ನಲ್ಲಿ ಯುದ್ಧ ಅಪರಾಧಗಳು ಮತ್ತು ಮಾನವೀಯತೆ ವಿರುದ್ಧ ದೌರ್ಜನ್ಯ, ಅಪರಾಧಗಳು ನಡೆಯುತ್ತ ಬಂದಿವೆ ಎಂಬುದಕ್ಕೆ ಸಮಂಜಸವಾದ ಸಾಕ್ಷಿಗಳು ಇವೆ. ಹೀಗಾಗಿ ಕೂಡಲೇ ತನಿಖೆ ಕೈಗೆತ್ತಿಕೊಳ್ಳುತ್ತೇವೆ ಎಂದು ಕರೀಮ್​ ಖಾನ್​ ತಿಳಿಸಿದ್ದಾರೆ.

ಯುದ್ಧ ಅಪರಾಧಗಳು ಎಂದರೆ ಯಾವುದೇ ಎರಡು ದೇಶಗಳ ಮಧ್ಯೆ ಯುದ್ಧ ನಡೆಯುವಾಗ ಅದಕ್ಕೂ ಕೆಲವು ಕಾನೂನುಗಳು ಇರುತ್ತವೆ. ಅದನ್ನು ಉಲ್ಲಂಘಿಸುವುದೇ ಯುದ್ಧ ಅಪರಾಧ ಎನ್ನಿಸಿಕೊಳ್ಳುತ್ತದೆ. ಈ ಬಾರಿ ರಷ್ಯಾ ಪ್ರಾರಂಭದಲ್ಲಿ ತಾನು ಉಕ್ರೇನ್​​ ನಾಗರಿಕರ ಮೇಲೆ ಹಲ್ಲೆ ನಡೆಸುವುದಿಲ್ಲ, ಹತ್ಯೆ ಮಾಡುವುದಿಲ್ಲ. ಉಕ್ರೇನ್​ ಸೇನೆಯನ್ನು ಹಿಮ್ಮೆಟ್ಟಿಸುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿತ್ತು. ಆದರೆ ಈಗ ರಷ್ಯಾ ಮನಸಿಗೆ ಬಂದಲ್ಲಿ ದಾಳಿ ನಡೆಸುತ್ತಿದೆ, ಶಾಲೆಗಳು, ಶಿಶುವಿಹಾರ, ಆಂಬುಲೆನ್ಸ್​ಗಳನ್ನೂ ಬಿಡುತ್ತಿಲ್ಲ ಎಂದು ಉಕ್ರೇನ್​ ಆರೋಪಿಸಿದೆ.

ಇನ್ನು ಮೂರು ದಿನಗಳ ಹಿಂದೆ ಉಕ್ರೇನ್​ ರಷ್ಯಾ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಾಲಯ (ICJ)ಕ್ಕೆ ದೂರು ಸಲ್ಲಿಸಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ರಷ್ಯಾ ತನ್ನ ಆಕ್ರಮಣವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ನರಮೇಧದ ಕಲ್ಪನೆಯನ್ನು ತಿರುಚುತ್ತಿದೆ. ಇದಕ್ಕೆ ಆ ದೇಶವೇ ಹೊಣೆಯಾಗಲಿದೆ.  ಉಕ್ರೇನ್​​ನಲ್ಲಿ ರಷ್ಯಾ ತನ್ನ ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದಷ್ಟು ಶೀಘ್ರದಲ್ಲೇ ಆದೇಶ ನೀಡಬೇಕು. ಮುಂದಿನ ವಾರದಿಂದಲೇ ವಿಚಾರಣೆ ಪ್ರಾರಂಭವಾಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ:ಉಕ್ರೇನ್​ಗೆ ಔಷಧ, ಅಗತ್ಯವಸ್ತುಗಳ ನೆರವು ನೀಡಲಿರುವ ಭಾರತ; ಪ್ರಜೆಗಳ ರಕ್ಷಣೆಗೆ ನೆರೆ ರಾಷ್ಟ್ರಗಳಿಗೂ ಸಹಾಯ ಮಾಡುವುದಾಗಿ ತಿಳಿಸಿದ ಪ್ರಧಾನಿ 

Published On - 9:54 am, Tue, 1 March 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ