AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ; ಯುದ್ಧ ಪರಿಸ್ಥಿತಿ ತನಿಖೆ ಶೀಘ್ರವೇ ಪ್ರಾರಂಭಿಸುತ್ತೇವೆ ಎಂದ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​

ಈ ಬಾರಿ ರಷ್ಯಾ ಪ್ರಾರಂಭದಲ್ಲಿ ತಾನು ಉಕ್ರೇನ್​​ ನಾಗರಿಕರ ಮೇಲೆ ಹಲ್ಲೆ ನಡೆಸುವುದಿಲ್ಲ, ಹತ್ಯೆ ಮಾಡುವುದಿಲ್ಲ. ಉಕ್ರೇನ್​ ಸೇನೆಯನ್ನು ಹಿಮ್ಮೆಟ್ಟಿಸುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿತ್ತು. ಆದರೆ ಈಗ ರಷ್ಯಾ ಮನಸಿಗೆ ಬಂದಲ್ಲಿ ದಾಳಿ ನಡೆಸುತ್ತಿದೆ.

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ; ಯುದ್ಧ ಪರಿಸ್ಥಿತಿ ತನಿಖೆ ಶೀಘ್ರವೇ ಪ್ರಾರಂಭಿಸುತ್ತೇವೆ ಎಂದ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​
ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​
TV9 Web
| Edited By: |

Updated on:Mar 01, 2022 | 10:21 AM

Share

ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ (Russia Invasion on Ukraine) ಮಾಡಿ ವಾರ ಕಳೆದಿದೆ. ಹೀಗಿರುವಾಗ ರಷ್ಯಾದ ದಾಳಿಯಿಂದ ಉಕ್ರೇನ್​​ನಲ್ಲಿ ಉಂಟಾದ ಯುದ್ಧ ಅಪರಾಧ ಪರಿಸ್ಥಿತಿ ಸಂಬಂಧ ತನಿಖೆ ಶುರು ಮಾಡುವುದಾಗಿ ನೆದರ್​ಲ್ಯಾಂಡ್​ನ ಹೇಗ್​​ನಲ್ಲಿರುವ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​ ತಿಳಿಸಿದೆ. ರಷ್ಯಾ ಆಕ್ರಮಣದಿಂದ ಉಕ್ರೇನ್​​ನಲ್ಲಿ ಎದುರಾಗಿರುವ ಪರಿಸ್ಥಿತಿಯ ತನಿಖೆಯನ್ನು ಆದಷ್ಟು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​​ನ (International Criminal Court) ಪ್ರಾಸಿಕ್ಯೂಟರ್​ ಕರೀಮ್​ ಖಾನ್​ ಸೋಮವಾರ ಘೋಷಿಸಿದ್ದಾರೆ. 2014ರಿಂದಲೂ ಉಕ್ರೇನ್​​ನಲ್ಲಿ ಯುದ್ಧ ಅಪರಾಧಗಳು ಮತ್ತು ಮಾನವೀಯತೆ ವಿರುದ್ಧ ದೌರ್ಜನ್ಯ, ಅಪರಾಧಗಳು ನಡೆಯುತ್ತ ಬಂದಿವೆ ಎಂಬುದಕ್ಕೆ ಸಮಂಜಸವಾದ ಸಾಕ್ಷಿಗಳು ಇವೆ. ಹೀಗಾಗಿ ಕೂಡಲೇ ತನಿಖೆ ಕೈಗೆತ್ತಿಕೊಳ್ಳುತ್ತೇವೆ ಎಂದು ಕರೀಮ್​ ಖಾನ್​ ತಿಳಿಸಿದ್ದಾರೆ.

ಯುದ್ಧ ಅಪರಾಧಗಳು ಎಂದರೆ ಯಾವುದೇ ಎರಡು ದೇಶಗಳ ಮಧ್ಯೆ ಯುದ್ಧ ನಡೆಯುವಾಗ ಅದಕ್ಕೂ ಕೆಲವು ಕಾನೂನುಗಳು ಇರುತ್ತವೆ. ಅದನ್ನು ಉಲ್ಲಂಘಿಸುವುದೇ ಯುದ್ಧ ಅಪರಾಧ ಎನ್ನಿಸಿಕೊಳ್ಳುತ್ತದೆ. ಈ ಬಾರಿ ರಷ್ಯಾ ಪ್ರಾರಂಭದಲ್ಲಿ ತಾನು ಉಕ್ರೇನ್​​ ನಾಗರಿಕರ ಮೇಲೆ ಹಲ್ಲೆ ನಡೆಸುವುದಿಲ್ಲ, ಹತ್ಯೆ ಮಾಡುವುದಿಲ್ಲ. ಉಕ್ರೇನ್​ ಸೇನೆಯನ್ನು ಹಿಮ್ಮೆಟ್ಟಿಸುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿತ್ತು. ಆದರೆ ಈಗ ರಷ್ಯಾ ಮನಸಿಗೆ ಬಂದಲ್ಲಿ ದಾಳಿ ನಡೆಸುತ್ತಿದೆ, ಶಾಲೆಗಳು, ಶಿಶುವಿಹಾರ, ಆಂಬುಲೆನ್ಸ್​ಗಳನ್ನೂ ಬಿಡುತ್ತಿಲ್ಲ ಎಂದು ಉಕ್ರೇನ್​ ಆರೋಪಿಸಿದೆ.

ಇನ್ನು ಮೂರು ದಿನಗಳ ಹಿಂದೆ ಉಕ್ರೇನ್​ ರಷ್ಯಾ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಾಲಯ (ICJ)ಕ್ಕೆ ದೂರು ಸಲ್ಲಿಸಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ರಷ್ಯಾ ತನ್ನ ಆಕ್ರಮಣವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ನರಮೇಧದ ಕಲ್ಪನೆಯನ್ನು ತಿರುಚುತ್ತಿದೆ. ಇದಕ್ಕೆ ಆ ದೇಶವೇ ಹೊಣೆಯಾಗಲಿದೆ.  ಉಕ್ರೇನ್​​ನಲ್ಲಿ ರಷ್ಯಾ ತನ್ನ ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದಷ್ಟು ಶೀಘ್ರದಲ್ಲೇ ಆದೇಶ ನೀಡಬೇಕು. ಮುಂದಿನ ವಾರದಿಂದಲೇ ವಿಚಾರಣೆ ಪ್ರಾರಂಭವಾಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ:ಉಕ್ರೇನ್​ಗೆ ಔಷಧ, ಅಗತ್ಯವಸ್ತುಗಳ ನೆರವು ನೀಡಲಿರುವ ಭಾರತ; ಪ್ರಜೆಗಳ ರಕ್ಷಣೆಗೆ ನೆರೆ ರಾಷ್ಟ್ರಗಳಿಗೂ ಸಹಾಯ ಮಾಡುವುದಾಗಿ ತಿಳಿಸಿದ ಪ್ರಧಾನಿ 

Published On - 9:54 am, Tue, 1 March 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ