AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​
ಇಮ್ರಾನ್ ಖಾನ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 6:19 PM

ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಜುಲೈ 24 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್‌ಗೆ ಹಾಜರಾಗುವಂತೆ ಇಮ್ರಾನ್ ಖಾನ್​​​ಗೆ ಕೋರ್ಟ್​ ತಿಳಿಸಿದೆ.

ನ್ಯಾಯಮೂರ್ತಿ ಯಾಹ್ಯಾ ಖಾನ್ ಅಫ್ರಿದಿ ನೇತೃತ್ವದ ತ್ರಿಸದಸ್ಯ ಪೀಠವು ಇಮ್ರಾನ್ ಖಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ಆರಂಭದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಧ್ಯಕ್ಷ ಲತೀಫ್ ಖೋಸಾ ಅವರ ಈ ಪ್ರಕರಣದ ವಿಚಾರಣೆಯನ್ನು ನಡೆಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಎಂದು ARY ನ್ಯೂಸ್ ವರದಿ ತಿಳಿಸಿದೆ.

ಈಗಾಗಲೇ ಪಾಕ್ ಸರ್ಕಾರವು ರಚಿಸಿರುವ ಜಂಟಿ ತನಿಖಾ ತಂಡ (ಜೆಐಟಿ) ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಲತೀಫ್ ಖೋಸಾ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಮೊದಲು ಅವರು ನ್ಯಾಯಾಲಯಕ್ಕೆ ಶರಣಾಗಬೇಕು, ಮತ್ತೆ ಅವರ ಬಗ್ಗೆ ವಾದ ಮಾಡಿ ಎಂದು ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಪ್ರಧಾನಿಯಾಗಲು ಸಹಾಯ ಮಾಡಿ ತಪ್ಪು ಮಾಡಿದ್ದೇನೆಂದು ವಿಷಾದ ವ್ಯಕ್ತಪಡಿಸಿದ ಜಾವೇದ್ ಮಿಯಾಂದಾದ್

ಇನ್ನೂ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಶಾಹೀದ್ ಜಮೀಲ್ ಕಾಕರ್ ಪ್ರಕರಣ, ಭಯೋತ್ಪಾದನೆ ಮತ್ತು ಇತರ ಆರೋಪಗಳು ಹಾಗೂ ಜೂನ್ 7 ರಂದು ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಕೋರ್ಟ್​​ ವಿಚಾರಣೆಗೆ ಬರುವಂತೆ ಸಮನ್ಸ್​​ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Thu, 20 July 23

ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ