AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​
ಇಮ್ರಾನ್ ಖಾನ್
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 6:19 PM

Share

ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಜುಲೈ 24 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್‌ಗೆ ಹಾಜರಾಗುವಂತೆ ಇಮ್ರಾನ್ ಖಾನ್​​​ಗೆ ಕೋರ್ಟ್​ ತಿಳಿಸಿದೆ.

ನ್ಯಾಯಮೂರ್ತಿ ಯಾಹ್ಯಾ ಖಾನ್ ಅಫ್ರಿದಿ ನೇತೃತ್ವದ ತ್ರಿಸದಸ್ಯ ಪೀಠವು ಇಮ್ರಾನ್ ಖಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ಆರಂಭದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಧ್ಯಕ್ಷ ಲತೀಫ್ ಖೋಸಾ ಅವರ ಈ ಪ್ರಕರಣದ ವಿಚಾರಣೆಯನ್ನು ನಡೆಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಎಂದು ARY ನ್ಯೂಸ್ ವರದಿ ತಿಳಿಸಿದೆ.

ಈಗಾಗಲೇ ಪಾಕ್ ಸರ್ಕಾರವು ರಚಿಸಿರುವ ಜಂಟಿ ತನಿಖಾ ತಂಡ (ಜೆಐಟಿ) ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಲತೀಫ್ ಖೋಸಾ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಮೊದಲು ಅವರು ನ್ಯಾಯಾಲಯಕ್ಕೆ ಶರಣಾಗಬೇಕು, ಮತ್ತೆ ಅವರ ಬಗ್ಗೆ ವಾದ ಮಾಡಿ ಎಂದು ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಪ್ರಧಾನಿಯಾಗಲು ಸಹಾಯ ಮಾಡಿ ತಪ್ಪು ಮಾಡಿದ್ದೇನೆಂದು ವಿಷಾದ ವ್ಯಕ್ತಪಡಿಸಿದ ಜಾವೇದ್ ಮಿಯಾಂದಾದ್

ಇನ್ನೂ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಶಾಹೀದ್ ಜಮೀಲ್ ಕಾಕರ್ ಪ್ರಕರಣ, ಭಯೋತ್ಪಾದನೆ ಮತ್ತು ಇತರ ಆರೋಪಗಳು ಹಾಗೂ ಜೂನ್ 7 ರಂದು ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಕೋರ್ಟ್​​ ವಿಚಾರಣೆಗೆ ಬರುವಂತೆ ಸಮನ್ಸ್​​ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Thu, 20 July 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ