AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​
ಇಮ್ರಾನ್ ಖಾನ್
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 6:19 PM

Share

ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಜುಲೈ 24 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್‌ಗೆ ಹಾಜರಾಗುವಂತೆ ಇಮ್ರಾನ್ ಖಾನ್​​​ಗೆ ಕೋರ್ಟ್​ ತಿಳಿಸಿದೆ.

ನ್ಯಾಯಮೂರ್ತಿ ಯಾಹ್ಯಾ ಖಾನ್ ಅಫ್ರಿದಿ ನೇತೃತ್ವದ ತ್ರಿಸದಸ್ಯ ಪೀಠವು ಇಮ್ರಾನ್ ಖಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ಆರಂಭದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಧ್ಯಕ್ಷ ಲತೀಫ್ ಖೋಸಾ ಅವರ ಈ ಪ್ರಕರಣದ ವಿಚಾರಣೆಯನ್ನು ನಡೆಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಎಂದು ARY ನ್ಯೂಸ್ ವರದಿ ತಿಳಿಸಿದೆ.

ಈಗಾಗಲೇ ಪಾಕ್ ಸರ್ಕಾರವು ರಚಿಸಿರುವ ಜಂಟಿ ತನಿಖಾ ತಂಡ (ಜೆಐಟಿ) ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಲತೀಫ್ ಖೋಸಾ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಮೊದಲು ಅವರು ನ್ಯಾಯಾಲಯಕ್ಕೆ ಶರಣಾಗಬೇಕು, ಮತ್ತೆ ಅವರ ಬಗ್ಗೆ ವಾದ ಮಾಡಿ ಎಂದು ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಪ್ರಧಾನಿಯಾಗಲು ಸಹಾಯ ಮಾಡಿ ತಪ್ಪು ಮಾಡಿದ್ದೇನೆಂದು ವಿಷಾದ ವ್ಯಕ್ತಪಡಿಸಿದ ಜಾವೇದ್ ಮಿಯಾಂದಾದ್

ಇನ್ನೂ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಶಾಹೀದ್ ಜಮೀಲ್ ಕಾಕರ್ ಪ್ರಕರಣ, ಭಯೋತ್ಪಾದನೆ ಮತ್ತು ಇತರ ಆರೋಪಗಳು ಹಾಗೂ ಜೂನ್ 7 ರಂದು ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಕೋರ್ಟ್​​ ವಿಚಾರಣೆಗೆ ಬರುವಂತೆ ಸಮನ್ಸ್​​ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Thu, 20 July 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು