ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​
ಇಮ್ರಾನ್ ಖಾನ್
Follow us
|

Updated on:Jul 20, 2023 | 6:19 PM

ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಜುಲೈ 24 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್‌ಗೆ ಹಾಜರಾಗುವಂತೆ ಇಮ್ರಾನ್ ಖಾನ್​​​ಗೆ ಕೋರ್ಟ್​ ತಿಳಿಸಿದೆ.

ನ್ಯಾಯಮೂರ್ತಿ ಯಾಹ್ಯಾ ಖಾನ್ ಅಫ್ರಿದಿ ನೇತೃತ್ವದ ತ್ರಿಸದಸ್ಯ ಪೀಠವು ಇಮ್ರಾನ್ ಖಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ಆರಂಭದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಧ್ಯಕ್ಷ ಲತೀಫ್ ಖೋಸಾ ಅವರ ಈ ಪ್ರಕರಣದ ವಿಚಾರಣೆಯನ್ನು ನಡೆಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಎಂದು ARY ನ್ಯೂಸ್ ವರದಿ ತಿಳಿಸಿದೆ.

ಈಗಾಗಲೇ ಪಾಕ್ ಸರ್ಕಾರವು ರಚಿಸಿರುವ ಜಂಟಿ ತನಿಖಾ ತಂಡ (ಜೆಐಟಿ) ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಲತೀಫ್ ಖೋಸಾ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಮೊದಲು ಅವರು ನ್ಯಾಯಾಲಯಕ್ಕೆ ಶರಣಾಗಬೇಕು, ಮತ್ತೆ ಅವರ ಬಗ್ಗೆ ವಾದ ಮಾಡಿ ಎಂದು ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಪ್ರಧಾನಿಯಾಗಲು ಸಹಾಯ ಮಾಡಿ ತಪ್ಪು ಮಾಡಿದ್ದೇನೆಂದು ವಿಷಾದ ವ್ಯಕ್ತಪಡಿಸಿದ ಜಾವೇದ್ ಮಿಯಾಂದಾದ್

ಇನ್ನೂ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಶಾಹೀದ್ ಜಮೀಲ್ ಕಾಕರ್ ಪ್ರಕರಣ, ಭಯೋತ್ಪಾದನೆ ಮತ್ತು ಇತರ ಆರೋಪಗಳು ಹಾಗೂ ಜೂನ್ 7 ರಂದು ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಕೋರ್ಟ್​​ ವಿಚಾರಣೆಗೆ ಬರುವಂತೆ ಸಮನ್ಸ್​​ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Thu, 20 July 23

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ