AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ವಕೀಲನ ಹತ್ಯೆ ಪ್ರಕರಣ: ಜು.24ರಂದು ವಿಚಾರಣೆಗೆ ಬರುವಂತೆ ಪಾಕ್​​ ಮಾಜಿ ಪ್ರಧಾನಿ ಇಮ್ರಾನ್ ಖಾನ್​​​ಗೆ ಸುಪ್ರೀಂ ಸಮನ್ಸ್​​
ಇಮ್ರಾನ್ ಖಾನ್
ಅಕ್ಷಯ್​ ಪಲ್ಲಮಜಲು​​
|

Updated on:Jul 20, 2023 | 6:19 PM

Share

ಇಸ್ಲಾಮಾಬಾದ್: ಸುಪ್ರೀಂ ಕೋರ್ಟ್​ನ ಹಿರಿಯ ವಕೀಲ ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ ಎಂದು ARY ನ್ಯೂಸ್ ವರದಿ ಮಾಡಿದೆ. ಜುಲೈ 24 ರಂದು ಬೆಳಿಗ್ಗೆ 10:30 ಕ್ಕೆ ಸುಪ್ರೀಂ ಕೋರ್ಟ್‌ಗೆ ಹಾಜರಾಗುವಂತೆ ಇಮ್ರಾನ್ ಖಾನ್​​​ಗೆ ಕೋರ್ಟ್​ ತಿಳಿಸಿದೆ.

ನ್ಯಾಯಮೂರ್ತಿ ಯಾಹ್ಯಾ ಖಾನ್ ಅಫ್ರಿದಿ ನೇತೃತ್ವದ ತ್ರಿಸದಸ್ಯ ಪೀಠವು ಇಮ್ರಾನ್ ಖಾನ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದೆ. ಈ ವಿಚಾರಣೆಯ ಆರಂಭದಲ್ಲಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಧ್ಯಕ್ಷ ಲತೀಫ್ ಖೋಸಾ ಅವರ ಈ ಪ್ರಕರಣದ ವಿಚಾರಣೆಯನ್ನು ನಡೆಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು ಎಂದು ARY ನ್ಯೂಸ್ ವರದಿ ತಿಳಿಸಿದೆ.

ಈಗಾಗಲೇ ಪಾಕ್ ಸರ್ಕಾರವು ರಚಿಸಿರುವ ಜಂಟಿ ತನಿಖಾ ತಂಡ (ಜೆಐಟಿ) ದೇಶದ ಕಾನೂನಿಗೆ ವಿರುದ್ಧವಾಗಿದೆ ಎಂದು ಲತೀಫ್ ಖೋಸಾ ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಮೊದಲು ಅವರು ನ್ಯಾಯಾಲಯಕ್ಕೆ ಶರಣಾಗಬೇಕು, ಮತ್ತೆ ಅವರ ಬಗ್ಗೆ ವಾದ ಮಾಡಿ ಎಂದು ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್ ಪ್ರಧಾನಿಯಾಗಲು ಸಹಾಯ ಮಾಡಿ ತಪ್ಪು ಮಾಡಿದ್ದೇನೆಂದು ವಿಷಾದ ವ್ಯಕ್ತಪಡಿಸಿದ ಜಾವೇದ್ ಮಿಯಾಂದಾದ್

ಇನ್ನೂ ಪೊಲೀಸ್ ಠಾಣೆಯಲ್ಲಿ ಕೊಲೆಯಾದ ಶಾಹೀದ್ ಜಮೀಲ್ ಕಾಕರ್ ಪ್ರಕರಣ, ಭಯೋತ್ಪಾದನೆ ಮತ್ತು ಇತರ ಆರೋಪಗಳು ಹಾಗೂ ಜೂನ್ 7 ರಂದು ಅಡ್ವೊಕೇಟ್ ಅಬ್ದುಲ್ ರಜಾಕ್ ಶಾರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್ ಅವರನ್ನು ಕೋರ್ಟ್​​ ವಿಚಾರಣೆಗೆ ಬರುವಂತೆ ಸಮನ್ಸ್​​ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Thu, 20 July 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು