AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಬೂಲ್​ನ ಐಷಾರಾಮಿ ಹೋಟೆಲ್​​ಗಳಿಂದ ತಕ್ಷಣ ಹೊರಡಿ’-ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿದ ಯುಎಸ್​, ಯುಕೆ

ಆಗಸ್ಟ್​ 15ರಂದು ಅಫ್ಘಾನಿಸ್ತಾವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ, ಅಮೆರಿಕ, ಇಂಗ್ಲೆಂಡ್​ ಸೇರಿ ಬಹುತೇಕ ಎಲ್ಲ ದೇಶಗಳ ನಾಗರಿಕರೂ ಅಲ್ಲಿಂದ ತಮ್ಮ ದೇಶಗಳಿಗೆ ತೆರಳಿದ್ದಾರೆ.

‘ಕಾಬೂಲ್​ನ ಐಷಾರಾಮಿ ಹೋಟೆಲ್​​ಗಳಿಂದ ತಕ್ಷಣ ಹೊರಡಿ’-ತಮ್ಮ  ನಾಗರಿಕರಿಗೆ ಎಚ್ಚರಿಕೆ ನೀಡಿದ ಯುಎಸ್​, ಯುಕೆ
ಕಾಬೂಲ್​​ನ ಸೆರೆನಾ ಹೊಟೆಲ್​ ಚಿತ್ರ
TV9 Web
| Edited By: |

Updated on:Oct 11, 2021 | 6:24 PM

Share

ಅಫ್ಘಾನಿಸ್ತಾನ (Afghanistan)ದ ಐಷಾರಾಮಿ ಹೋಟೆಲ್​ಗಳು ಮತ್ತು ಅದರ ಸುತ್ತಮುತ್ತದ ಪ್ರದೇಶಗಳಲ್ಲಿ ತಂಗಿರುವ ತಮ್ಮ ದೇಶಗಳ ನಾಗರಿಕರಿಗೆ ಯುಎಸ್ ಹಾಗೂ ಇಂಗ್ಲೆಂಡ್ (US and UK)​ ದೇಶಗಳು ಎಚ್ಚರಿಕೆಯೊಂದನ್ನು ನೀಡಿವೆ. ಅದರಲ್ಲೂ ಅಫ್ಘಾನ್​ನ ಕಾಬೂಲ್ (Kabul Hotels)​​ನಲ್ಲಿರುವ ಸೆರೆನಾ ಹೋಟೆಲ್​​ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ತಂಗಿದ್ದರೆ, ಕೂಡಲೇ ಅಲ್ಲಿಂದ ಜಾಗ ಖಾಲಿ ಮಾಡಿ ಎಂದು ಎರಡೂ ದೇಶಗಳು ತಮ್ಮ ನಾಗರಿಕರಿಗೆ ತಿಳಿಸಿವೆ. ಹಾಗೇ, ಹೊಸದಾದ ಟ್ರಾವೆಲ್​ ಅಡ್ವೈಸರಿಯನ್ನು​​ ಬಿಡುಗಡೆ ಮಾಡಿವೆ. ಸೆರೆನಾ ಹೋಟೆಲ್​ ಮೇಲೆ ಈ ಹಿಂದೆ ಕೂಡ ತಾಲಿಬಾನ್​ ದಾಳಿ ಮಾಡಿತ್ತು. ಈಗಲೂ ಕೂಡ ಐಷಾರಾಮಿ ಹೋಟೆಲ್​ ಮತ್ತು ಅದರ ಸುತ್ತಲಿನ ಪ್ರದೇಶಗಳ ಭದ್ರತೆಗೆ ಹೆಚ್ಚಿನ ಅಪಾಯ ಇದೆ. ಅದರಲ್ಲೂ ಈ ಬಾರಿ ಅಪಾಯ ಇರುವುದು ಐಸಿಸ್​ ಉಗ್ರರಿಂದ ಎಂದು ಯುಕೆ ಮತ್ತು ಯುಎಸ್​ಗಳು ಹೇಳಿವೆ.

ಆಗಸ್ಟ್​ 15ರಂದು ಅಫ್ಘಾನಿಸ್ತಾವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ, ಅಮೆರಿಕ, ಇಂಗ್ಲೆಂಡ್​ ಸೇರಿ ಬಹುತೇಕ ಎಲ್ಲ ದೇಶಗಳ ನಾಗರಿಕರೂ ಅಲ್ಲಿಂದ ತಮ್ಮ ದೇಶಗಳಿಗೆ ತೆರಳಿದ್ದಾರೆ. ಆಯಾ ವಿದೇಶೀ ಸರ್ಕಾರಗಳೇ ಖುದ್ದಾಗಿ ತಮ್ಮ ನಾಗರಿಕರನ್ನು ಅಫ್ಘಾನ್​​ನಿಂದ ಕರೆಸಿಕೊಂಡಿವೆ. ಆದರೂ ಯುಎಸ್​, ಯುಕೆಯ ಕೆಲ ಪತ್ರಕರ್ತರು, ಇನ್ನಿತರ ಬೆರಳೆಣಿಕೆಯಷ್ಟು ಜನರು ತಮ್ಮ ಕೆಲಸಕ್ಕಾಗಿ, ಅನಿವಾರ್ಯ ಕಾರಣಗಳಿಂದ ಇಲ್ಲಿಯೇ ಉಳಿದಿದ್ದಾರೆ. ಅವರಲ್ಲಿ ಹೀಗೆ ಐಷಾರಾಮಿ ಹೋಟೆಲ್​ಗಳಲ್ಲಿ ಉಳಿದುಕೊಂಡವರೂ ಇದ್ದಾರೆ. ಅಂಥವರನ್ನು ಇದೀಗ ಎಚ್ಚರಿಸಲಾಗಿದೆ.

ಅಫ್ಘಾನಿಸ್ತಾನದ ಕುಂಡುಜ್​ ನಗರದ ಮಸೀದಿಯೊಂದರಲ್ಲಿ ಕೆಲವೇ ದಿನಗಳ ಹಿಂದೆ ಭೀಕರ ಸ್ಫೋಟವಾಗಿದೆ. ಸ್ಫೋಟವಾದ ಸಮಯದಲ್ಲಿ ಮಸೀದಿಯಲ್ಲಿ 300 ಮಂದಿ ಇದ್ದರು. ಅದರಲ್ಲಿ 100 ಜನ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ಯುಎಸ್​, ಯುಕೆಗಳು ಮತ್ತೊಮ್ಮೆ ತಮ್ಮ ನಾಗರಿಕರನ್ನು ಎಚ್ಚರಿಸಿವೆ.  ಹೀಗೆ ಸ್ಫೋಟಗೊಂಡ ಮಸೀದಿ ಶಿಯಾ ಸಮುದಾಯಕ್ಕೆ ಸೇರಿದ್ದಾಗಿದೆ. ಈ ದುರಂತವನ್ನು ವಿಶ್ವದಾದ್ಯಂತ ಖಂಡಿಸಲಾಗಿದೆ.

ಇದನ್ನೂ ಓದಿ: ‘ಕೋಟಿಗೊಬ್ಬ 3’ ರಿಲೀಸ್​ ಸಂದರ್ಭದಲ್ಲೇ ಕಿಚ್ಚನ ಪುತ್ಥಳಿ; ಉದ್ಘಾಟನೆಗೆ ಆಗಮಿಸಲಿದ್ದಾರೆ ಸುದೀಪ್​

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ

Published On - 6:21 pm, Mon, 11 October 21

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!