AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

ಬಸ್​ ತಪ್ಪಿ ಹೋಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರಿ ನೌಕರರು ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಡುತ್ತಿದ್ದರು.

ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 17, 2021 | 6:07 PM

Share

ಭಾರತದ ಸರ್ಕಾರಿ ಕಚೇರಿಗಳಲ್ಲಿ ನೌಕರರು ಹಾಯಾಗಿರುತ್ತಾರೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಕಚೇರಿಯಿಂದ ತಡವಾಗಿ ಹೊರಡುವ ಉದಾಹರಣೆ ತುಂಬಾನೇ ಕಡಿಮೆ. ಶಿಫ್ಟ್​ 6 ಗಂಟೆಗೆ ಪೂರ್ಣಗೊಳ್ಳುತ್ತದೆ ಎಂದರೆ ಅನೇಕರು 5:45ಕ್ಕೆ ಕಚೇರಿಯಿಂದ ಹೊರಟಿರುತ್ತಾರೆ. ಆದರೆ, ಬೇರೆ ದೇಶದಲ್ಲಿ ಈ ರೀತಿ ಇಲ್ಲ. ಜಪಾನ್​ನಲ್ಲಿ ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಸಿಬ್ಬಂದಿಗೆ ಶಿಕ್ಷೆ ಇದೆ ಎಂದರೆ ನೀವು ನಂಬಲೇ ಬೇಕು! ಹೌದು, ಜಪಾನ್​ನಲ್ಲಿ ಇತ್ತೀಚೆಗೆ ಹೀಗೊಂದು ವಿಚಾರ ಬೆಳಕಿಗೆ ಬಂದಿದೆ. ಶಿಕ್ಷೆ ರೂಪದಲ್ಲಿ ಇವರ ಅರ್ಧ ದಿನದ ಸ್ಯಾಲರಿ ಕಟ್​ ಮಾಡಲಾಗಿದೆ. 2019 ಮೇ ಇಂದ ಜನವರಿ 2021ರವರೆಗೆ ಏಳು ಸಿಬ್ಬಂದಿ 316 ಬಾರಿ 5.15ಕ್ಕೆ ತೆರಳುವ ಬದಲು 5.13ಕ್ಕೆ ತೆರಳಿದ್ದಾರೆ. ಅಂದರೆ, ಎರಡು ನಿಮಿಷ ಕಚೇರಿಯಿಂದ ಮೊದಲು ಹೊರಟಂತಾಗಿದೆ. ಇದನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ಅಷ್ಟೇ ಅಲ್ಲ ಸ್ಯಾಲರಿ ಕೂಡ ಕಟ್​ ಮಾಡಿದೆ.

ನಮಗೆ ಸಂಜೆ 5.17ಕ್ಕೆ ಬಸ್​ ಇದೆ. ಈ ಬಸ್​ ತಪ್ಪಿದ ನಂತರ ಮತ್ತೊಂದು ಬಸ್​ ಇರೋದು 5.47ಕ್ಕೆ. ಈ ಕಾರಣಕ್ಕೆ ನಾವು ಎರಡು ನಿಮಿಷ ಮೊದಲು ತೆರಳುತ್ತಿದ್ದೆವು. ಆದರೆ, ಸರ್ಕಾರ ಇದನ್ನು ಇಷ್ಟು ಗಂಭೀರವಾಗಿ ಪರಿಗಣಿಸುತ್ತದೆ ಎಂದು ತಿಳಿದಿರಿಲಿಲ್ಲ ಎಂದಿದ್ದಾರೆ ಸರ್ಕಾರಿ ನೌಕರರು.

ಇನ್ನು, ಸರ್ಕಾರಿ ನೌಕರರು ಇದಕ್ಕೆ ಪೂರ್ಣ ಪ್ರಮಾಣದ ಸ್ಯಾಲರಿಯನ್ನು ಹಾಕುವಂತೆ ಮನವಿ ಮಾಡಿದ್ದಾರೆ. ಆದರೆ, ಇದನ್ನು ಸರ್ಕಾರ ನಿರಾಕರಿಸಿದೆ. ಸರಿಯಾದ ಸಮಯಕ್ಕೆ ಬಂದು ಸರಿಯಾದ ಸಮಯಕ್ಕೆ ತೆರಳಿದರೆ ಮಾತ್ರ ಸ್ಯಾಲರಿ ನೀಡುತ್ತೇವೆ ಎಂದು ಹೇಳಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ವೇತನ ಪಡೆಯುವ ವರ್ಗಕ್ಕೆ ಹೊರೆಯಾದ ವೇಜ್​ ಕೋಡ್​-ಬಜೆಟ್​; ಭವಿಷ್ಯ ನಿಧಿಯೇ ತೊಡಕಾಗ್ತಿದೆ..ಟೇಕ್​ ಹೋಂ ಸ್ಯಾಲರಿ ಕಡಿಮೆ ಆಗ್ತಿದೆ !

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ