AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ

ಲೆಬನಾನ್‌ನಾದ್ಯಂತ ಸಂವಹನಕ್ಕಾಗಿ ಬಳಸಲಾದ ಪೇಜರ್‌ಗಳು ಸ್ಫೋಟಗೊಂಡಿದ್ದರಿಂದ ಹೆಜ್ಬೊಲ್ಲಾ ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ 2750 ಜನರು ಗಾಯಗೊಂಡಿದ್ದಾರೆ. ಲೆಬನಾನ್‌ನಲ್ಲಿರುವ ಇರಾನ್‌ನ ರಾಯಭಾರಿ ದೇಶದಲ್ಲಿ ಪೇಜರ್‌ಗಳ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.

ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ
ಲೆಬನಾನ್​ನಲ್ಲಿ ಸರಣಿ ಸ್ಫೋಟ
ಸುಷ್ಮಾ ಚಕ್ರೆ
|

Updated on: Sep 17, 2024 | 9:38 PM

Share

ಲೆಬನಾನ್: ಇಸ್ರೇಲ್ ಉದ್ವಿಗ್ನತೆಯ ನಡುವೆ ನಿಗೂಢ ಪೇಜರ್ ಸ್ಫೋಟಗಳಲ್ಲಿ ಹಿಜ್ಬುಲ್ಲಾ ಹೋರಾಟಗಾರರು, ಇರಾನ್‌ನ ಲೆಬನಾನ್ ರಾಯಭಾರಿ ಸೇರಿದಂತೆ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಲೆಬನಾನ್‌ನಾದ್ಯಂತ ಏಕಕಾಲದಲ್ಲಿ ಪೇಜರ್‌ಗಳ ಸ್ಫೋಟದ ದಾಳಿಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 2,750 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 200 ಮಂದಿಗೆ ಗಂಭೀರ ಗಾಯಗಳಾಗಿವೆ.

ಗಾಜಾ ಯುದ್ಧದ ಜೊತೆಗೆ ಕಳೆದ ಅಕ್ಟೋಬರ್‌ನಿಂದ ಹಿಜ್ಬುಲ್ಲಾದೊಂದಿಗೆ ಸಂಘರ್ಷದಲ್ಲಿ ತೊಡಗಿರುವ ಇಸ್ರೇಲಿ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆಯಿಲ್ಲ. ಇರಾನ್ ಬೆಂಬಲಿತ ಲೆಬನಾನಿನ ಉಗ್ರಗಾಮಿ ಗುಂಪು ಹಿಜ್ಬುಲ್ಲಾ ಸದಸ್ಯರು ಸೇರಿದಂತೆ 2000ಕ್ಕೂ ಹೆಚ್ಚು ಜನರು ಇಂದು ಅವರ ಸಂವಹನ ಪೇಜರ್‌ಗಳು ನಿಗೂಢವಾಗಿ ಸ್ಫೋಟಗೊಂಡಾಗ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಇರಾನ್​ನಲ್ಲಿ ಬಸ್​ ಪಲ್ಟಿಯಾಗಿ 35 ಪಾಕಿಸ್ತಾನಿ ಪ್ರಯಾಣಿಕರು ಸಾವು

ಬೈರುತ್‌ನಲ್ಲಿ ನಡೆದ ಪೇಜರ್ ಸ್ಫೋಟದಲ್ಲಿ ಲೆಬನಾನ್‌ನಲ್ಲಿನ ಇರಾನ್ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುವ ವೀಡಿಯೊಗಳು ಮತ್ತು ಫೋಟೋಗಳು ಗಾಯಗೊಂಡ ವ್ಯಕ್ತಿಗಳು ನೆಲದ ಮೇಲೆ ಕುಳಿತು ಅಥವಾ ಮಲಗಿರುವುದನ್ನು ತೋರಿಸಿವೆ. ಲೆಬನಾನ್‌ನ ಪೂರ್ವದಲ್ಲಿ ಹಿಜ್ಬುಲ್ಲಾ ಸದಸ್ಯನ 10 ವರ್ಷದ ಮಗಳು ಆಕೆಯ ತಂದೆಯ ಪೇಜರ್ ಸ್ಫೋಟಗೊಂಡಾಗ ಸಾವನ್ನಪ್ಪಿದ್ದಾಳೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ