AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ

ಲೆಬನಾನ್‌ನಾದ್ಯಂತ ಸಂವಹನಕ್ಕಾಗಿ ಬಳಸಲಾದ ಪೇಜರ್‌ಗಳು ಸ್ಫೋಟಗೊಂಡಿದ್ದರಿಂದ ಹೆಜ್ಬೊಲ್ಲಾ ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ 2750 ಜನರು ಗಾಯಗೊಂಡಿದ್ದಾರೆ. ಲೆಬನಾನ್‌ನಲ್ಲಿರುವ ಇರಾನ್‌ನ ರಾಯಭಾರಿ ದೇಶದಲ್ಲಿ ಪೇಜರ್‌ಗಳ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.

ಲೆಬನಾನ್​ನಲ್ಲಿ ಸರಣಿ ಸ್ಫೋಟ; 8 ಜನ ಸಾವು, 2750 ಹೆಚ್ಚು ಜನರಿಗೆ ಗಾಯ
ಲೆಬನಾನ್​ನಲ್ಲಿ ಸರಣಿ ಸ್ಫೋಟ
ಸುಷ್ಮಾ ಚಕ್ರೆ
|

Updated on: Sep 17, 2024 | 9:38 PM

Share

ಲೆಬನಾನ್: ಇಸ್ರೇಲ್ ಉದ್ವಿಗ್ನತೆಯ ನಡುವೆ ನಿಗೂಢ ಪೇಜರ್ ಸ್ಫೋಟಗಳಲ್ಲಿ ಹಿಜ್ಬುಲ್ಲಾ ಹೋರಾಟಗಾರರು, ಇರಾನ್‌ನ ಲೆಬನಾನ್ ರಾಯಭಾರಿ ಸೇರಿದಂತೆ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಲೆಬನಾನ್‌ನಾದ್ಯಂತ ಏಕಕಾಲದಲ್ಲಿ ಪೇಜರ್‌ಗಳ ಸ್ಫೋಟದ ದಾಳಿಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 2,750 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 200 ಮಂದಿಗೆ ಗಂಭೀರ ಗಾಯಗಳಾಗಿವೆ.

ಗಾಜಾ ಯುದ್ಧದ ಜೊತೆಗೆ ಕಳೆದ ಅಕ್ಟೋಬರ್‌ನಿಂದ ಹಿಜ್ಬುಲ್ಲಾದೊಂದಿಗೆ ಸಂಘರ್ಷದಲ್ಲಿ ತೊಡಗಿರುವ ಇಸ್ರೇಲಿ ಮಿಲಿಟರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆಯಿಲ್ಲ. ಇರಾನ್ ಬೆಂಬಲಿತ ಲೆಬನಾನಿನ ಉಗ್ರಗಾಮಿ ಗುಂಪು ಹಿಜ್ಬುಲ್ಲಾ ಸದಸ್ಯರು ಸೇರಿದಂತೆ 2000ಕ್ಕೂ ಹೆಚ್ಚು ಜನರು ಇಂದು ಅವರ ಸಂವಹನ ಪೇಜರ್‌ಗಳು ನಿಗೂಢವಾಗಿ ಸ್ಫೋಟಗೊಂಡಾಗ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಇರಾನ್​ನಲ್ಲಿ ಬಸ್​ ಪಲ್ಟಿಯಾಗಿ 35 ಪಾಕಿಸ್ತಾನಿ ಪ್ರಯಾಣಿಕರು ಸಾವು

ಬೈರುತ್‌ನಲ್ಲಿ ನಡೆದ ಪೇಜರ್ ಸ್ಫೋಟದಲ್ಲಿ ಲೆಬನಾನ್‌ನಲ್ಲಿನ ಇರಾನ್ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುವ ವೀಡಿಯೊಗಳು ಮತ್ತು ಫೋಟೋಗಳು ಗಾಯಗೊಂಡ ವ್ಯಕ್ತಿಗಳು ನೆಲದ ಮೇಲೆ ಕುಳಿತು ಅಥವಾ ಮಲಗಿರುವುದನ್ನು ತೋರಿಸಿವೆ. ಲೆಬನಾನ್‌ನ ಪೂರ್ವದಲ್ಲಿ ಹಿಜ್ಬುಲ್ಲಾ ಸದಸ್ಯನ 10 ವರ್ಷದ ಮಗಳು ಆಕೆಯ ತಂದೆಯ ಪೇಜರ್ ಸ್ಫೋಟಗೊಂಡಾಗ ಸಾವನ್ನಪ್ಪಿದ್ದಾಳೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA