AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಿಜ್ಬುಲ್ಲಾ ಸದಸ್ಯರ ಅಂತ್ಯಕ್ರಿಯೆ ವೇಳೆ ವಾಕಿ-ಟಾಕಿಗಳು ಸ್ಫೋಟ

ಲೆಬನಾನ್ ನಾದ್ಯಂತ ಹಿಜ್ಬುಲ್ಲಾಗಳು ಬಳಕೆ ಮಾಡುತ್ತಿದ್ದ ಪೇಜರ್ ಗಳು ಸ್ಫೋಟಗೊಂಡ ಬೆನ್ನಲ್ಲೇ ವಾಕಿ-ಟಾಕಿಗಳೂ ಸ್ಫೋಟಗೊಳ್ಳಲು ಆರಂಭವಾಗಿವೆ. ಲೆಬನಾನ್ ಹಾಗೂ ಸಿರಿಯಾಗಳಲ್ಲಿ ಹಿಜ್ಬುಲ್ಲಾ ಸಂಘಟನೆಯ ನೂರಾರು ಮಂದಿ ಪೇಜರ್, ವಾಕಿ-ಟಾಕಿ ಸ್ಫೋಟಗೊಂಡು ತಮ್ಮ ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ. ಈ ಗೌಪ್ಯ ದಾಳಿಯ ಹಿಂದೆ ಇಸ್ರೇಲ್ ಕೈವಾಡ ಇರುವ ಶಂಕೆ ವ್ಯಕ್ತವಾಗತೊಡಗಿದೆ.

Video: ಹಿಜ್ಬುಲ್ಲಾ ಸದಸ್ಯರ ಅಂತ್ಯಕ್ರಿಯೆ ವೇಳೆ ವಾಕಿ-ಟಾಕಿಗಳು ಸ್ಫೋಟ
ಸ್ಫೋಟImage Credit source: BBC
ನಯನಾ ರಾಜೀವ್
|

Updated on: Sep 19, 2024 | 8:03 AM

Share

ಲೆಬನಾನ್​ನಲ್ಲಿ ಹಿಜ್ಬುಲ್ಲಾ(Hezbollah)ಗಳು ಬಳಸುತ್ತಿದ್ದ ಪೇಜರ್​ಗಳ ಸ್ಫೋಟ ಬೆನ್ನಲ್ಲೇ ಅವರ ವಾಕಿ-ಟಾಕಿಗಳು ಕೂಡ ಸ್ಫೋಟಗೊಂಡಿದ್ದು 20ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಲೆಬನಾನ್​ನಲ್ಲಿ ಹಿಜ್ಬುಲ್ಲಾ ಬಳಸುತ್ತಿದ್ದ ಪೇಜರ್​ಗಳ ಸರಣಿ ಸ್ಫೋಟದಿಂದ 9ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಿಜ್ಬುಲ್ಲಾ ಸದಸ್ಯರ ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ವಾಕಿ-ಟಾಕಿಗಳು ಕೂಡ ಸ್ಫೋಟಗೊಂಡಿವೆ.

ದೇಶದ ಅನೇಕ ಪ್ರದೇಶಗಳಲ್ಲಿ ಎಲೆಕ್ಟ್ರಾನಿಕ್ ಸಾಧನಗಳು ಸ್ಫೋಟಗೊಂಡಿರುವ ಇತ್ತೀಚಿನ ಪ್ರಕರಣಗಳಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಸರ್ಕಾರ ದೃಢಪಡಿಸಿದೆ. ಹಿಜ್ಬುಲ್ಲಾಗಳು ಹೊಂದಿದ್ದ ಪೇಜರ್​ ಸಾಧನಗಳು ದೇಶದಾದ್ಯಂತ ಸ್ಫೋಟಗೊಂಡು 2,800 ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಣ್ಣಿಗೆ ತೀವ್ರ ಗಾಯಗಳಾಗಿದ್ದು, ಬೆರಳುಗಳು ದೇಹದಿಂದ ಬೇರ್ಪಟ್ಟಿವೆ ಎಂದು ವೈದ್ಯರು ಹೇಳಿದ್ದಾರೆ.

ದಾಳಿಗಳ ಹಿಂದೆ ಇಸ್ರೇಲ್ ಕೈವಾಡವಿರುವ ಬಗ್ಗೆ ಆರೋಪ ಕೇಳಿಬಂದಿದೆ. ಇಸ್ರೇಲ್ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಹಿಜ್ಬುಲ್ಲಾ ಎಚ್ಚರಿಕೆ ನೀಡಿದೆ. ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಲೆಬನಾನ್ ದೂರು ನೀಡಿದೆ. ಮೃತರದಲ್ಲಿ ಇಬ್ಬರು ಹಿಜ್ಬುಲ್ಲಾ ಸದಸ್ಯರು, ಸಂಸದರೊಬ್ಬರ ಪುತ್ರ ಕೂಡ ಸೇರಿದ್ದಾನೆ.

ಕಳೆದ ಅಕ್ಟೋಬರ್‌ನಿಂದ ಹಿಜ್ಬುಲ್ಲಾ ನಾಯಕರ ಮೇಲೆ ಗುರಿಯಿಟ್ಟು ಇಸ್ರೇಲ್‌ ದಾಳಿ ನಡೆಸುತ್ತಿತ್ತು. ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ಮಾಹಿತಿಗಳು ಸೋರಿಕೆಯಾಗಿ ಇಸ್ರೇಲ್‌ ದಾಳಿ ಮಾಡುತ್ತಿದೆ ಎಂದು ಅರಿತ ಹಿಜ್ಬುಲ್ಲಾ ಫೋನ್‌ ಬಳಸದೇ ಸಂವಹನಕ್ಕಾಗಿ ಪೇಜರ್‌ ಬಳಸುತ್ತಿತ್ತು.

ಮತ್ತಷ್ಟು ಓದಿ: Video: ಲೆಬನಾನ್​ನಲ್ಲಿ ಪೇಜರ್ಸ್ ಸ್ಫೋಟ, 9 ಮಂದಿ ಸಾವು, 2,800 ಜನರಿಗೆ ಗಾಯ

ಹೊಸ ಮಾಡೆಲ್‌ನ ಪೇಜರ್‌ಗಳನ್ನು ಇರಾನ್‌ನಿಂದ ತಂದು ಲೆಬನಾನ್‌ನಲ್ಲಿ ಬಳಕೆ ಮಾಡಲಾಗಿದೆ. ಇಸ್ರೇಲ್ ಜೊತೆ ಇರಾನ್‌ನ ಪೇಜರ್ ಕಂಪನಿ ಕೈಜೋಡಿಸಿರಬಹುದು ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ