AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಡಲೇ ದೇಶದಲ್ಲಿ ಚುನಾವಣೆ ನಡೆಸಬೇಕು, ಜನರೇ ಪ್ರಧಾನಿಯನ್ನು ನಿರ್ಧರಿಸಬೇಕು: ಇಮ್ರಾನ್​ ಖಾನ್​ ಟ್ವೀಟ್​

ಟ್ವೀಟ್ ಮಾಡಿರುವ ಇಮ್ರಾನ್ ಖಾನ್​, ದೇಶದಲ್ಲಿ ಶೀಘ್ರದಲ್ಲಿಯೇ ಚುನಾವಣೆ ನಡೆಸಬೇಕು. ಆಗಷ್ಟೇ ಪ್ರಧಾನಿ ಆಯ್ಕೆ ಪಾರದರ್ಶಕವಾಗಿ ನಡೆಯುತ್ತದೆ.  ಬುಧವಾರ ನಾನು ಪೇಶಾವರದಲ್ಲಿ ರ್ಯಾಲಿ ನಡೆಸುತ್ತೇನೆ ಎಲ್ಲರೂ ಬನ್ನಿ ಎಂದೂ ಹೇಳಿದ್ದಾರೆ.

ಕೂಡಲೇ ದೇಶದಲ್ಲಿ ಚುನಾವಣೆ ನಡೆಸಬೇಕು, ಜನರೇ ಪ್ರಧಾನಿಯನ್ನು ನಿರ್ಧರಿಸಬೇಕು: ಇಮ್ರಾನ್​ ಖಾನ್​ ಟ್ವೀಟ್​
ಇಮ್ರಾನ್ ಖಾನ್
TV9 Web
| Edited By: |

Updated on: Apr 12, 2022 | 10:33 AM

Share

ಅವಿಶ್ವಾಸ ನಿರ್ಣಯ ಮಂಡನೆಯಾಗಿ, ಬಹುಮತ ಸಾಬೀತು ಸಾಧ್ಯವಾಗದೆ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿದ ಇಮ್ರಾನ್ ಖಾನ್​, ದೇಶದಲ್ಲಿ ಕೂಡಲೇ ಚುನಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಶೆಹಬಾಜ್​ ಶರೀಫ್​ ಪಾಕಿಸ್ತಾನದ 23ನೇ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಹೊತ್ತಲ್ಲಿ ಇಮ್ರಾನ್ ಖಾನ್ ಈ ಬೇಡಿಕೆ ಮುಂದಿಟ್ಟಿದ್ದಾರೆ. ಪಾಕಿಸ್ತಾನ ತೆಹ್ರೀಕ್​ ಇ ಇನ್ಸಾಫ್​ ಅಧ್ಯಕ್ಷರೂ ಆಗಿರುವ ಇಮ್ರಾನ್ ಖಾನ್​, ಈ ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂಬುದನ್ನು ಜನರ ನಿರ್ಧಾರಕ್ಕೆ ಬಿಡಬೇಕು. ಹೀಗಾಗಿ ಚುಣಾವಣೆ ನಡೆಯಬೇಕು ಎಂದಿದ್ದಾರೆ. ಏಪ್ರಿಲ್​ 13ರಂದು ಪೇಶಾವರದಲ್ಲಿ ರ್ಯಾಲಿ ನಡೆಸುವುದಾಗಿಯೂ ಹೇಳಿದ್ದಾರೆ. 

ಟ್ವೀಟ್ ಮಾಡಿರುವ ಇಮ್ರಾನ್ ಖಾನ್​, ದೇಶದಲ್ಲಿ ಶೀಘ್ರದಲ್ಲಿಯೇ ಚುನಾವಣೆ ನಡೆಸಬೇಕು. ಆಗಷ್ಟೇ ಪ್ರಧಾನಿ ಆಯ್ಕೆ ಪಾರದರ್ಶಕವಾಗಿ ನಡೆಯುತ್ತದೆ.  ಬುಧವಾರ ನಾನು ಪೇಶಾವರದಲ್ಲಿ ರ್ಯಾಲಿ ನಡೆಸುತ್ತೇನೆ. ವಿದೇಶಿ ಕುತಂತ್ರದ ಮೂಲಕ ನನ್ನನ್ನು ಹುದ್ದೆಯಿಂದ ಕೆಳಗೆ ಇಳಿಸಲಾದ ಬಳಿಕ ಇದು ನನ್ನ ಮೊದಲ ರ್ಯಾಲಿ. ನನ್ನ ರ್ಯಾಲಿಗೆ ನೀವೆಲ್ಲರೂ ಬನ್ನಿ. ಪಾಕಿಸ್ತಾನವನ್ನು ಸ್ವತಂತ್ರ, ಸಾರ್ವಭೌಮ ರಾಷ್ಟ್ರವಾಗಿ ನಿರ್ಮಾಣ ಮಾಡಲಾಗಿದೆ. ಅದು ವಿದೇಶಿ ಶಕ್ತಿಯ ಕೈಗೊಂಬೆಯಲ್ಲ ಎಂಬುದನ್ನು ತೋರಿಸಬೇಕು ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಇನ್ನು ಅಧಿಕಾರ ಕಳೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡಿದ್ದ ಇಮ್ರಾನ್ ಖಾನ್​, ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ಹೋರಾಟ ಮತ್ತೆ ಪ್ರಾರಂಭವಾಗಿದೆ ಎಂದು ಹೇಳಿದ್ದರು. ಅದಕ್ಕೂ ಮೊದಲು ಹುದ್ದೆಯಲ್ಲಿ ಮುಂದುವರಿಯಲು ಇಮ್ರಾನ್​ ಖಾನ್ ಇನ್ನಿಲ್ಲದ ಕಸರತ್ತು ಮಾಡಿದ್ದರು. ಆದರೆ ಸುಪ್ರೀಂಕೋರ್ಟ್​ ಆದೇಶದ ಅನ್ವಯ ಏಪ್ರಿಲ್​ 9ರ ಮಧ್ಯರಾತ್ರಿ ಇಮ್ರಾನ್​ ಖಾನ್​ ಬಹುಮತ ಸಾಬೀತು ಮಾಡಲು ಮುಂದಾದರು. ಆದರೆ ಅದು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ರೈಲಿನಲ್ಲಿ ಹೊಗೆಯೇಳುತ್ತಿದೆ ಎಂದು ಭಯಗೊಂಡು ಇಳಿದ ಪ್ರಯಾಣಿಕರಿಗೆ ಮತ್ತೊಂದು ಟ್ರೇನ್​​ ಡಿಕ್ಕಿ; ಐವರ ದುರ್ಮರಣ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ