AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಕೈಲಾಗದಿದ್ದರೆ ಸಿರಿಯಾ ನಿಭಾಯಿಸಲಿ; ಹೆಜ್ಬುಲ್ಲಾ ನಿಗ್ರಹಕ್ಕೆ ಟ್ರಂಪ್ ಐಡಿಯಾ

ಲೆಬನಾನ್‌ನ ಸಶಸ್ತ್ರ ಸಂಘಟನೆ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಸಂಘರ್ಷದ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ಹೆಜ್ಬುಲ್ಲಾ ಸಂಘಟನೆಯನ್ನು ಹತ್ತಿಕ್ಕುವ ನೆಪದಲ್ಲಿ ಇಸ್ರೇಲ್ ವ್ಯಾಪಕ ನಾಗರಿಕರ ಮಾರಣಹೋಮವನ್ನು ತಡೆಯಲು ಸಾಧ್ಯವಾಗದಿದ್ದರೆ, ಆ ಜವಾಬ್ದಾರಿಯನ್ನು ಸಿರಿಯಾ ದೇಶಕ್ಕೆ ಬಿಟ್ಟುಕೊಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿಗೆ ಟ್ರಂಪ್ ನೀಡಿರುವ ಈ ಹೊಸ ಸೂತ್ರವು ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಇಸ್ರೇಲ್ ಕೈಲಾಗದಿದ್ದರೆ ಸಿರಿಯಾ ನಿಭಾಯಿಸಲಿ; ಹೆಜ್ಬುಲ್ಲಾ ನಿಗ್ರಹಕ್ಕೆ ಟ್ರಂಪ್ ಐಡಿಯಾ
Donald Trump Image Credit source: AP
ಸುಷ್ಮಾ ಚಕ್ರೆ
|

Updated on: Jun 16, 2026 | 6:52 PM

Share

ವಾಷಿಂಗ್ಟನ್, ಜೂನ್ 16: ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನವನ್ನು ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ಅಲ್ಲಿ ಹೆಜ್ಬುಲ್ಲಾ ವಿರುದ್ಧ ಹೋರಾಡುವಲ್ಲಿ ಇಸ್ರೇಲ್‌ಗಿಂತ ಸಿರಿಯಾ ದೇಶವೇ ಉತ್ತಮ ಕೆಲಸ ಮಾಡಬಲ್ಲದು ಎಂದು ಪ್ರತಿಪಾದಿಸಿದ್ದಾರೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಕತಾರ್‌ನ ಎಮಿರ್ ಅವರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಟ್ರಂಪ್, ಇರಾನ್ ಬೆಂಬಲಿತ ಸಶಸ್ತ್ರ ಸಂಘಟನೆಯ ವಿರುದ್ಧ ಬೆಂಜಮಿನ್ ನೆತನ್ಯಾಹು ಅವರ ಮಿಲಿಟರಿ ಕಾರ್ಯಾಚರಣೆಯು ಇರಾನ್ ಜೊತೆಗಿನ ಶಾಂತಿ ಮಾತುಕತೆಗಳನ್ನು ಬಹುತೇಕ ಹಳಿ ತಪ್ಪಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಧ್ಯಪ್ರಾಚ್ಯದ ಪ್ರಸ್ತುತ ಪರಿಸ್ಥಿತಿಯ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸಾವುನೋವುಗಳು ಹೆಚ್ಚುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. “ಇಸ್ರೇಲ್ ತನ್ನ ಗಡಿಯಲ್ಲಿ ಸುರಕ್ಷತೆಯನ್ನು ಬಯಸುವುದು ಸರಯಾಗಿದೆ. ಆದರೆ, ಹೆಜ್ಬುಲ್ಲಾವನ್ನು ಮುಗಿಸುವ ಪ್ರಕ್ರಿಯೆಯಲ್ಲಿ ಅಮಾಯಕ ಜನರ ಹತ್ಯೆಗಳನ್ನು ತಪ್ಪಿಸಲು ಇಸ್ರೇಲ್‌ಗೆ ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಇಸ್ರೇಲ್ ಇದನ್ನು ನಿಯಂತ್ರಿಸಲು ವಿಫಲವಾದರೆ, ಹೆಜ್ಬುಲ್ಲಾವನ್ನು ಸಿರಿಯಾ ದೇಶವೇ ಹ್ಯಾಂಡಲ್ ಮಾಡಲು ಬಿಡುವುದು ಉತ್ತಮ. ಸಿರಿಯಾ ಮತ್ತು ಲೆಬನಾನ್ ನೆರೆಹೊರೆಯ ರಾಷ್ಟ್ರಗಳಾಗಿದ್ದು, ತಮ್ಮದೇ ಆದ ರೀತಿಯಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಲ್ಲವು.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯೇ ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ; ತಕ್ಷಣವೇ ಹಾರ್ಮುಜ್ ತೆರೆಯಲಾಗುವುದು ಎಂದ ಟ್ರಂಪ್

ಟ್ರಂಪ್ ಅವರ ಈ ನಿಲುವು ಸದ್ಯ ಅಮೆರಿಕ ಹೊಂದಿರುವ ವಿದೇಶಾಂಗ ನೀತಿಗಿಂತ ಸಂಪೂರ್ಣ ಭಿನ್ನವಾಗಿದೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಸರ್ಕಾರ, ಇರಾನ್ ಮತ್ತು ಹೆಜ್ಬುಲ್ಲಾ ಮೂರೂ ಒಟ್ಟಾಗಿ ಕೆಲಸ ಮಾಡುತ್ತವೆ. ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ಹೆಜ್ಬುಲ್ಲಾಗೆ ಇರಾನ್‌ನಿಂದ ಬರುವ ಶಸ್ತ್ರಾಸ್ತ್ರಗಳು ಸಿರಿಯಾ ಮೂಲಕವೇ ಸರಬರಾಜಾಗುತ್ತವೆ. ಹೀಗಿರುವಾಗ, “ಸಿರಿಯಾ ದೇಶವೇ ಹೆಜ್ಬುಲ್ಲಾವನ್ನು ನಿಭಾಯಿಸಲಿ” ಎಂದು ಟ್ರಂಪ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಅಮೆರಿಕವು ಮಧ್ಯಪ್ರಾಚ್ಯದ ಯುದ್ಧಗಳಲ್ಲಿ ನಿರಂತರವಾಗಿ ಹಣ ಮತ್ತು ಶಸ್ತ್ರಾಸ್ತ್ರಗಳನ್ನು ವ್ಯಯಿಸುವುದನ್ನು ನಿಲ್ಲಿಸಬೇಕು ಎಂಬುದು ಟ್ರಂಪ್ ಅವರ ‘ಅಮೆರಿಕಾ ಫಸ್ಟ್’ ನೀತಿಯಾಗಿದೆ. ಪ್ರಾದೇಶಿಕ ಬಿಕ್ಕಟ್ಟುಗಳನ್ನು ಅಲ್ಲಿನ ಸ್ಥಳೀಯ ರಾಷ್ಟ್ರಗಳೇ ಬಗೆಹರಿಸಿಕೊಳ್ಳಲಿ, ಇದರಲ್ಲಿ ಅಮೆರಿಕ ನೇರವಾಗಿ ಭಾಗಿಯಾಗಬಾರದು ಎಂಬ ಸಂದೇಶವನ್ನು ಅವರು ನೀಡುತ್ತಿದ್ದಾರೆ. ಇಸ್ರೇಲ್‌ನ ಆಪ್ತ ಮಿತ್ರ ರಾಷ್ಟ್ರವಾಗಿದ್ದರೂ, ಯುದ್ಧದಿಂದಾಗಿ ಜಾಗತಿಕವಾಗಿ ಇಸ್ರೇಲ್ ಅನುಭವಿಸುತ್ತಿರುವ ಮಾನವೀಯ ಬಿಕ್ಕಟ್ಟಿನ ಅಪಕೀರ್ತಿಯಿಂದ ದೂರವಿರಲು ಟ್ರಂಪ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ಜಿ7 ಶೃಂಗಸಭೆ: ಫ್ರಾನ್ಸ್‌ಗೆ ಪ್ರಧಾನಿ ಮೋದಿ ಭೇಟಿ, ಇಂದು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಹತ್ವದ ಮಾತುಕತೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಚೌಕಟ್ಟು ಸಿದ್ಧವಾದ ಮರುದಿನವೇ ಈ ಹೇಳಿಕೆ ಬಂದಿದ್ದು, ಇದು ಇಸ್ರೇಲ್‌ಗೆ ನೀಡಿದ ನೇರ ಪೆಟ್ಟಾಗಿದೆ. ಈ ಶಾಂತಿ ಒಪ್ಪಂದವು ಲೆಬನಾನ್‌ನಲ್ಲಿನ ಮಿಲಿಟರಿ ಕಾರ್ಯಾಚರಣೆಗಳ ಅಂತ್ಯವನ್ನೂ ಒಳಗೊಂಡಿದೆ ಎಂದು ಇರಾನ್ ಮತ್ತು ಪಾಕಿಸ್ತಾನ ಪ್ರತಿಪಾದಿಸುತ್ತಿವೆ. ಇದು ಇಸ್ರೇಲ್‌ನ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ