AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Libya Desert: ಲಿಬಿಯಾ ಮರುಭೂಮಿಯಲ್ಲಿ ಬಾಯಾರಿಕೆಯಿಂದ 20 ಮಂದಿ ವಲಸಿಗರು ಸಾವು

ಲಿಬಿಯಾ ಮರುಭೂಮಿ (Libya Desert)ಯಲ್ಲಿ ಬಾಯಾರಿಕೆಯಿಂದ 20 ಮಂದಿ ವಲಸಿಗರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಛಾಡ್ ಗಡಿಯಲ್ಲಿ ಈ ಘಟನೆ ನಡೆದಿದೆ.

Libya Desert: ಲಿಬಿಯಾ ಮರುಭೂಮಿಯಲ್ಲಿ ಬಾಯಾರಿಕೆಯಿಂದ 20 ಮಂದಿ ವಲಸಿಗರು ಸಾವು
Libya DesertImage Credit source: Reuters
TV9 Web
| Edited By: |

Updated on: Jun 30, 2022 | 12:25 PM

Share

ಲಿಬಿಯಾ ಮರುಭೂಮಿ (Libya Desert)ಯಲ್ಲಿ ಬಾಯಾರಿಕೆಯಿಂದ 20 ಮಂದಿ ವಲಸಿಗರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಛಾಡ್ ಗಡಿಯಲ್ಲಿ ಈ ಘಟನೆ ನಡೆದಿದೆ. ಮೃತರು ವಲಸಿಗರು ಎಂದು ಗುರುತಿಸಲಾಗಿದೆ, 320 ಕಿಲೋಮೀಟರ್ ದೂರದಲ್ಲಿರುವ ಕುಫ್ರಾದಿಂದ ಕಪ್ಪು ಪಿಕಪ್ ಟ್ರಕ್ ಒಂದು ಬಂದಿತ್ತು, ಆ ಟ್ರಕ್​ನಲ್ಲಿದ್ದ 20 ಮಂದಿ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.

20 ಮಂದಿ ತೆರಳುತ್ತಿದ್ದ ವಾಹನವು ಮಾರ್ಗಮಧ್ಯದಲ್ಲಿ ಕೈಕೊಟ್ಟಿತ್ತು, ಬಳಿಕ ತಮ್ಮ ಗುರಿ ಮುಟ್ಟಲಾಗದೆ ಹಿಂದಿರುಗಿಯೂ ಹೋಗಲಾಗದೆ, ಬಾಯಾರಿಕೆ, ಹಸಿವಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಟ್ರಕ್ ಚಾಲಕರೊಬ್ಬರು ಕೆಟ್ಟು ನಿಂತಿರುವ ಟ್ರಕ್ ಗಮನಿಸಿದ್ದಾರೆ, ಬಳಿಕ ಹತ್ತಿರ ಹೋಗಿ ನೋಡಿದಾಗ ಶವಗಳು ಕಣ್ಣಿಗೆ ಬಿದ್ದಿವೆ.

14 ದಿನಗಳ ಹಿಂದೆಯೇ ಇವರೆಲ್ಲರೂ ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಅವರ ಮೊಬೈಲ್ ಗಮನಿಸಿದಾಗ ಜೂನ್ 13ರಂದು ಕೊನೆಯ ಕರೆ ಮಾಡಲಾಗಿತ್ತು.

ಮತ್ತೊಂದು ಪ್ರಕರಣದಲ್ಲಿ, ಲಿಬಿಯಾ ಕರಾವಳಿಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 30 ಮಂದಿ ಹಡಗಿನಲ್ಲಿ ತೆರಳುತ್ತಿದ್ದಾಗ ಮೆಡಿಟರೇನಿಯನ್ ಸಮುದ್ರದಲ್ಲಿ ಮುಳುಗಿದ್ದಾರೆ. ಡಜನ್​ಗೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದ್ದು, ಮಹಿಳೆಯರು ಹಾಗೂ ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿದ್ದು, ಮೃತಪಟ್ಟಿರುವ ಕುರಿತು ಶಂಕೆ ವ್ಯಕ್ತವಾಗಿದೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು