AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಡೇನಿಯನ್ ಚಂಡಮಾರುತ, ಭಾರಿ ಪ್ರವಾಹಕ್ಕೆ ಸಿಲುಕಿ 2 ಸಾವಿರಕ್ಕೂ ಅಧಿಕ ಮಂದಿ ಸಾವು, ಸಾವಿರಾರು ಮಂದಿ ನಾಪತ್ತೆ

ಲಿಬಿಯಾದಲ್ಲಿ ಸಂಭವಿಸಿದ ಡೇನಿಯಲ್ ಚಂಡಮಾರುತ ಹಾಗೂ ಭಾರಿ ಪ್ರವಾಹಕ್ಕೆ ಸಿಲುಕಿ 2 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ. ಡೇನಿಯಲ್ ಚಂಡಮಾರುತದ ನಂತರ ಪ್ರವಾಹವು ವಿನಾಶವನ್ನುಂಟು ಮಾಡಿದ್ದು ಅದನ್ನು ವಿಪತ್ತು ಪ್ರದೇಶವೆಂದು ಘೋಷಿಸಲಾಗಿದೆ. ಮೆಡಿಟರೇನಿಯನ್ ಚಂಡಮಾರುತ ಡೇನಿಯಲ್ ಲಿಬಿಯಾದಲ್ಲಿ ವಿನಾಶಕಾರಿ ಪ್ರವಾಹಕ್ಕೆ ಕಾರಣವಾಯಿತು.

ಲಿಬಿಯಾದಲ್ಲಿ ಡೇನಿಯನ್ ಚಂಡಮಾರುತ, ಭಾರಿ ಪ್ರವಾಹಕ್ಕೆ ಸಿಲುಕಿ 2 ಸಾವಿರಕ್ಕೂ ಅಧಿಕ ಮಂದಿ ಸಾವು, ಸಾವಿರಾರು ಮಂದಿ ನಾಪತ್ತೆ
ಲಿಬಿಯಾ
ನಯನಾ ರಾಜೀವ್
|

Updated on: Sep 12, 2023 | 9:30 AM

Share

ಲಿಬಿಯಾದಲ್ಲಿ ಸಂಭವಿಸಿದ ಡೇನಿಯಲ್ ಚಂಡಮಾರುತ ಹಾಗೂ ಭಾರಿ ಪ್ರವಾಹಕ್ಕೆ ಸಿಲುಕಿ 2 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ. ಡೇನಿಯಲ್ ಚಂಡಮಾರುತದ ನಂತರ ಪ್ರವಾಹವು ವಿನಾಶವನ್ನುಂಟು ಮಾಡಿದ್ದು ಅದನ್ನು ವಿಪತ್ತು ಪ್ರದೇಶವೆಂದು ಘೋಷಿಸಲಾಗಿದೆ. ಮೆಡಿಟರೇನಿಯನ್ ಚಂಡಮಾರುತ ಡೇನಿಯಲ್ ಲಿಬಿಯಾದಲ್ಲಿ ವಿನಾಶಕಾರಿ ಪ್ರವಾಹಕ್ಕೆ ಕಾರಣವಾಯಿತು.

ಇದರಿಂದಾಗಿ ಅಣೆಕಟ್ಟುಗಳು ಒಡೆಯುತ್ತವೆ ಮತ್ತು ಉತ್ತರ ಆಫ್ರಿಕಾದ ರಾಷ್ಟ್ರದ ಪೂರ್ವದಲ್ಲಿರುವ ಹಲವಾರು ಕರಾವಳಿ ನಗರಗಳ ಸಂಪೂರ್ಣ ಪ್ರದೇಶಗಳು ಕೊಚ್ಚಿಹೋಗಿವೆ. ಡರ್ನಾದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಪೂರ್ವದ ಬೈಡಾ ನಗರದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ನಗರದ ಮುಖ್ಯ ವೈದ್ಯಕೀಯ ಕೇಂದ್ರದ ಮುಖ್ಯಸ್ಥ ಅಬ್ದೆಲ್-ರಹೀಮ್ ಮಜೆಕ್ ಈ ಮಾಹಿತಿ ನೀಡಿದರು.

ಈಶಾನ್ಯ ಲಿಬಿಯಾದ ಕರಾವಳಿ ನಗರವಾದ ಸುಸಾದಲ್ಲಿ ಇತರ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶಾಹತ್ ಮತ್ತು ಒಮರ್ ಅಲ್-ಮೊಕ್ತಾರ್ ನಗರಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಒಸಾಮಾ ಅಬ್ದುಲ್ಜಲೀಲ್ ಹೇಳಿದ್ದಾರೆ. ಡರ್ನಾದಲ್ಲಿ 5 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರಧಾನಿ ಸೋಮವಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದರು. ದೇಶಾದ್ಯಂತ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಯಿತು.

ಮತ್ತಷ್ಟು ಓದಿ: Viral Video: ಭೀಕರ ಚಂಡಮಾರುತಕ್ಕೆ ಸಿಲುಕಿ ಗಾಳಿಯಲ್ಲಿ ಹಾರಿ ಹೋದ ಜನರು, ಭಯಾನಕ ವಿಡಿಯೋ

ಡೇನಿಯಲ್ ಚಂಡಮಾರುತವು ಭಾನುವಾರ ಮತ್ತು ಸೋಮವಾರದಂದು ಬೆಂಗಾಜಿ, ಸುಸಾ, ಬೈಡಾ, ಅಲ್-ಮಾರ್ಜ್ ಮತ್ತು ಡರ್ನಾ ನಗರಗಳ ಮೇಲೆ ಪರಿಣಾಮ ಬೀರಿತು. ಡರ್ನಾ ಹೊರತುಪಡಿಸಿ, ಪೂರ್ವ ನಗರವಾದ ಬೈಡಾದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈಶಾನ್ಯ ಲಿಬಿಯಾದ ಸುಸಾ ನಗರದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಶಾಹತ್ ಮತ್ತು ಒಮರ್ ಅಲ್-ಮೊಖ್ತಾರ್ ನಗರಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!