ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ

ಡೇನಿಯಲ್ ಚಂಡಮಾರುತ ಹಾಗೂ ಭಾರಿ ಪ್ರವಾಹಕ್ಕೆ ಲಿಬಿಯಾ ದೇಶದ ಜನರು ತತ್ತರಿಸಿದ್ದಾರೆ. ಮಹಾ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದೆ. ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿವೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ
ಲಿಬಿಯಾದ ಡೆರ್ನಾದಲ್ಲಿ ಹಾನಿಯನ್ನು ವೀಕ್ಷಿಸುತ್ತಿರುವ ವ್ಯಕ್ತಿImage Credit source: Reuters
Follow us
|

Updated on:Sep 14, 2023 | 9:12 AM

ಟ್ರಿಪೋಲಿ, ಸೆ.14: ಲಿಬಿಯಾ ದೇಶದಲ್ಲಿ ಅಬ್ಬರಿಸಿದ ಭೀಕರ ಡೇನಿಯಲ್ ಚಂಡಮಾರುತ (Daniel cyclone) ಹಾಗೂ ಪ್ರವಾಹಕ್ಕೆ (Flood) ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದ್ದು, ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿದೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಸಾವಿರಾರು ಜನರನ್ನು ಬಲಿತೆಗೆದುಕೊಂಡ ಮತ್ತು ಅನೇಕರು ಸಮುದ್ರಕ್ಕೆ ಕೊಚ್ಚಿಕೊಂಡು ಹೋದ ಭೀಕರ ಪ್ರವಾಹದ ನಂತರ, ಹಾನಿಗೊಳಗಾದ ಲಿಬಿಯಾದ ನಗರ ಡೆರ್ನಾದ ನಿವಾಸಿಗಳು ಕಾಣೆಯಾದ ತಮ್ಮ ಸಂಬಂಧಿಕರಿಗಾಗಿ ತೀವ್ರ ಹುಡುಕಾಡುತ್ತಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಕಟ್ಟಡ ಹಾಗೂ ಸಮುದ್ರ ತೀರದಿಂದ ಶವಗಳನ್ನು ಹೊರತೆಗೆಯುತ್ತಿದ್ದಾರೆ.

ಇದನ್ನೂ ಓದಿ: ಜೀವಂತವಾಗಿರಲು ಟಾಯ್ಲೆಟ್​ನ ನೀರು ಕುಡಿದಿದ್ದೆವು, 6 ತಿಂಗಳ ಬಳಿಕ ಲಿಬಿಯಾದಿಂದ ಹಿಂದಿರುಗಿದ ಭಾರತೀಯರ ಮಾತು

ಡೆರ್ನಾ ಮತ್ತು ಪ್ರವಾಹ ಪೀಡಿತ ಇತರ ಪಟ್ಟಣಗಳಲ್ಲಿನ ಸುಮಾರು 40,000 ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಭೀಕರ ಪ್ರವಾಹಕ್ಕೆ ತತ್ತರಿಸಿದ ಲಿಬಿಯಾಕ್ಕೆ ವಿವಿಧ ದೇಶಗಳು ನೆರವಿನ ಹಸ್ತ ಚಾಚಿದ್ದು, ಜನರ ರಕ್ಷಣೆಗೆ ಮುಂದೆ ಬಂದಿವೆ.

ಡೇನಿಯಲ್ ಚಂಡಮಾರುತವು ಭಾನುವಾರ ಮತ್ತು ಸೋಮವಾರದಂದು ಬೆಂಗಾಜಿ, ಸುಸಾ, ಬೈಡಾ, ಅಲ್-ಮಾರ್ಜ್ ಮತ್ತು ಡರ್ನಾ ನಗರಗಳ ಮೇಲೆ ಪರಿಣಾಮ ಬೀರಿತ್ತು. ಸದ್ಯ ಸಾವಿರಾರು ಮಂದಿ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 am, Thu, 14 September 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ